Advertisement
MIRROR FOCUS

ಗ್ರಾಮೀಣ ಭಾಗದ ಸುಂದರ ತಾಣ :ಹಾಲ್ನೊರೆಯಂತೆ ತುಂಬಿ ಹರಿಯುವ ಚಾಮಡ್ಕ ಜಲಪಾತ…!

Share

ಗ್ರಾಮೀಣ ಭಾಗದ ಪ್ರಕೃತಿ ಸೌಂದರ್ಯಗಳು ನೋಡಲು ಖುಷಿ. ಇಂದಿಗೂ ಸಹಜತೆಯನ್ನು ಕಾಯ್ದುಕೊಂಡಿರುವ ಜಲಪಾತಗಳು, ಪ್ರಕೃತಿ ತಾಣಗಳು ಮನಸ್ಸಿಗೆ ಹೆಚ್ಚು ಖುಷಿ ಕೊಡುತ್ತವೆ. ಇದರ ಜೊತೆಗೆ ಎಚ್ಚರಿಕೆಯೂ ಇದೆ. ಇದೇ ಸೌಂದರ್ಯುವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಕಾರಣದಿಂದ ಫೋಕಸ್..


ಮಳೆ ಬಂತೆಂದರೆ ಬಹುತೇಕ ಜಲಪಾತಗಳು ಮೈತುಂಬಿ ಹರಿಯುತ್ತದೆ. ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದಲ್ಲಿನ ಚಾಮಡ್ಕ ಜಲಪಾತವೂ ಮೈತುಂಬಿ ಹರಿಯಲು ಆರಂಭಿಸುತ್ತದೆ. ವಿಶೇಷವೆಂದರೆ ಬೇರೆ ಕಡೆಗಳಲ್ಲಿ ಎಲ್ಲಿಯೂ ಕಾಣ ಸಿಗದ ರೀತಿಯ ಚಾಮಡ್ಕ ಜಲಪಾತದ ನೀರು ಪಶ್ಚಿಮ ದಿಕ್ಕಿನಿಂದ ಪೂರ್ವ ಧಿಕ್ಕಿಗೆ ಹರಿಯುತ್ತದೆ. ಹಾಲ್ನೊರೆಯಂತೆ ಹರಿಯುವ ಈ ಜಲಪಾತ ಹಿರಿಯ ಸಾಹಿತಿ ಡಾ.ಶಿವರಾಮ ಕಾರಂತ ಅವರಂತಹವರಿಗೂ ಪ್ರೇರಣೆ ನೀಡಿತ್ತು.

ಬಂಟಮಲೆಯಲ್ಲಿ ಹುಟ್ಟುವ ಈ ನೀರಿನ ತೊರೆ ಚಾಮಡ್ಕ ಜಲಪಾತ ಸೃಷ್ಠಿಸಿ ಕಂದಡ್ಕದ ಕೂಟೇಲಿನಲ್ಲಿ ಪಯಸ್ವಿನಿ ನದಿ ಸೇರುತ್ತದೆ. ಸೇತುವೆ ಕೆಳಭಾಗದಲ್ಲಿ ಹರಿದು ಬರುವ ನೀರು ಎತ್ತರದಿಂದ ಕೆಳಗೆ ಬೀಳುವುದು ಮೈನವಿರೇಳಿಸುವಂತಹದ್ದು. ಅಲ್ಲಿಂದ ಕೆಳಬೀಳುವ ನೀರು ಮೂರು ತೊರೆಗಳಾಗಿ ಹರಿಯುತ್ತಾ ಹೋಗುವುದರಿಂದ ಅಪಾಯಕಾರಿಯೂ ಆಗಿರುವುದಿಲ್ಲ. ಮೇಲ್ನೋಟಕ್ಕೆ ನೀರಿನ ಪ್ರವಾಹವೇ ಕಾಣಿಸಿದರೂ ಕೆಳಗೆ ಹೋಗಿ ನಿಂತಾಗ ಅದರ ಸೊಬಗು ಖುಷಿ ಕೊಡುತ್ತದೆ.

ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ:ಕಳೆದ ಎರಡು ವಾರದ ಹಿಂದೆ ಎಡೆಬಿಡದ್ದೆ ಸುರಿಯುತ್ತಿದ್ದ ಮಳೆಯಿಂದ ಇಂದಿಗೂ ನೀರಿನ ಹರಿವಿನ ಮಟ್ಟದಲ್ಲಿ ಹೆಚ್ಚಳವಿದ್ದು ಪ್ರವಾಸಿಗರು ನಿತ್ಯವೂ ಬರುತ್ತಲೇ ಇದ್ದಾರೆ. ಪುಟ್ಟ ಮಕ್ಕಳಿಂದ ವಯೋವೃದ್ದರೂ ಆತಂಕವಿಲ್ಲದೇ ಓಡಾಡಬಹುದಾಗಿದೆ. ಸುತ್ತಮುತ್ತಲಿನ ಮನೆಗಳ ಮಕ್ಕಳು ರಜಾ ದಿನಗಳನ್ನು ಇಲ್ಲಿಯೇ ಕಳೆಯುತ್ತಿರುತ್ತಾರೆ. ಒಂದೆರಡು ಕಿರು ಚಿತ್ರಗಳೂ ಇಲ್ಲಿ ಚಿತ್ರೀಕರಣವಾಗಿದೆ.  ಅಂದು ಸಾಹಿತಿ ಡಾ.ಶಿವರಾಮ ಕಾರಂತ ಅವರು ಇದೇ ಜಲಪಾತದ ಪಕ್ಕವೇ ಕುಳಿತು ಕಾದಂಬರಿಯನ್ನು ಬರೆದಿದ್ದರು ಎಂದು ಸ್ಥಳೀಯರು ಹೇಳುತ್ತಾರೆ.

ಹೀಗೆ ಹೋಗಬಹುದು :ಬೆಳ್ಳಾರೆಯಿಂದ 10 ಕಿ.ಮಿ ದೂರದಲ್ಲಿರುವ ಜಲಪಾತಕ್ಕೆ ಹೋಗಲು ಸುಗಮವಾದ ದಾರಿಯಿದೆ. ಕಾಡು ಬದಿಯ ಮಾರ್ಗದಲ್ಲೇ ಬಸ್ಸು ಅಥವಾ ವಾಹನದಲ್ಲಿ ಕುಕ್ಕುಜಡ್ಕ ಮಾರ್ಗವಾಗಿ ಕಲ್ಮಡ್ಕ ರಸ್ತೆಯ ಮೂಲಕ ಪ್ರಯಾಣ ಮುಂದುವರಿಸಿದಾಗ ಡಿ.ಆರ್.ಜಿ ವೃತ್ತದಲ್ಲಿ ಬಲಬದಿಯಾಗಿ ಅರ್ಧ ಕಿ.ಮೀ ಕ್ರಮಿಸುವಷ್ಟರಲ್ಲಿ ಭೋರ್ಗರೆಯುವ ಜಲಪಾತದ ಸೊಬಗು ಕಾಣುತ್ತದೆ. ಸೇತುವೆ ಬದಿಯಲ್ಲೇ ವಾಹನ ನಿಲ್ಲಿಸಿ ನಡೆದುಕೊಂಡು  ಕಾಲುದಾರಿಯಲ್ಲಿ ಕೆಳಗೆ ಇಳಿದರೆ ಜಲಪಾತದ ಸ್ಥಳಕ್ಕೆ ತಲುಪಲು ಸಾಧ್ಯ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

5 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

23 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago