ಮಂಗಳೂರು : ಪ್ರಾಕೃತಿಕ ವಿಕೋಪಗಳಿಂದ ಹಾನಿಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳ ದುರಸ್ತಿ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮೀನುಗಾರಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ರಸ್ತೆಗಳು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿವೆ. ವಿಪತ್ತು ಪರಿಹಾರ ನಿಧಿಯಿಂದ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆಯಾಗಿದೆ. ಆದರೂ ಕಾಮಗಾರಿ ಇನ್ನೂ ಆರಂಭವಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೂಡಲೇ ಯಾವುದೇ ವಿಳಂಭವಿಲ್ಲದೇ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಲು ಪಂಚಾಯತ್ರಾಜ್ ಇಂಜಿನಿಯರಿಂಗ್ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ರಾಜ್ಯ ಸರಕಾರ ಪ್ರತೀ ಕಿಲೋ ಮೀಟರ್ ರಸ್ತೆ ದುರಸ್ತಿಗೆ ನೀಡುತ್ತಿರುವ ಅನುದಾನದಿಂದ ಇಡೀ ರಸ್ತೆ ದುರಸ್ತಿಗೆ ಬದಲು ಅತೀ ಹೆಚ್ಚು ಹಾನಿಗೀಡಾದ ಭಾಗದ ರಸ್ತೆಯನ್ನು ಆದ್ಯತೆಯಲ್ಲಿ ದುರಸ್ತಿ ಮಾಡಬೇಕು. ಹೆಚ್ಚುವರಿ ಅನುದಾನ ಅಗತ್ಯವಿದ್ದಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ ಇದ್ದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…