Advertisement
ಕೃಷಿ

#ಗ್ರಾಮವಿಕಾಸ | ಲಾಕ್ಡೌನ್ ನಂತರ ಸುಳ್ಯದಲ್ಲಿ ಸ್ವಾವಲಂಬನೆಯ ಹೆಜ್ಜೆ | ಇದು ಆತ್ಮನಿರ್ಭರ ಭಾರತದ ಹೆಜ್ಜೆ |

Share
ಇದೊಂದು ಕ್ರಾಂತಿಕಾರಕ ಹೆಜ್ಜೆ…!. ಲಾಕ್ಡೌನ್ ನಂತರ ಕೈಗೊಂಡ ಸ್ವಾವಲಂಬನೆಯ ಪಥದ ಹೆಜ್ಜೆ. ಆತ್ಮನಿರ್ಭರ ಭಾರತದ ಕಡೆಗಿನ ಹೆಜ್ಜೆ ಇದು. ಸುಳ್ಯ ತಾಲೂಕಿನ ಸುಮಾರು 6000 ಕುಟುಂಬಗಳು ತರಕಾರಿಯಲ್ಲಿ  ಸ್ವಾವಲಂಬನೆಯನ್ನು  ಹೊಂದಲಿದೆ. ಸುಳ್ಯ ತಾಲೂಕಿನ ಗ್ರಾಮ ವಿಕಾಸ ಸಮಿತಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಆಶ್ರಯದಲ್ಲಿ ತರಕಾರಿ ಬೀಜ ವಿತರಣೆಯಾಗಿ ತರಕಾರಿ ಕೃಷಿ ಈ ಮಳೆಗಾಲ ಕಾಣಲಿದೆ. ಉಳಿದ ತರಕಾರಿಗಳು ಸಹಕಾರಿ ಸಂಘಗಳ ಮೂಲಕ, ಸ್ಥಳೀಯ ಅಂಗಡಿಗಳ ಮೂಲಕ ಜನರಿಗೂ ಸಿಗಲಿದೆ.

ಸುಳ್ಯ ತಾಲೂಕಿನಲ್ಲಿ  ಗ್ರಾಮ ವಿಕಾಸ ಸಮಿತಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಆಶ್ರಯದಲ್ಲಿ  ಈ ಬಾರಿ ತರಕಾರಿ ಬೀಜಗಳ ವಿತರಣೆ ನಡೆಯಲಿದೆ.ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ನಡೆದಿದ್ದು ತರಕಾರಿ ಬೀಜಗಳ ಸಂಗ್ರಹ ನಡೆದಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಆಸಕ್ತ ಕೃಷಿಕರು ತರಕಾರಿ ಬೀಜವನ್ನು ಬಿತ್ತುವಂತೆ ಹಾಗೂ ತರಕಾರಿ ಬೆಳೆಯನ್ನು  ಬೆಳೆಯುವಂತೆ ಉತ್ತೇಜನ ನೀಡಲಾಗಿದೆ. ಆತ್ಮನಿರ್ಭರ ಭಾರತ ಹೆಜ್ಜೆಯಾಗಿರುವ ಈ ಯೋಜನೆಯಲ್ಲಿ ಆಸಕ್ತ ಕೃಷಿಕರು ತೊಡಗಿಸಿಕೊಳ್ಳಬಹುದಾಗಿದೆ. ಮುಖ್ಯವಾಗಿ ಅಲಸಂಡೆ, ಪಡುವಲಕಾಯಿ, ಹಾಗಲಕಾಯಿ, ಬೆಂಡೆಕಾಯಿ, ಸೋರೆಕಾಯಿ, ಬದನೆ, ಚೀನೀಕಾಯಿ ಸೇರಿದಂತೆ ವಿವಿಧ ತರಕಾರಿ ಬೀಜಗಳು ಲಭ್ಯವಾಗಲಿದೆ.  ಗುಣಮಟ್ಟದ ತರಕಾರಿ ಬೀಜಗಳನ್ನೇ ಆಯ್ಕೆ ಮಾಡಲಾಗಿದ್ದು ಜೂ.8 ರ ಬಳಿಕ ವಿವಿಧ ಸಹಕಾರಿ ಸಂಘ ಹಾಗೂ ಗ್ರಾಮ ವಿಕಾಸ ಸಮಿತಿಗಳ ಆಶ್ರಯದಲ್ಲಿ  ಕೃಷಿಕರಿಗೆ ವಿತರಣೆಯಾಗಲಿದೆ. ಈಗಿನ ಅಂದಾಜು ಪ್ರಕಾರ ತಾಲೂಕಿನ ಸುಮಾರು 6000 ಕುಟುಂಬಗಳಿಗೆ ತರಕಾರಿ ಬೀಜ ವಿತರಣೆ ಮಾಡುವ ಗುರಿ ಹೊಂದಲಾಗಿದೆ.  ಇದಕ್ಕಾಗಿ ಸಹಕಾರಿ ಸಂಘಗಳೂ ಸಹಕಾರ ನೀಡಲಿದೆ.

ಜೂ.8 ರಂದು ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಗ್ರಾಮ ವಿಕಾಸ ಸಮಿತಿ ಸುಳ್ಯ ಮತ್ತು ಅಜ್ಜಾವರ ಆಶ್ರಯದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮ  ಸುಳ್ಯ ಸಿಎ ಬ್ಯಾಂಕ್ ವಠಾರದಲ್ಲಿ ನಡೆಯಲಿದೆ. ಶಾಸಕ ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ತಾಲೂಕಿನಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ಆಯಾ ಗ್ರಾಮದ ಸಹಕಾರಿ ಸಂಘ ಮತ್ತು ಗ್ರಾಮ ವಿಕಾಸ ಸಮಿತಿಯ ವತಿಯಿಂದ ತರಕಾರಿ ಬೀಜ ವಿತರಣೆ ನಡೆಯುವುದು.

ತರಕಾರಿ ಬೆಳೆಯು ಕೃಷಿಕರಿಗೆ ಸ್ವಾವಲಂಬನೆಯ ದಾರಿಯನ್ನು  ಹೇಳುವುದಲ್ಲದೆ ಉತ್ತಮ ಆದಾಯವನ್ನೂ ತರಬಲ್ಲುದು. ಆತ್ಮನಿರ್ಭರ ಭಾರತದ ಉದ್ದೇಶಕ್ಕೂ ಪೂರಕವಾಗಲಿದೆ. ಕೃಷಿಕರು ತರಕಾರಿ ಬೆಳೆದು ತಾವು ಉಪಯೋಗಿಸಿ ಹೆಚ್ಚಾಗಿರುವ ತರಕಾರಿಯನ್ನು ಮಾರಾಟ ಮಾಡಲು ಕೂಡಾ ಅವಕಾಶವೂ ಸಿಗಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

3 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

3 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

21 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago