MIRROR FOCUS

ಗ್ರಾಮೀಣ ಜನರಿಗೆ ಸಂತಸದ ಸುದ್ದಿ : ಬಿ ಎಸ್ ಎನ್ ಎಲ್ ಪುನರುಜ್ಜೀವನದ ನಿರೀಕ್ಷೆ……

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮೀಣ ಭಾಗದ ಜನರ ಪ್ರಮುಖವಾದ ಸಂಪರ್ಕ ವ್ಯವಸ್ಥೆ ಬಿ ಎಸ್ ಎನ್ ಎಲ್ ಪುನರುಜ್ಜೀವನಗೊಳ್ಳುವ ನಿರೀಕ್ಷೆ ಇದೆ. ಹಣಕಾಸು ಸಚಿವಾಲಯ ಮತ್ತು ಪ್ರಧಾನ ಮಂತ್ರಿ ಕಚೇರಿ 50,000 ಕೋಟಿ ರೂಪಾಯಿ ನೀಡಲು ಮುಂದಾಗಿದೆ ಎಂಬ ಸುಳಿವು ಲಭ್ಯವಾಗಿದ್ದು ಮುಂದಿನ ವಾರ ಈ ಬಗ್ಗೆ ಕೇಂದ್ರ ಸರಕಾರದಲ್ಲಿ ಚರ್ಚೆಯಾಗಲಿದೆ. ಹೀಗಾಗಿ ಮತ್ತೆ ಬಿ ಎಸ್ ಎನ್ ಎಲ್ ಸುಧಾರಣೆಯ ಹಾದಿಯತ್ತ ಸಾಗಲಿದೆ.

Advertisement

ಇದೇ ವೇಳೆ ವೇತನವೂ ಬಿ ಎಸ್ ಎನ್ ಎಲ್ ನೌಕರರಿಗೆ ಸಿಗಲಿದೆ. ಸೆಪ್ಟೆಂಬರ್ ತಿಂಗಳ ಸಂಬಳ  ದೀಪಾವಳಿಗೂ ಮುನ್ನವೇ ನೌಕರರಿಗೆ ಸಿಗಲಿದೆ. ದೀಪಾವಳಿ ಹಬ್ಬದ ಮೊದಲು ಕಂಪನಿಯು ತನ್ನ ಸಂಪನ್ಮೂಲಗಳ ಮೂಲಕ ನೌಕರರಿಗೆ ಸಂಬಳ ನೀಡಲಿದೆ ಎಂದು ಬಿಎಸ್‌ಎನ್‌ಎಲ್ ಅಧ್ಯಕ್ಷರು ಹೇಳಿದ್ದಾರೆ.  ವಿಆರ್‌ಎಸ್ ಯೋಜನೆಯ ಬಗ್ಗೆ ಇದೇ ವೇಳೆ ಒಪ್ಪಂದಕ್ಕೆ ಬರುವ ನಿರೀಕ್ಷೆಯಿದೆ. ಕಂಪನಿ ಪ್ರತಿ ತಿಂಗಳು 1,600 ಕೋಟಿ ಗಳಿಸುತ್ತಿದೆ. ಅದೇ ಸಮಯದಲ್ಲಿ ನೌಕರರಿಗೆ ಸಂಬಳ ನೀಡಲು ಕಂಪನಿ 850 ಕೋಟಿ ರೂಪಾಯಿ ವೆಚ್ಚ  ಮಾಡುತ್ತಿದೆ.

ಇಲ್ಲಿ ವೇತಕ್ಕೆ ಅಧಿಕ ಖರ್ಚಾಗುತ್ತಿದೆ. ಅದೇ ಮಾದರಿಯ ಕೆಲಸಗಳು ನಡೆಯುತ್ತಿಲ್ಲ ಎಂಬ ಕಾರಣದಿಂದಲೇ ಬಿ ಎಸ್ ಎನ್ ಎಲ್ ಕಡೆಗೆ ಆಸಕ್ತಿ ಕಡಿಮೆಯಾಗಿತ್ತು. ಖಾಸಗಿ ಕಂಪನಿಗೆ ಪೈಪೋಟಿ ನೀಡಲು ಕಾರ್ಯತತ್ಪರತೆಯೂ ಅಗತ್ಯವಾಗಿತ್ತು. ಅಧಿಕ ಸಂಬಳ ಪಡೆದರೂ, ಸರಕಾರ ನೀಡಿದರೂ ಅದೇ ಮಾದರಿಯಲ್ಲಿ ಕೆಲಸಗಳು , ಸರಕಾರದ ನಿಯಮಗಳಲ್ಲಿ ಬದಲಾವಣೆ ಆಗದೇ ಇರುವುದು, ಹಿರಿಯ ಅಧಿಕಾರಿಗಳ ನಿರಾಸಕ್ತಿ, ಖಾಸಗಿ ಕಂಪನಿಗಳೊಂದಿಗೆ ಒಳ ಒಪ್ಪಂದ   ಬಿ ಎಸ್ ಎನ್ ಎಲ್ ಹಿಂದೆ ಉಳಿಯಲು ಕಾರಣವಾದರೆ, ಖಾಸಗಿ ಕಂಪನಿಗಳಿಗೆ ಪೈಪೋಟಿ ನೀಡಲು ಶಕ್ತವಾಗಲಿಲ್ಲ ಎಂಬ ವಿಶ್ಲೇಷಣೆ ಹಿರಿಯ ತಜ್ಞರಿಂದ ನಡೆದಿತ್ತು. ಇದೀಗ ಕೇಂದ್ರ ಸರಕಾರವು ಮತ್ತೆ ಬಿ ಎಸ್ ಎನ್ ಎಲ್ ಸುಧಾರಣೆಯತ್ತ ಮುಖ ಮಾಡಿರುವುದು ಗ್ರಾಮೀಣ ಭಾಗದ ಜನರಿಗೆ ಸಂಪರ್ಕ ವ್ಯವಸ್ಥೆ ಸುಧಾರಣೆಯಾಗುವ ನಿರೀಕ್ಷೆ ಮೂಡಿಸಿದೆ.

 

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

17 hours ago

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

19 hours ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

23 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

23 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

24 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

24 hours ago