MIRROR FOCUS

ಗ್ರಾಮೀಣ ಜನರಿಗೆ ಸಂತಸದ ಸುದ್ದಿ : ಬಿ ಎಸ್ ಎನ್ ಎಲ್ ಪುನರುಜ್ಜೀವನದ ನಿರೀಕ್ಷೆ……

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮೀಣ ಭಾಗದ ಜನರ ಪ್ರಮುಖವಾದ ಸಂಪರ್ಕ ವ್ಯವಸ್ಥೆ ಬಿ ಎಸ್ ಎನ್ ಎಲ್ ಪುನರುಜ್ಜೀವನಗೊಳ್ಳುವ ನಿರೀಕ್ಷೆ ಇದೆ. ಹಣಕಾಸು ಸಚಿವಾಲಯ ಮತ್ತು ಪ್ರಧಾನ ಮಂತ್ರಿ ಕಚೇರಿ 50,000 ಕೋಟಿ ರೂಪಾಯಿ ನೀಡಲು ಮುಂದಾಗಿದೆ ಎಂಬ ಸುಳಿವು ಲಭ್ಯವಾಗಿದ್ದು ಮುಂದಿನ ವಾರ ಈ ಬಗ್ಗೆ ಕೇಂದ್ರ ಸರಕಾರದಲ್ಲಿ ಚರ್ಚೆಯಾಗಲಿದೆ. ಹೀಗಾಗಿ ಮತ್ತೆ ಬಿ ಎಸ್ ಎನ್ ಎಲ್ ಸುಧಾರಣೆಯ ಹಾದಿಯತ್ತ ಸಾಗಲಿದೆ.

Advertisement

ಇದೇ ವೇಳೆ ವೇತನವೂ ಬಿ ಎಸ್ ಎನ್ ಎಲ್ ನೌಕರರಿಗೆ ಸಿಗಲಿದೆ. ಸೆಪ್ಟೆಂಬರ್ ತಿಂಗಳ ಸಂಬಳ  ದೀಪಾವಳಿಗೂ ಮುನ್ನವೇ ನೌಕರರಿಗೆ ಸಿಗಲಿದೆ. ದೀಪಾವಳಿ ಹಬ್ಬದ ಮೊದಲು ಕಂಪನಿಯು ತನ್ನ ಸಂಪನ್ಮೂಲಗಳ ಮೂಲಕ ನೌಕರರಿಗೆ ಸಂಬಳ ನೀಡಲಿದೆ ಎಂದು ಬಿಎಸ್‌ಎನ್‌ಎಲ್ ಅಧ್ಯಕ್ಷರು ಹೇಳಿದ್ದಾರೆ.  ವಿಆರ್‌ಎಸ್ ಯೋಜನೆಯ ಬಗ್ಗೆ ಇದೇ ವೇಳೆ ಒಪ್ಪಂದಕ್ಕೆ ಬರುವ ನಿರೀಕ್ಷೆಯಿದೆ. ಕಂಪನಿ ಪ್ರತಿ ತಿಂಗಳು 1,600 ಕೋಟಿ ಗಳಿಸುತ್ತಿದೆ. ಅದೇ ಸಮಯದಲ್ಲಿ ನೌಕರರಿಗೆ ಸಂಬಳ ನೀಡಲು ಕಂಪನಿ 850 ಕೋಟಿ ರೂಪಾಯಿ ವೆಚ್ಚ  ಮಾಡುತ್ತಿದೆ.

ಇಲ್ಲಿ ವೇತಕ್ಕೆ ಅಧಿಕ ಖರ್ಚಾಗುತ್ತಿದೆ. ಅದೇ ಮಾದರಿಯ ಕೆಲಸಗಳು ನಡೆಯುತ್ತಿಲ್ಲ ಎಂಬ ಕಾರಣದಿಂದಲೇ ಬಿ ಎಸ್ ಎನ್ ಎಲ್ ಕಡೆಗೆ ಆಸಕ್ತಿ ಕಡಿಮೆಯಾಗಿತ್ತು. ಖಾಸಗಿ ಕಂಪನಿಗೆ ಪೈಪೋಟಿ ನೀಡಲು ಕಾರ್ಯತತ್ಪರತೆಯೂ ಅಗತ್ಯವಾಗಿತ್ತು. ಅಧಿಕ ಸಂಬಳ ಪಡೆದರೂ, ಸರಕಾರ ನೀಡಿದರೂ ಅದೇ ಮಾದರಿಯಲ್ಲಿ ಕೆಲಸಗಳು , ಸರಕಾರದ ನಿಯಮಗಳಲ್ಲಿ ಬದಲಾವಣೆ ಆಗದೇ ಇರುವುದು, ಹಿರಿಯ ಅಧಿಕಾರಿಗಳ ನಿರಾಸಕ್ತಿ, ಖಾಸಗಿ ಕಂಪನಿಗಳೊಂದಿಗೆ ಒಳ ಒಪ್ಪಂದ   ಬಿ ಎಸ್ ಎನ್ ಎಲ್ ಹಿಂದೆ ಉಳಿಯಲು ಕಾರಣವಾದರೆ, ಖಾಸಗಿ ಕಂಪನಿಗಳಿಗೆ ಪೈಪೋಟಿ ನೀಡಲು ಶಕ್ತವಾಗಲಿಲ್ಲ ಎಂಬ ವಿಶ್ಲೇಷಣೆ ಹಿರಿಯ ತಜ್ಞರಿಂದ ನಡೆದಿತ್ತು. ಇದೀಗ ಕೇಂದ್ರ ಸರಕಾರವು ಮತ್ತೆ ಬಿ ಎಸ್ ಎನ್ ಎಲ್ ಸುಧಾರಣೆಯತ್ತ ಮುಖ ಮಾಡಿರುವುದು ಗ್ರಾಮೀಣ ಭಾಗದ ಜನರಿಗೆ ಸಂಪರ್ಕ ವ್ಯವಸ್ಥೆ ಸುಧಾರಣೆಯಾಗುವ ನಿರೀಕ್ಷೆ ಮೂಡಿಸಿದೆ.

 

Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

5 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

5 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

5 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

15 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago

ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…

1 day ago