ಮಂಗಳೂರು : ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ 2020-21ನೇ ಸಾಲಿನ ಪಿಎಂಇಜಿಪಿ ಯೋಜನೆಯಡಿ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ಕೈಗಾರಿಕಾ ಘಟಕವನ್ನು ಹೊಸದಾಗಿ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಯೋಜನಾ ಮೊತ್ತ 25 ಲಕ್ಷ ರೂ.ವರೆಗೆ ಸಾಲ ಪಡೆಯಲು ಅರ್ಹರಿದ್ದು, www.kviconline.gov.in ವೆಬ್ಸೈಟ್ ಸಂಪರ್ಕಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಅದರ ಏಕ ಪ್ರತಿಯನ್ನು ಭಾವಚಿತ್ರ, ಆಧಾರ್ ಪ್ರತಿ, ಯೋಜನಾ ವರದಿ, ವಿದ್ಯಾರ್ಹತೆ ಪ್ರಮಾಣ ಪತ್ರ, ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳ ಪ್ರತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಖಾದಿ ಗ್ರಾಮೋದ್ಯೋಗ ಮಂಡಳಿ, ಮಂಗಳೂರು ಮಹಾನಗರ ಪಾಲಿಕೆ, ಕೆಳ ಮಹಡಿ, ಲಾಲ್ಭಾಗ್, ಮಂಗಳೂರು ದೂರವಾಣಿ ಸಂಖ್ಯೆ 0824-2454800 ಸಂಪರ್ಕಿಸಲು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಪ್ರಕಟಣೆ ತಿಳಿಸಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…