ಗುತ್ತಿಗಾರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮ ಮಟ್ಟದಲ್ಲಿ ಬಡವರ ಬಂಧುವಾಗಿದೆ.ಜನರ ಜೀವನದಲ್ಲಿ ಆರ್ಥಿಕವಾಗಿ ಮೇಲ್ಮಟ್ಟಕ್ಕೆ ಏರಿಸುವಲ್ಲಿ ಯೋಜನೆ ಪಾತ್ರ ಬಹಳಷ್ಠಿದೆ. ಗ್ರಾಮೀಣ ಜನರ ಅಭ್ಯುದಯದಲ್ಲಿ ಸ್ವಸಹಾಯ ಸಂಘಗಳು ಬಹುಮುಖ್ಯ ಪಾತ್ರವಹಿಸಿದೆ ಎಂದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ಮತ್ತು ಸುಬ್ರಹ್ಮಣ್ಯ ವಲಯದ ಒಕ್ಕೂಟ ಪದಾಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸಂಘಗಳ ಪದಾಧಿಕಾರಿಗಳಿಗೆ ತರಬೇತಿ ನೀಡುವ ಮೂಲಕ ಅವರ ಕಾರ್ಯ ಕೌಶಲ್ಯ ಹೆಚ್ಚಿಸಲು ವಿಫುಲ ಅವಕಾಶ ಲಭ್ಯವಾಗುತ್ತದೆ ಆದುದರಿಂದ ತರಬೇತಿಗಳು ಅತ್ಯವಶ್ಯಕ.ತರಬೇತಿಗಳು ಕೌಶಲ್ಯ ವೃದ್ಧಿಗೆ ಮಾರ್ಗದರ್ಶಕವಾಗಿದೆ.ಆದುದರಿಂದ ಹೆಚ್ಚು ಹೆಚ್ಚು ತರಬೇತಿ ಕಾರ್ಯಾಗಾರಗಳು ನಡೆಯುವುದು ಅತ್ಯವಶ್ಯಕ ಎಂದರು.
ಗುತ್ತಿಗಾರು ಗ್ರಾ.ಪಂ.ಅಧ್ಯಕ್ಷ ಅಚ್ಚುತ್ತ ಗುತ್ತಿಗಾರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸಂತೋಷ್ ಕುಮಾರ್, ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ, ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕ ಸೀತಾರಾಮ್, ಆಂತರಿಕ ಲೆಕ್ಕ ಪರಿಶೋಧಕ ಉಮೇಶ್, ಸೇವಾ ಪ್ರತಿನಿಧಿಗಳಾದ ಲೋಕೇಶ್, ತಿಮ್ಮಪ್ಪ, ಹರಿಶ್ಚಂದ್ರ, ಸವಿತಾ, ಉಷಾ ವೇದಿಕೆಯಲ್ಲಿದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…