Advertisement
MIRROR FOCUS

ಗ್ರಾಮೀಣ ಭಾಗದ ಸುಂದರ ತಾಣ :ಹಾಲ್ನೊರೆಯಂತೆ ತುಂಬಿ ಹರಿಯುವ ಚಾಮಡ್ಕ ಜಲಪಾತ…!

Share

ಗ್ರಾಮೀಣ ಭಾಗದ ಪ್ರಕೃತಿ ಸೌಂದರ್ಯಗಳು ನೋಡಲು ಖುಷಿ. ಇಂದಿಗೂ ಸಹಜತೆಯನ್ನು ಕಾಯ್ದುಕೊಂಡಿರುವ ಜಲಪಾತಗಳು, ಪ್ರಕೃತಿ ತಾಣಗಳು ಮನಸ್ಸಿಗೆ ಹೆಚ್ಚು ಖುಷಿ ಕೊಡುತ್ತವೆ. ಇದರ ಜೊತೆಗೆ ಎಚ್ಚರಿಕೆಯೂ ಇದೆ. ಇದೇ ಸೌಂದರ್ಯುವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಕಾರಣದಿಂದ ಫೋಕಸ್..


ಮಳೆ ಬಂತೆಂದರೆ ಬಹುತೇಕ ಜಲಪಾತಗಳು ಮೈತುಂಬಿ ಹರಿಯುತ್ತದೆ. ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದಲ್ಲಿನ ಚಾಮಡ್ಕ ಜಲಪಾತವೂ ಮೈತುಂಬಿ ಹರಿಯಲು ಆರಂಭಿಸುತ್ತದೆ. ವಿಶೇಷವೆಂದರೆ ಬೇರೆ ಕಡೆಗಳಲ್ಲಿ ಎಲ್ಲಿಯೂ ಕಾಣ ಸಿಗದ ರೀತಿಯ ಚಾಮಡ್ಕ ಜಲಪಾತದ ನೀರು ಪಶ್ಚಿಮ ದಿಕ್ಕಿನಿಂದ ಪೂರ್ವ ಧಿಕ್ಕಿಗೆ ಹರಿಯುತ್ತದೆ. ಹಾಲ್ನೊರೆಯಂತೆ ಹರಿಯುವ ಈ ಜಲಪಾತ ಹಿರಿಯ ಸಾಹಿತಿ ಡಾ.ಶಿವರಾಮ ಕಾರಂತ ಅವರಂತಹವರಿಗೂ ಪ್ರೇರಣೆ ನೀಡಿತ್ತು.

ಬಂಟಮಲೆಯಲ್ಲಿ ಹುಟ್ಟುವ ಈ ನೀರಿನ ತೊರೆ ಚಾಮಡ್ಕ ಜಲಪಾತ ಸೃಷ್ಠಿಸಿ ಕಂದಡ್ಕದ ಕೂಟೇಲಿನಲ್ಲಿ ಪಯಸ್ವಿನಿ ನದಿ ಸೇರುತ್ತದೆ. ಸೇತುವೆ ಕೆಳಭಾಗದಲ್ಲಿ ಹರಿದು ಬರುವ ನೀರು ಎತ್ತರದಿಂದ ಕೆಳಗೆ ಬೀಳುವುದು ಮೈನವಿರೇಳಿಸುವಂತಹದ್ದು. ಅಲ್ಲಿಂದ ಕೆಳಬೀಳುವ ನೀರು ಮೂರು ತೊರೆಗಳಾಗಿ ಹರಿಯುತ್ತಾ ಹೋಗುವುದರಿಂದ ಅಪಾಯಕಾರಿಯೂ ಆಗಿರುವುದಿಲ್ಲ. ಮೇಲ್ನೋಟಕ್ಕೆ ನೀರಿನ ಪ್ರವಾಹವೇ ಕಾಣಿಸಿದರೂ ಕೆಳಗೆ ಹೋಗಿ ನಿಂತಾಗ ಅದರ ಸೊಬಗು ಖುಷಿ ಕೊಡುತ್ತದೆ.

ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ:ಕಳೆದ ಎರಡು ವಾರದ ಹಿಂದೆ ಎಡೆಬಿಡದ್ದೆ ಸುರಿಯುತ್ತಿದ್ದ ಮಳೆಯಿಂದ ಇಂದಿಗೂ ನೀರಿನ ಹರಿವಿನ ಮಟ್ಟದಲ್ಲಿ ಹೆಚ್ಚಳವಿದ್ದು ಪ್ರವಾಸಿಗರು ನಿತ್ಯವೂ ಬರುತ್ತಲೇ ಇದ್ದಾರೆ. ಪುಟ್ಟ ಮಕ್ಕಳಿಂದ ವಯೋವೃದ್ದರೂ ಆತಂಕವಿಲ್ಲದೇ ಓಡಾಡಬಹುದಾಗಿದೆ. ಸುತ್ತಮುತ್ತಲಿನ ಮನೆಗಳ ಮಕ್ಕಳು ರಜಾ ದಿನಗಳನ್ನು ಇಲ್ಲಿಯೇ ಕಳೆಯುತ್ತಿರುತ್ತಾರೆ. ಒಂದೆರಡು ಕಿರು ಚಿತ್ರಗಳೂ ಇಲ್ಲಿ ಚಿತ್ರೀಕರಣವಾಗಿದೆ.  ಅಂದು ಸಾಹಿತಿ ಡಾ.ಶಿವರಾಮ ಕಾರಂತ ಅವರು ಇದೇ ಜಲಪಾತದ ಪಕ್ಕವೇ ಕುಳಿತು ಕಾದಂಬರಿಯನ್ನು ಬರೆದಿದ್ದರು ಎಂದು ಸ್ಥಳೀಯರು ಹೇಳುತ್ತಾರೆ.

ಹೀಗೆ ಹೋಗಬಹುದು :ಬೆಳ್ಳಾರೆಯಿಂದ 10 ಕಿ.ಮಿ ದೂರದಲ್ಲಿರುವ ಜಲಪಾತಕ್ಕೆ ಹೋಗಲು ಸುಗಮವಾದ ದಾರಿಯಿದೆ. ಕಾಡು ಬದಿಯ ಮಾರ್ಗದಲ್ಲೇ ಬಸ್ಸು ಅಥವಾ ವಾಹನದಲ್ಲಿ ಕುಕ್ಕುಜಡ್ಕ ಮಾರ್ಗವಾಗಿ ಕಲ್ಮಡ್ಕ ರಸ್ತೆಯ ಮೂಲಕ ಪ್ರಯಾಣ ಮುಂದುವರಿಸಿದಾಗ ಡಿ.ಆರ್.ಜಿ ವೃತ್ತದಲ್ಲಿ ಬಲಬದಿಯಾಗಿ ಅರ್ಧ ಕಿ.ಮೀ ಕ್ರಮಿಸುವಷ್ಟರಲ್ಲಿ ಭೋರ್ಗರೆಯುವ ಜಲಪಾತದ ಸೊಬಗು ಕಾಣುತ್ತದೆ. ಸೇತುವೆ ಬದಿಯಲ್ಲೇ ವಾಹನ ನಿಲ್ಲಿಸಿ ನಡೆದುಕೊಂಡು  ಕಾಲುದಾರಿಯಲ್ಲಿ ಕೆಳಗೆ ಇಳಿದರೆ ಜಲಪಾತದ ಸ್ಥಳಕ್ಕೆ ತಲುಪಲು ಸಾಧ್ಯ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

24 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

1 day ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

1 day ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago