Advertisement
MIRROR FOCUS

ಗ್ರಾಮೀಣ ಭಾಗದ ಸುಂದರ ತಾಣ :ಹಾಲ್ನೊರೆಯಂತೆ ತುಂಬಿ ಹರಿಯುವ ಚಾಮಡ್ಕ ಜಲಪಾತ…!

Share

ಗ್ರಾಮೀಣ ಭಾಗದ ಪ್ರಕೃತಿ ಸೌಂದರ್ಯಗಳು ನೋಡಲು ಖುಷಿ. ಇಂದಿಗೂ ಸಹಜತೆಯನ್ನು ಕಾಯ್ದುಕೊಂಡಿರುವ ಜಲಪಾತಗಳು, ಪ್ರಕೃತಿ ತಾಣಗಳು ಮನಸ್ಸಿಗೆ ಹೆಚ್ಚು ಖುಷಿ ಕೊಡುತ್ತವೆ. ಇದರ ಜೊತೆಗೆ ಎಚ್ಚರಿಕೆಯೂ ಇದೆ. ಇದೇ ಸೌಂದರ್ಯುವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಕಾರಣದಿಂದ ಫೋಕಸ್..

Advertisement
Advertisement

ಮಳೆ ಬಂತೆಂದರೆ ಬಹುತೇಕ ಜಲಪಾತಗಳು ಮೈತುಂಬಿ ಹರಿಯುತ್ತದೆ. ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದಲ್ಲಿನ ಚಾಮಡ್ಕ ಜಲಪಾತವೂ ಮೈತುಂಬಿ ಹರಿಯಲು ಆರಂಭಿಸುತ್ತದೆ. ವಿಶೇಷವೆಂದರೆ ಬೇರೆ ಕಡೆಗಳಲ್ಲಿ ಎಲ್ಲಿಯೂ ಕಾಣ ಸಿಗದ ರೀತಿಯ ಚಾಮಡ್ಕ ಜಲಪಾತದ ನೀರು ಪಶ್ಚಿಮ ದಿಕ್ಕಿನಿಂದ ಪೂರ್ವ ಧಿಕ್ಕಿಗೆ ಹರಿಯುತ್ತದೆ. ಹಾಲ್ನೊರೆಯಂತೆ ಹರಿಯುವ ಈ ಜಲಪಾತ ಹಿರಿಯ ಸಾಹಿತಿ ಡಾ.ಶಿವರಾಮ ಕಾರಂತ ಅವರಂತಹವರಿಗೂ ಪ್ರೇರಣೆ ನೀಡಿತ್ತು.

ಬಂಟಮಲೆಯಲ್ಲಿ ಹುಟ್ಟುವ ಈ ನೀರಿನ ತೊರೆ ಚಾಮಡ್ಕ ಜಲಪಾತ ಸೃಷ್ಠಿಸಿ ಕಂದಡ್ಕದ ಕೂಟೇಲಿನಲ್ಲಿ ಪಯಸ್ವಿನಿ ನದಿ ಸೇರುತ್ತದೆ. ಸೇತುವೆ ಕೆಳಭಾಗದಲ್ಲಿ ಹರಿದು ಬರುವ ನೀರು ಎತ್ತರದಿಂದ ಕೆಳಗೆ ಬೀಳುವುದು ಮೈನವಿರೇಳಿಸುವಂತಹದ್ದು. ಅಲ್ಲಿಂದ ಕೆಳಬೀಳುವ ನೀರು ಮೂರು ತೊರೆಗಳಾಗಿ ಹರಿಯುತ್ತಾ ಹೋಗುವುದರಿಂದ ಅಪಾಯಕಾರಿಯೂ ಆಗಿರುವುದಿಲ್ಲ. ಮೇಲ್ನೋಟಕ್ಕೆ ನೀರಿನ ಪ್ರವಾಹವೇ ಕಾಣಿಸಿದರೂ ಕೆಳಗೆ ಹೋಗಿ ನಿಂತಾಗ ಅದರ ಸೊಬಗು ಖುಷಿ ಕೊಡುತ್ತದೆ.

ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ:ಕಳೆದ ಎರಡು ವಾರದ ಹಿಂದೆ ಎಡೆಬಿಡದ್ದೆ ಸುರಿಯುತ್ತಿದ್ದ ಮಳೆಯಿಂದ ಇಂದಿಗೂ ನೀರಿನ ಹರಿವಿನ ಮಟ್ಟದಲ್ಲಿ ಹೆಚ್ಚಳವಿದ್ದು ಪ್ರವಾಸಿಗರು ನಿತ್ಯವೂ ಬರುತ್ತಲೇ ಇದ್ದಾರೆ. ಪುಟ್ಟ ಮಕ್ಕಳಿಂದ ವಯೋವೃದ್ದರೂ ಆತಂಕವಿಲ್ಲದೇ ಓಡಾಡಬಹುದಾಗಿದೆ. ಸುತ್ತಮುತ್ತಲಿನ ಮನೆಗಳ ಮಕ್ಕಳು ರಜಾ ದಿನಗಳನ್ನು ಇಲ್ಲಿಯೇ ಕಳೆಯುತ್ತಿರುತ್ತಾರೆ. ಒಂದೆರಡು ಕಿರು ಚಿತ್ರಗಳೂ ಇಲ್ಲಿ ಚಿತ್ರೀಕರಣವಾಗಿದೆ.  ಅಂದು ಸಾಹಿತಿ ಡಾ.ಶಿವರಾಮ ಕಾರಂತ ಅವರು ಇದೇ ಜಲಪಾತದ ಪಕ್ಕವೇ ಕುಳಿತು ಕಾದಂಬರಿಯನ್ನು ಬರೆದಿದ್ದರು ಎಂದು ಸ್ಥಳೀಯರು ಹೇಳುತ್ತಾರೆ.

ಹೀಗೆ ಹೋಗಬಹುದು :ಬೆಳ್ಳಾರೆಯಿಂದ 10 ಕಿ.ಮಿ ದೂರದಲ್ಲಿರುವ ಜಲಪಾತಕ್ಕೆ ಹೋಗಲು ಸುಗಮವಾದ ದಾರಿಯಿದೆ. ಕಾಡು ಬದಿಯ ಮಾರ್ಗದಲ್ಲೇ ಬಸ್ಸು ಅಥವಾ ವಾಹನದಲ್ಲಿ ಕುಕ್ಕುಜಡ್ಕ ಮಾರ್ಗವಾಗಿ ಕಲ್ಮಡ್ಕ ರಸ್ತೆಯ ಮೂಲಕ ಪ್ರಯಾಣ ಮುಂದುವರಿಸಿದಾಗ ಡಿ.ಆರ್.ಜಿ ವೃತ್ತದಲ್ಲಿ ಬಲಬದಿಯಾಗಿ ಅರ್ಧ ಕಿ.ಮೀ ಕ್ರಮಿಸುವಷ್ಟರಲ್ಲಿ ಭೋರ್ಗರೆಯುವ ಜಲಪಾತದ ಸೊಬಗು ಕಾಣುತ್ತದೆ. ಸೇತುವೆ ಬದಿಯಲ್ಲೇ ವಾಹನ ನಿಲ್ಲಿಸಿ ನಡೆದುಕೊಂಡು  ಕಾಲುದಾರಿಯಲ್ಲಿ ಕೆಳಗೆ ಇಳಿದರೆ ಜಲಪಾತದ ಸ್ಥಳಕ್ಕೆ ತಲುಪಲು ಸಾಧ್ಯ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

9 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago