MIRROR FOCUS

ಗ್ರಾಮೀಣ ಭಾಗದ ಸುಂದರ ತಾಣ :ಹಾಲ್ನೊರೆಯಂತೆ ತುಂಬಿ ಹರಿಯುವ ಚಾಮಡ್ಕ ಜಲಪಾತ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮೀಣ ಭಾಗದ ಪ್ರಕೃತಿ ಸೌಂದರ್ಯಗಳು ನೋಡಲು ಖುಷಿ. ಇಂದಿಗೂ ಸಹಜತೆಯನ್ನು ಕಾಯ್ದುಕೊಂಡಿರುವ ಜಲಪಾತಗಳು, ಪ್ರಕೃತಿ ತಾಣಗಳು ಮನಸ್ಸಿಗೆ ಹೆಚ್ಚು ಖುಷಿ ಕೊಡುತ್ತವೆ. ಇದರ ಜೊತೆಗೆ ಎಚ್ಚರಿಕೆಯೂ ಇದೆ. ಇದೇ ಸೌಂದರ್ಯುವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಕಾರಣದಿಂದ ಫೋಕಸ್..

Advertisement

ಮಳೆ ಬಂತೆಂದರೆ ಬಹುತೇಕ ಜಲಪಾತಗಳು ಮೈತುಂಬಿ ಹರಿಯುತ್ತದೆ. ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದಲ್ಲಿನ ಚಾಮಡ್ಕ ಜಲಪಾತವೂ ಮೈತುಂಬಿ ಹರಿಯಲು ಆರಂಭಿಸುತ್ತದೆ. ವಿಶೇಷವೆಂದರೆ ಬೇರೆ ಕಡೆಗಳಲ್ಲಿ ಎಲ್ಲಿಯೂ ಕಾಣ ಸಿಗದ ರೀತಿಯ ಚಾಮಡ್ಕ ಜಲಪಾತದ ನೀರು ಪಶ್ಚಿಮ ದಿಕ್ಕಿನಿಂದ ಪೂರ್ವ ಧಿಕ್ಕಿಗೆ ಹರಿಯುತ್ತದೆ. ಹಾಲ್ನೊರೆಯಂತೆ ಹರಿಯುವ ಈ ಜಲಪಾತ ಹಿರಿಯ ಸಾಹಿತಿ ಡಾ.ಶಿವರಾಮ ಕಾರಂತ ಅವರಂತಹವರಿಗೂ ಪ್ರೇರಣೆ ನೀಡಿತ್ತು.

ಬಂಟಮಲೆಯಲ್ಲಿ ಹುಟ್ಟುವ ಈ ನೀರಿನ ತೊರೆ ಚಾಮಡ್ಕ ಜಲಪಾತ ಸೃಷ್ಠಿಸಿ ಕಂದಡ್ಕದ ಕೂಟೇಲಿನಲ್ಲಿ ಪಯಸ್ವಿನಿ ನದಿ ಸೇರುತ್ತದೆ. ಸೇತುವೆ ಕೆಳಭಾಗದಲ್ಲಿ ಹರಿದು ಬರುವ ನೀರು ಎತ್ತರದಿಂದ ಕೆಳಗೆ ಬೀಳುವುದು ಮೈನವಿರೇಳಿಸುವಂತಹದ್ದು. ಅಲ್ಲಿಂದ ಕೆಳಬೀಳುವ ನೀರು ಮೂರು ತೊರೆಗಳಾಗಿ ಹರಿಯುತ್ತಾ ಹೋಗುವುದರಿಂದ ಅಪಾಯಕಾರಿಯೂ ಆಗಿರುವುದಿಲ್ಲ. ಮೇಲ್ನೋಟಕ್ಕೆ ನೀರಿನ ಪ್ರವಾಹವೇ ಕಾಣಿಸಿದರೂ ಕೆಳಗೆ ಹೋಗಿ ನಿಂತಾಗ ಅದರ ಸೊಬಗು ಖುಷಿ ಕೊಡುತ್ತದೆ.

Advertisement

ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ:ಕಳೆದ ಎರಡು ವಾರದ ಹಿಂದೆ ಎಡೆಬಿಡದ್ದೆ ಸುರಿಯುತ್ತಿದ್ದ ಮಳೆಯಿಂದ ಇಂದಿಗೂ ನೀರಿನ ಹರಿವಿನ ಮಟ್ಟದಲ್ಲಿ ಹೆಚ್ಚಳವಿದ್ದು ಪ್ರವಾಸಿಗರು ನಿತ್ಯವೂ ಬರುತ್ತಲೇ ಇದ್ದಾರೆ. ಪುಟ್ಟ ಮಕ್ಕಳಿಂದ ವಯೋವೃದ್ದರೂ ಆತಂಕವಿಲ್ಲದೇ ಓಡಾಡಬಹುದಾಗಿದೆ. ಸುತ್ತಮುತ್ತಲಿನ ಮನೆಗಳ ಮಕ್ಕಳು ರಜಾ ದಿನಗಳನ್ನು ಇಲ್ಲಿಯೇ ಕಳೆಯುತ್ತಿರುತ್ತಾರೆ. ಒಂದೆರಡು ಕಿರು ಚಿತ್ರಗಳೂ ಇಲ್ಲಿ ಚಿತ್ರೀಕರಣವಾಗಿದೆ.  ಅಂದು ಸಾಹಿತಿ ಡಾ.ಶಿವರಾಮ ಕಾರಂತ ಅವರು ಇದೇ ಜಲಪಾತದ ಪಕ್ಕವೇ ಕುಳಿತು ಕಾದಂಬರಿಯನ್ನು ಬರೆದಿದ್ದರು ಎಂದು ಸ್ಥಳೀಯರು ಹೇಳುತ್ತಾರೆ.

Advertisement

ಹೀಗೆ ಹೋಗಬಹುದು :ಬೆಳ್ಳಾರೆಯಿಂದ 10 ಕಿ.ಮಿ ದೂರದಲ್ಲಿರುವ ಜಲಪಾತಕ್ಕೆ ಹೋಗಲು ಸುಗಮವಾದ ದಾರಿಯಿದೆ. ಕಾಡು ಬದಿಯ ಮಾರ್ಗದಲ್ಲೇ ಬಸ್ಸು ಅಥವಾ ವಾಹನದಲ್ಲಿ ಕುಕ್ಕುಜಡ್ಕ ಮಾರ್ಗವಾಗಿ ಕಲ್ಮಡ್ಕ ರಸ್ತೆಯ ಮೂಲಕ ಪ್ರಯಾಣ ಮುಂದುವರಿಸಿದಾಗ ಡಿ.ಆರ್.ಜಿ ವೃತ್ತದಲ್ಲಿ ಬಲಬದಿಯಾಗಿ ಅರ್ಧ ಕಿ.ಮೀ ಕ್ರಮಿಸುವಷ್ಟರಲ್ಲಿ ಭೋರ್ಗರೆಯುವ ಜಲಪಾತದ ಸೊಬಗು ಕಾಣುತ್ತದೆ. ಸೇತುವೆ ಬದಿಯಲ್ಲೇ ವಾಹನ ನಿಲ್ಲಿಸಿ ನಡೆದುಕೊಂಡು  ಕಾಲುದಾರಿಯಲ್ಲಿ ಕೆಳಗೆ ಇಳಿದರೆ ಜಲಪಾತದ ಸ್ಥಳಕ್ಕೆ ತಲುಪಲು ಸಾಧ್ಯ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

2 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

4 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

5 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

11 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

17 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

17 hours ago