Advertisement
MIRROR FOCUS

ಗ್ರಾಮೀಣ ಜನರಿಗೆ ಸಂತಸದ ಸುದ್ದಿ : ಬಿ ಎಸ್ ಎನ್ ಎಲ್ ಪುನರುಜ್ಜೀವನದ ನಿರೀಕ್ಷೆ……

Share

ಗ್ರಾಮೀಣ ಭಾಗದ ಜನರ ಪ್ರಮುಖವಾದ ಸಂಪರ್ಕ ವ್ಯವಸ್ಥೆ ಬಿ ಎಸ್ ಎನ್ ಎಲ್ ಪುನರುಜ್ಜೀವನಗೊಳ್ಳುವ ನಿರೀಕ್ಷೆ ಇದೆ. ಹಣಕಾಸು ಸಚಿವಾಲಯ ಮತ್ತು ಪ್ರಧಾನ ಮಂತ್ರಿ ಕಚೇರಿ 50,000 ಕೋಟಿ ರೂಪಾಯಿ ನೀಡಲು ಮುಂದಾಗಿದೆ ಎಂಬ ಸುಳಿವು ಲಭ್ಯವಾಗಿದ್ದು ಮುಂದಿನ ವಾರ ಈ ಬಗ್ಗೆ ಕೇಂದ್ರ ಸರಕಾರದಲ್ಲಿ ಚರ್ಚೆಯಾಗಲಿದೆ. ಹೀಗಾಗಿ ಮತ್ತೆ ಬಿ ಎಸ್ ಎನ್ ಎಲ್ ಸುಧಾರಣೆಯ ಹಾದಿಯತ್ತ ಸಾಗಲಿದೆ.

ಇದೇ ವೇಳೆ ವೇತನವೂ ಬಿ ಎಸ್ ಎನ್ ಎಲ್ ನೌಕರರಿಗೆ ಸಿಗಲಿದೆ. ಸೆಪ್ಟೆಂಬರ್ ತಿಂಗಳ ಸಂಬಳ  ದೀಪಾವಳಿಗೂ ಮುನ್ನವೇ ನೌಕರರಿಗೆ ಸಿಗಲಿದೆ. ದೀಪಾವಳಿ ಹಬ್ಬದ ಮೊದಲು ಕಂಪನಿಯು ತನ್ನ ಸಂಪನ್ಮೂಲಗಳ ಮೂಲಕ ನೌಕರರಿಗೆ ಸಂಬಳ ನೀಡಲಿದೆ ಎಂದು ಬಿಎಸ್‌ಎನ್‌ಎಲ್ ಅಧ್ಯಕ್ಷರು ಹೇಳಿದ್ದಾರೆ.  ವಿಆರ್‌ಎಸ್ ಯೋಜನೆಯ ಬಗ್ಗೆ ಇದೇ ವೇಳೆ ಒಪ್ಪಂದಕ್ಕೆ ಬರುವ ನಿರೀಕ್ಷೆಯಿದೆ. ಕಂಪನಿ ಪ್ರತಿ ತಿಂಗಳು 1,600 ಕೋಟಿ ಗಳಿಸುತ್ತಿದೆ. ಅದೇ ಸಮಯದಲ್ಲಿ ನೌಕರರಿಗೆ ಸಂಬಳ ನೀಡಲು ಕಂಪನಿ 850 ಕೋಟಿ ರೂಪಾಯಿ ವೆಚ್ಚ  ಮಾಡುತ್ತಿದೆ.

ಇಲ್ಲಿ ವೇತಕ್ಕೆ ಅಧಿಕ ಖರ್ಚಾಗುತ್ತಿದೆ. ಅದೇ ಮಾದರಿಯ ಕೆಲಸಗಳು ನಡೆಯುತ್ತಿಲ್ಲ ಎಂಬ ಕಾರಣದಿಂದಲೇ ಬಿ ಎಸ್ ಎನ್ ಎಲ್ ಕಡೆಗೆ ಆಸಕ್ತಿ ಕಡಿಮೆಯಾಗಿತ್ತು. ಖಾಸಗಿ ಕಂಪನಿಗೆ ಪೈಪೋಟಿ ನೀಡಲು ಕಾರ್ಯತತ್ಪರತೆಯೂ ಅಗತ್ಯವಾಗಿತ್ತು. ಅಧಿಕ ಸಂಬಳ ಪಡೆದರೂ, ಸರಕಾರ ನೀಡಿದರೂ ಅದೇ ಮಾದರಿಯಲ್ಲಿ ಕೆಲಸಗಳು , ಸರಕಾರದ ನಿಯಮಗಳಲ್ಲಿ ಬದಲಾವಣೆ ಆಗದೇ ಇರುವುದು, ಹಿರಿಯ ಅಧಿಕಾರಿಗಳ ನಿರಾಸಕ್ತಿ, ಖಾಸಗಿ ಕಂಪನಿಗಳೊಂದಿಗೆ ಒಳ ಒಪ್ಪಂದ   ಬಿ ಎಸ್ ಎನ್ ಎಲ್ ಹಿಂದೆ ಉಳಿಯಲು ಕಾರಣವಾದರೆ, ಖಾಸಗಿ ಕಂಪನಿಗಳಿಗೆ ಪೈಪೋಟಿ ನೀಡಲು ಶಕ್ತವಾಗಲಿಲ್ಲ ಎಂಬ ವಿಶ್ಲೇಷಣೆ ಹಿರಿಯ ತಜ್ಞರಿಂದ ನಡೆದಿತ್ತು. ಇದೀಗ ಕೇಂದ್ರ ಸರಕಾರವು ಮತ್ತೆ ಬಿ ಎಸ್ ಎನ್ ಎಲ್ ಸುಧಾರಣೆಯತ್ತ ಮುಖ ಮಾಡಿರುವುದು ಗ್ರಾಮೀಣ ಭಾಗದ ಜನರಿಗೆ ಸಂಪರ್ಕ ವ್ಯವಸ್ಥೆ ಸುಧಾರಣೆಯಾಗುವ ನಿರೀಕ್ಷೆ ಮೂಡಿಸಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

10 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

10 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

10 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

11 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

22 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

1 day ago