ಮಂಗಳೂರು : ಪ್ರಾಕೃತಿಕ ವಿಕೋಪಗಳಿಂದ ಹಾನಿಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳ ದುರಸ್ತಿ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮೀನುಗಾರಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ರಸ್ತೆಗಳು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿವೆ. ವಿಪತ್ತು ಪರಿಹಾರ ನಿಧಿಯಿಂದ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆಯಾಗಿದೆ. ಆದರೂ ಕಾಮಗಾರಿ ಇನ್ನೂ ಆರಂಭವಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೂಡಲೇ ಯಾವುದೇ ವಿಳಂಭವಿಲ್ಲದೇ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಲು ಪಂಚಾಯತ್ರಾಜ್ ಇಂಜಿನಿಯರಿಂಗ್ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ರಾಜ್ಯ ಸರಕಾರ ಪ್ರತೀ ಕಿಲೋ ಮೀಟರ್ ರಸ್ತೆ ದುರಸ್ತಿಗೆ ನೀಡುತ್ತಿರುವ ಅನುದಾನದಿಂದ ಇಡೀ ರಸ್ತೆ ದುರಸ್ತಿಗೆ ಬದಲು ಅತೀ ಹೆಚ್ಚು ಹಾನಿಗೀಡಾದ ಭಾಗದ ರಸ್ತೆಯನ್ನು ಆದ್ಯತೆಯಲ್ಲಿ ದುರಸ್ತಿ ಮಾಡಬೇಕು. ಹೆಚ್ಚುವರಿ ಅನುದಾನ ಅಗತ್ಯವಿದ್ದಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ ಇದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…