ಮಂಗಳೂರು : ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ 2020-21ನೇ ಸಾಲಿನ ಪಿಎಂಇಜಿಪಿ ಯೋಜನೆಯಡಿ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ಕೈಗಾರಿಕಾ ಘಟಕವನ್ನು ಹೊಸದಾಗಿ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಯೋಜನಾ ಮೊತ್ತ 25 ಲಕ್ಷ ರೂ.ವರೆಗೆ ಸಾಲ ಪಡೆಯಲು ಅರ್ಹರಿದ್ದು, www.kviconline.gov.in ವೆಬ್ಸೈಟ್ ಸಂಪರ್ಕಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಅದರ ಏಕ ಪ್ರತಿಯನ್ನು ಭಾವಚಿತ್ರ, ಆಧಾರ್ ಪ್ರತಿ, ಯೋಜನಾ ವರದಿ, ವಿದ್ಯಾರ್ಹತೆ ಪ್ರಮಾಣ ಪತ್ರ, ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳ ಪ್ರತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಖಾದಿ ಗ್ರಾಮೋದ್ಯೋಗ ಮಂಡಳಿ, ಮಂಗಳೂರು ಮಹಾನಗರ ಪಾಲಿಕೆ, ಕೆಳ ಮಹಡಿ, ಲಾಲ್ಭಾಗ್, ಮಂಗಳೂರು ದೂರವಾಣಿ ಸಂಖ್ಯೆ 0824-2454800 ಸಂಪರ್ಕಿಸಲು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಪ್ರಕಟಣೆ ತಿಳಿಸಿದೆ.
ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…
ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ…
ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟದ ವಿರುದ್ಧ ಕಠಿಣ ಕ್ರಮಗಳ ಆತಂಕದ ಹಿನ್ನೆಲೆಯಲ್ಲಿ ಕರ್ನಾಟಕ ಅಡಿಕೆ…
ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು…
ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯ ಮುನ್ಸೂಚನೆ…