Advertisement
MIRROR FOCUS

ಗ್ರಾಮೀಣ ಭಾಗದ ಸುಂದರ ತಾಣ :ಹಾಲ್ನೊರೆಯಂತೆ ತುಂಬಿ ಹರಿಯುವ ಚಾಮಡ್ಕ ಜಲಪಾತ…!

Share

ಗ್ರಾಮೀಣ ಭಾಗದ ಪ್ರಕೃತಿ ಸೌಂದರ್ಯಗಳು ನೋಡಲು ಖುಷಿ. ಇಂದಿಗೂ ಸಹಜತೆಯನ್ನು ಕಾಯ್ದುಕೊಂಡಿರುವ ಜಲಪಾತಗಳು, ಪ್ರಕೃತಿ ತಾಣಗಳು ಮನಸ್ಸಿಗೆ ಹೆಚ್ಚು ಖುಷಿ ಕೊಡುತ್ತವೆ. ಇದರ ಜೊತೆಗೆ ಎಚ್ಚರಿಕೆಯೂ ಇದೆ. ಇದೇ ಸೌಂದರ್ಯುವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಕಾರಣದಿಂದ ಫೋಕಸ್..

Advertisement

ಮಳೆ ಬಂತೆಂದರೆ ಬಹುತೇಕ ಜಲಪಾತಗಳು ಮೈತುಂಬಿ ಹರಿಯುತ್ತದೆ. ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದಲ್ಲಿನ ಚಾಮಡ್ಕ ಜಲಪಾತವೂ ಮೈತುಂಬಿ ಹರಿಯಲು ಆರಂಭಿಸುತ್ತದೆ. ವಿಶೇಷವೆಂದರೆ ಬೇರೆ ಕಡೆಗಳಲ್ಲಿ ಎಲ್ಲಿಯೂ ಕಾಣ ಸಿಗದ ರೀತಿಯ ಚಾಮಡ್ಕ ಜಲಪಾತದ ನೀರು ಪಶ್ಚಿಮ ದಿಕ್ಕಿನಿಂದ ಪೂರ್ವ ಧಿಕ್ಕಿಗೆ ಹರಿಯುತ್ತದೆ. ಹಾಲ್ನೊರೆಯಂತೆ ಹರಿಯುವ ಈ ಜಲಪಾತ ಹಿರಿಯ ಸಾಹಿತಿ ಡಾ.ಶಿವರಾಮ ಕಾರಂತ ಅವರಂತಹವರಿಗೂ ಪ್ರೇರಣೆ ನೀಡಿತ್ತು.

ಬಂಟಮಲೆಯಲ್ಲಿ ಹುಟ್ಟುವ ಈ ನೀರಿನ ತೊರೆ ಚಾಮಡ್ಕ ಜಲಪಾತ ಸೃಷ್ಠಿಸಿ ಕಂದಡ್ಕದ ಕೂಟೇಲಿನಲ್ಲಿ ಪಯಸ್ವಿನಿ ನದಿ ಸೇರುತ್ತದೆ. ಸೇತುವೆ ಕೆಳಭಾಗದಲ್ಲಿ ಹರಿದು ಬರುವ ನೀರು ಎತ್ತರದಿಂದ ಕೆಳಗೆ ಬೀಳುವುದು ಮೈನವಿರೇಳಿಸುವಂತಹದ್ದು. ಅಲ್ಲಿಂದ ಕೆಳಬೀಳುವ ನೀರು ಮೂರು ತೊರೆಗಳಾಗಿ ಹರಿಯುತ್ತಾ ಹೋಗುವುದರಿಂದ ಅಪಾಯಕಾರಿಯೂ ಆಗಿರುವುದಿಲ್ಲ. ಮೇಲ್ನೋಟಕ್ಕೆ ನೀರಿನ ಪ್ರವಾಹವೇ ಕಾಣಿಸಿದರೂ ಕೆಳಗೆ ಹೋಗಿ ನಿಂತಾಗ ಅದರ ಸೊಬಗು ಖುಷಿ ಕೊಡುತ್ತದೆ.

ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ:ಕಳೆದ ಎರಡು ವಾರದ ಹಿಂದೆ ಎಡೆಬಿಡದ್ದೆ ಸುರಿಯುತ್ತಿದ್ದ ಮಳೆಯಿಂದ ಇಂದಿಗೂ ನೀರಿನ ಹರಿವಿನ ಮಟ್ಟದಲ್ಲಿ ಹೆಚ್ಚಳವಿದ್ದು ಪ್ರವಾಸಿಗರು ನಿತ್ಯವೂ ಬರುತ್ತಲೇ ಇದ್ದಾರೆ. ಪುಟ್ಟ ಮಕ್ಕಳಿಂದ ವಯೋವೃದ್ದರೂ ಆತಂಕವಿಲ್ಲದೇ ಓಡಾಡಬಹುದಾಗಿದೆ. ಸುತ್ತಮುತ್ತಲಿನ ಮನೆಗಳ ಮಕ್ಕಳು ರಜಾ ದಿನಗಳನ್ನು ಇಲ್ಲಿಯೇ ಕಳೆಯುತ್ತಿರುತ್ತಾರೆ. ಒಂದೆರಡು ಕಿರು ಚಿತ್ರಗಳೂ ಇಲ್ಲಿ ಚಿತ್ರೀಕರಣವಾಗಿದೆ.  ಅಂದು ಸಾಹಿತಿ ಡಾ.ಶಿವರಾಮ ಕಾರಂತ ಅವರು ಇದೇ ಜಲಪಾತದ ಪಕ್ಕವೇ ಕುಳಿತು ಕಾದಂಬರಿಯನ್ನು ಬರೆದಿದ್ದರು ಎಂದು ಸ್ಥಳೀಯರು ಹೇಳುತ್ತಾರೆ.

ಹೀಗೆ ಹೋಗಬಹುದು :ಬೆಳ್ಳಾರೆಯಿಂದ 10 ಕಿ.ಮಿ ದೂರದಲ್ಲಿರುವ ಜಲಪಾತಕ್ಕೆ ಹೋಗಲು ಸುಗಮವಾದ ದಾರಿಯಿದೆ. ಕಾಡು ಬದಿಯ ಮಾರ್ಗದಲ್ಲೇ ಬಸ್ಸು ಅಥವಾ ವಾಹನದಲ್ಲಿ ಕುಕ್ಕುಜಡ್ಕ ಮಾರ್ಗವಾಗಿ ಕಲ್ಮಡ್ಕ ರಸ್ತೆಯ ಮೂಲಕ ಪ್ರಯಾಣ ಮುಂದುವರಿಸಿದಾಗ ಡಿ.ಆರ್.ಜಿ ವೃತ್ತದಲ್ಲಿ ಬಲಬದಿಯಾಗಿ ಅರ್ಧ ಕಿ.ಮೀ ಕ್ರಮಿಸುವಷ್ಟರಲ್ಲಿ ಭೋರ್ಗರೆಯುವ ಜಲಪಾತದ ಸೊಬಗು ಕಾಣುತ್ತದೆ. ಸೇತುವೆ ಬದಿಯಲ್ಲೇ ವಾಹನ ನಿಲ್ಲಿಸಿ ನಡೆದುಕೊಂಡು  ಕಾಲುದಾರಿಯಲ್ಲಿ ಕೆಳಗೆ ಇಳಿದರೆ ಜಲಪಾತದ ಸ್ಥಳಕ್ಕೆ ತಲುಪಲು ಸಾಧ್ಯ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

11 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago