ಮಂಗಳೂರು : ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ 2020-21ನೇ ಸಾಲಿನ ಪಿಎಂಇಜಿಪಿ ಯೋಜನೆಯಡಿ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ಕೈಗಾರಿಕಾ ಘಟಕವನ್ನು ಹೊಸದಾಗಿ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಯೋಜನಾ ಮೊತ್ತ 25 ಲಕ್ಷ ರೂ.ವರೆಗೆ ಸಾಲ ಪಡೆಯಲು ಅರ್ಹರಿದ್ದು, www.kviconline.gov.in ವೆಬ್ಸೈಟ್ ಸಂಪರ್ಕಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಅದರ ಏಕ ಪ್ರತಿಯನ್ನು ಭಾವಚಿತ್ರ, ಆಧಾರ್ ಪ್ರತಿ, ಯೋಜನಾ ವರದಿ, ವಿದ್ಯಾರ್ಹತೆ ಪ್ರಮಾಣ ಪತ್ರ, ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳ ಪ್ರತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಖಾದಿ ಗ್ರಾಮೋದ್ಯೋಗ ಮಂಡಳಿ, ಮಂಗಳೂರು ಮಹಾನಗರ ಪಾಲಿಕೆ, ಕೆಳ ಮಹಡಿ, ಲಾಲ್ಭಾಗ್, ಮಂಗಳೂರು ದೂರವಾಣಿ ಸಂಖ್ಯೆ 0824-2454800 ಸಂಪರ್ಕಿಸಲು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಪ್ರಕಟಣೆ ತಿಳಿಸಿದೆ.
ಭಾರತದ 11,000 ಕಿ.ಮೀ ಕರಾವಳಿಗೆ ಮುಂದಿನ 15 ವರ್ಷಗಳಲ್ಲಿ ಹವಾಮಾನ ಬದಲಾವಣೆಯ ಗಂಭೀರ…
ಸೂಪರ್ ಎಲ್ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…
ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…
ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…
ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…
ಬೆಳೆ ವೈರಸ್ ರೋಗಗಳಿಗೆ ಇನ್ನೂ ವ್ಯಾಕ್ಸಿನ್ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…