ಸುದ್ದಿಗಳು

ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ ವೈಫೈ ಸಂಪರ್ಕ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನವದೆಹಲಿ: ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ 10 Mbpsನಿಂದ 100 Mbps ವೇಗದ ಸಂಪರ್ಕವನ್ನು ಹೊಂದಿರುವ ವೈ-ಫೈ ಅನ್ನು ಒದಗಿಸುವ ಬದ್ಧತೆಯನ್ನು ಕೇಂದ್ರ ಸರಕಾರ ಹೇಳಿದೆ. ಅಲ್ಲದೇ ಭಾರತ್‌ನೆಟ್ ಕೂಡ 1 GBPS ಸಂಪರ್ಕವನ್ನು ನೀಡಲು ಯೋಜಿಸಿದೆ. ಇದನ್ನು 10 GBPS ಮತ್ತು ಸಿ-ಡಾಟ್‌ನ XGS-PONವರೆಗೆ ವಿಸ್ತರಿಸಬಹುದಾಗಿದೆ.

Advertisement
Advertisement

ಸಿ-ಡಾಟ್‌ನ 36 ನೇ ಪ್ರತಿಷ್ಠಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರದ ರಾಜ್ಯ ಖಾತೆ ಸಂವಹನ ಸಚಿವ ಸಂಜಯ್ ಶಮರಾವ್ ಧೋತ್ರೆ ಅವರು ಈ ಮಾಹಿತಿಯನ್ನು ನೀಡಿದ್ದಾರೆ. “ಭಾರತವು ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ, ಇದು ಸ್ವಾವಲಂಬಿ ಭಾರತೀಯ ಗ್ರಾಮದ ಕನಸನ್ನು ಕಂಡಿದ್ದ ಬಾಪುಗೆ ನೀಡುತ್ತಿರುವ ನಿಜವಾದ ಗೌರವವಾಗಿದೆ. ಸಿ-ಡಾಟ್‌ನ ಸಿ-ಸ್ಯಾಟ್-ಫೈ ತಂತ್ರಜ್ಞಾನವು ಭಾರತೀಯ ಜನರಿಗೆ, ವಿಶೇಷವಾಗಿ ಗ್ರಾಮೀಣ ಮತ್ತು ದೂರದ ಪ್ರದೇಶಗಳ ಜನರಿಗೆ ಪ್ರಯೋಜನಕಾರಿಯಾಗಿದೆ. ಟೆಲಿಫೋನ್ ಮತ್ತು ವೈ-ಫೈ ಸೌಲಭ್ಯಗಳು ದೇಶದ ಎಲ್ಲಾ ಮೂಲೆಗಳಲ್ಲಿನ ಯಾವುದೇ ಮೊಬೈಲ್ ಫೋನ್‌ನಲ್ಲಿ ಲಭ್ಯವಾಗುವುದರಿಂದ ಇದು ಜನರ ಸಬಲೀಕರಣಕ್ಕೆ ನಾಂದಿ ಹಾಡುತ್ತದೆ” ಎಂದು ಧೋತ್ರೆ ಹೇಳಿದರು.

ಫೈಬರ್ ಕಷ್ಟ ಮತ್ತು ಇಂಟರ್ನೆಟ್ ಲಭ್ಯವಿಲ್ಲದ ದೂರದ ಪ್ರದೇಶಗಳಲ್ಲಿನ ಜನರನ್ನು ಈ ಹೊಸ ತಂತ್ರಜ್ಞಾನವು ಉಪಗ್ರಹಗಳ ಮೂಲಕ ಸಂಪರ್ಕಿಸುವುದರಿಂದ ಅವರನ್ನು ಮುಖ್ಯವಾಹಿನಿಗೆ ತರಲು ಸಹಾಯ ಮಾಡುತ್ತದೆ ಎಂದರು.ಸಿ-ಡಾಟ್‌ನ ಇತ್ತೀಚಿನ ಆವಿಷ್ಕಾರಗಳಾದ “ಸಿ-ಸ್ಯಾಟ್-ಫೈ ಮತ್ತು “ಸಿ-ಡಾಟ್‌ನ ಇಂಟರೊಪರೇಬಲ್ ಸೆಟ್ ಟಾಪ್ ಬಾಕ್ಸ್ (ಸಿಐಎಸ್‌ಟಿಬಿ)ಗಳಿಗೆ ಸಚಿವರು ಚಾಲನೆಯನ್ನು ನೀಡಿದರು. ದೂರದ ದ್ವೀಪಗಳು ಮತ್ತು ಕಷ್ಟಕರವಾದ ಭೂಪ್ರದೇಶಗಳು ಸೇರಿದಂತೆ ಅಸುರಕ್ಷಿತ ಪ್ರದೇಶಗಳಿಗೆ ಸಂಪರ್ಕವನ್ನು ವಿಸ್ತರಿಸಲು ಸಿ-ಸ್ಯಾಟ್-ಫೈ (ಸಿ-ಡಾಟ್ ಸ್ಯಾಟಲೈಟ್ ವೈಫೈ) ವೈರ್‌ಲೆಸ್ ಮತ್ತು ಉಪಗ್ರಹ ಸಂವಹನದ ಅತ್ಯುತ್ತಮ ಬಳಕೆಯನ್ನು ಆಧರಿಸಿದೆ.

ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲೂ ಇದು ಅತ್ಯುತ್ತಮ ರೀತಿಯಲ್ಲಿ ಜನರ ನೆರವಿಗೆ ಧಾವಿಸಲು ಸಹಾಯವನ್ನು ಮಾಡಬಲ್ಲವು.

(ಕೃಪೆ- ನ್ಯೂಸ್13)

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

8 hours ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

9 hours ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

9 hours ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

18 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

20 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

22 hours ago