ಮಂಗಳೂರು : ಪ್ರಾಕೃತಿಕ ವಿಕೋಪಗಳಿಂದ ಹಾನಿಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳ ದುರಸ್ತಿ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮೀನುಗಾರಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ರಸ್ತೆಗಳು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿವೆ. ವಿಪತ್ತು ಪರಿಹಾರ ನಿಧಿಯಿಂದ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆಯಾಗಿದೆ. ಆದರೂ ಕಾಮಗಾರಿ ಇನ್ನೂ ಆರಂಭವಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೂಡಲೇ ಯಾವುದೇ ವಿಳಂಭವಿಲ್ಲದೇ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಲು ಪಂಚಾಯತ್ರಾಜ್ ಇಂಜಿನಿಯರಿಂಗ್ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ರಾಜ್ಯ ಸರಕಾರ ಪ್ರತೀ ಕಿಲೋ ಮೀಟರ್ ರಸ್ತೆ ದುರಸ್ತಿಗೆ ನೀಡುತ್ತಿರುವ ಅನುದಾನದಿಂದ ಇಡೀ ರಸ್ತೆ ದುರಸ್ತಿಗೆ ಬದಲು ಅತೀ ಹೆಚ್ಚು ಹಾನಿಗೀಡಾದ ಭಾಗದ ರಸ್ತೆಯನ್ನು ಆದ್ಯತೆಯಲ್ಲಿ ದುರಸ್ತಿ ಮಾಡಬೇಕು. ಹೆಚ್ಚುವರಿ ಅನುದಾನ ಅಗತ್ಯವಿದ್ದಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ ಇದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…