Advertisement
MIRROR FOCUS

ಗ್ರಾಮೀಣ ಜನರಿಗೆ ಸಂತಸದ ಸುದ್ದಿ : ಬಿ ಎಸ್ ಎನ್ ಎಲ್ ಪುನರುಜ್ಜೀವನದ ನಿರೀಕ್ಷೆ……

Share

ಗ್ರಾಮೀಣ ಭಾಗದ ಜನರ ಪ್ರಮುಖವಾದ ಸಂಪರ್ಕ ವ್ಯವಸ್ಥೆ ಬಿ ಎಸ್ ಎನ್ ಎಲ್ ಪುನರುಜ್ಜೀವನಗೊಳ್ಳುವ ನಿರೀಕ್ಷೆ ಇದೆ. ಹಣಕಾಸು ಸಚಿವಾಲಯ ಮತ್ತು ಪ್ರಧಾನ ಮಂತ್ರಿ ಕಚೇರಿ 50,000 ಕೋಟಿ ರೂಪಾಯಿ ನೀಡಲು ಮುಂದಾಗಿದೆ ಎಂಬ ಸುಳಿವು ಲಭ್ಯವಾಗಿದ್ದು ಮುಂದಿನ ವಾರ ಈ ಬಗ್ಗೆ ಕೇಂದ್ರ ಸರಕಾರದಲ್ಲಿ ಚರ್ಚೆಯಾಗಲಿದೆ. ಹೀಗಾಗಿ ಮತ್ತೆ ಬಿ ಎಸ್ ಎನ್ ಎಲ್ ಸುಧಾರಣೆಯ ಹಾದಿಯತ್ತ ಸಾಗಲಿದೆ.

ಇದೇ ವೇಳೆ ವೇತನವೂ ಬಿ ಎಸ್ ಎನ್ ಎಲ್ ನೌಕರರಿಗೆ ಸಿಗಲಿದೆ. ಸೆಪ್ಟೆಂಬರ್ ತಿಂಗಳ ಸಂಬಳ  ದೀಪಾವಳಿಗೂ ಮುನ್ನವೇ ನೌಕರರಿಗೆ ಸಿಗಲಿದೆ. ದೀಪಾವಳಿ ಹಬ್ಬದ ಮೊದಲು ಕಂಪನಿಯು ತನ್ನ ಸಂಪನ್ಮೂಲಗಳ ಮೂಲಕ ನೌಕರರಿಗೆ ಸಂಬಳ ನೀಡಲಿದೆ ಎಂದು ಬಿಎಸ್‌ಎನ್‌ಎಲ್ ಅಧ್ಯಕ್ಷರು ಹೇಳಿದ್ದಾರೆ.  ವಿಆರ್‌ಎಸ್ ಯೋಜನೆಯ ಬಗ್ಗೆ ಇದೇ ವೇಳೆ ಒಪ್ಪಂದಕ್ಕೆ ಬರುವ ನಿರೀಕ್ಷೆಯಿದೆ. ಕಂಪನಿ ಪ್ರತಿ ತಿಂಗಳು 1,600 ಕೋಟಿ ಗಳಿಸುತ್ತಿದೆ. ಅದೇ ಸಮಯದಲ್ಲಿ ನೌಕರರಿಗೆ ಸಂಬಳ ನೀಡಲು ಕಂಪನಿ 850 ಕೋಟಿ ರೂಪಾಯಿ ವೆಚ್ಚ  ಮಾಡುತ್ತಿದೆ.

ಇಲ್ಲಿ ವೇತಕ್ಕೆ ಅಧಿಕ ಖರ್ಚಾಗುತ್ತಿದೆ. ಅದೇ ಮಾದರಿಯ ಕೆಲಸಗಳು ನಡೆಯುತ್ತಿಲ್ಲ ಎಂಬ ಕಾರಣದಿಂದಲೇ ಬಿ ಎಸ್ ಎನ್ ಎಲ್ ಕಡೆಗೆ ಆಸಕ್ತಿ ಕಡಿಮೆಯಾಗಿತ್ತು. ಖಾಸಗಿ ಕಂಪನಿಗೆ ಪೈಪೋಟಿ ನೀಡಲು ಕಾರ್ಯತತ್ಪರತೆಯೂ ಅಗತ್ಯವಾಗಿತ್ತು. ಅಧಿಕ ಸಂಬಳ ಪಡೆದರೂ, ಸರಕಾರ ನೀಡಿದರೂ ಅದೇ ಮಾದರಿಯಲ್ಲಿ ಕೆಲಸಗಳು , ಸರಕಾರದ ನಿಯಮಗಳಲ್ಲಿ ಬದಲಾವಣೆ ಆಗದೇ ಇರುವುದು, ಹಿರಿಯ ಅಧಿಕಾರಿಗಳ ನಿರಾಸಕ್ತಿ, ಖಾಸಗಿ ಕಂಪನಿಗಳೊಂದಿಗೆ ಒಳ ಒಪ್ಪಂದ   ಬಿ ಎಸ್ ಎನ್ ಎಲ್ ಹಿಂದೆ ಉಳಿಯಲು ಕಾರಣವಾದರೆ, ಖಾಸಗಿ ಕಂಪನಿಗಳಿಗೆ ಪೈಪೋಟಿ ನೀಡಲು ಶಕ್ತವಾಗಲಿಲ್ಲ ಎಂಬ ವಿಶ್ಲೇಷಣೆ ಹಿರಿಯ ತಜ್ಞರಿಂದ ನಡೆದಿತ್ತು. ಇದೀಗ ಕೇಂದ್ರ ಸರಕಾರವು ಮತ್ತೆ ಬಿ ಎಸ್ ಎನ್ ಎಲ್ ಸುಧಾರಣೆಯತ್ತ ಮುಖ ಮಾಡಿರುವುದು ಗ್ರಾಮೀಣ ಭಾಗದ ಜನರಿಗೆ ಸಂಪರ್ಕ ವ್ಯವಸ್ಥೆ ಸುಧಾರಣೆಯಾಗುವ ನಿರೀಕ್ಷೆ ಮೂಡಿಸಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

34 minutes ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

57 minutes ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

22 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

1 day ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

1 day ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

1 day ago