ಸುದ್ದಿಗಳು

ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ ವೈಫೈ ಸಂಪರ್ಕ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನವದೆಹಲಿ: ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ 10 Mbpsನಿಂದ 100 Mbps ವೇಗದ ಸಂಪರ್ಕವನ್ನು ಹೊಂದಿರುವ ವೈ-ಫೈ ಅನ್ನು ಒದಗಿಸುವ ಬದ್ಧತೆಯನ್ನು ಕೇಂದ್ರ ಸರಕಾರ ಹೇಳಿದೆ. ಅಲ್ಲದೇ ಭಾರತ್‌ನೆಟ್ ಕೂಡ 1 GBPS ಸಂಪರ್ಕವನ್ನು ನೀಡಲು ಯೋಜಿಸಿದೆ. ಇದನ್ನು 10 GBPS ಮತ್ತು ಸಿ-ಡಾಟ್‌ನ XGS-PONವರೆಗೆ ವಿಸ್ತರಿಸಬಹುದಾಗಿದೆ.

Advertisement
Advertisement

ಸಿ-ಡಾಟ್‌ನ 36 ನೇ ಪ್ರತಿಷ್ಠಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರದ ರಾಜ್ಯ ಖಾತೆ ಸಂವಹನ ಸಚಿವ ಸಂಜಯ್ ಶಮರಾವ್ ಧೋತ್ರೆ ಅವರು ಈ ಮಾಹಿತಿಯನ್ನು ನೀಡಿದ್ದಾರೆ. “ಭಾರತವು ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ, ಇದು ಸ್ವಾವಲಂಬಿ ಭಾರತೀಯ ಗ್ರಾಮದ ಕನಸನ್ನು ಕಂಡಿದ್ದ ಬಾಪುಗೆ ನೀಡುತ್ತಿರುವ ನಿಜವಾದ ಗೌರವವಾಗಿದೆ. ಸಿ-ಡಾಟ್‌ನ ಸಿ-ಸ್ಯಾಟ್-ಫೈ ತಂತ್ರಜ್ಞಾನವು ಭಾರತೀಯ ಜನರಿಗೆ, ವಿಶೇಷವಾಗಿ ಗ್ರಾಮೀಣ ಮತ್ತು ದೂರದ ಪ್ರದೇಶಗಳ ಜನರಿಗೆ ಪ್ರಯೋಜನಕಾರಿಯಾಗಿದೆ. ಟೆಲಿಫೋನ್ ಮತ್ತು ವೈ-ಫೈ ಸೌಲಭ್ಯಗಳು ದೇಶದ ಎಲ್ಲಾ ಮೂಲೆಗಳಲ್ಲಿನ ಯಾವುದೇ ಮೊಬೈಲ್ ಫೋನ್‌ನಲ್ಲಿ ಲಭ್ಯವಾಗುವುದರಿಂದ ಇದು ಜನರ ಸಬಲೀಕರಣಕ್ಕೆ ನಾಂದಿ ಹಾಡುತ್ತದೆ” ಎಂದು ಧೋತ್ರೆ ಹೇಳಿದರು.

ಫೈಬರ್ ಕಷ್ಟ ಮತ್ತು ಇಂಟರ್ನೆಟ್ ಲಭ್ಯವಿಲ್ಲದ ದೂರದ ಪ್ರದೇಶಗಳಲ್ಲಿನ ಜನರನ್ನು ಈ ಹೊಸ ತಂತ್ರಜ್ಞಾನವು ಉಪಗ್ರಹಗಳ ಮೂಲಕ ಸಂಪರ್ಕಿಸುವುದರಿಂದ ಅವರನ್ನು ಮುಖ್ಯವಾಹಿನಿಗೆ ತರಲು ಸಹಾಯ ಮಾಡುತ್ತದೆ ಎಂದರು.ಸಿ-ಡಾಟ್‌ನ ಇತ್ತೀಚಿನ ಆವಿಷ್ಕಾರಗಳಾದ “ಸಿ-ಸ್ಯಾಟ್-ಫೈ ಮತ್ತು “ಸಿ-ಡಾಟ್‌ನ ಇಂಟರೊಪರೇಬಲ್ ಸೆಟ್ ಟಾಪ್ ಬಾಕ್ಸ್ (ಸಿಐಎಸ್‌ಟಿಬಿ)ಗಳಿಗೆ ಸಚಿವರು ಚಾಲನೆಯನ್ನು ನೀಡಿದರು. ದೂರದ ದ್ವೀಪಗಳು ಮತ್ತು ಕಷ್ಟಕರವಾದ ಭೂಪ್ರದೇಶಗಳು ಸೇರಿದಂತೆ ಅಸುರಕ್ಷಿತ ಪ್ರದೇಶಗಳಿಗೆ ಸಂಪರ್ಕವನ್ನು ವಿಸ್ತರಿಸಲು ಸಿ-ಸ್ಯಾಟ್-ಫೈ (ಸಿ-ಡಾಟ್ ಸ್ಯಾಟಲೈಟ್ ವೈಫೈ) ವೈರ್‌ಲೆಸ್ ಮತ್ತು ಉಪಗ್ರಹ ಸಂವಹನದ ಅತ್ಯುತ್ತಮ ಬಳಕೆಯನ್ನು ಆಧರಿಸಿದೆ.

ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲೂ ಇದು ಅತ್ಯುತ್ತಮ ರೀತಿಯಲ್ಲಿ ಜನರ ನೆರವಿಗೆ ಧಾವಿಸಲು ಸಹಾಯವನ್ನು ಮಾಡಬಲ್ಲವು.

(ಕೃಪೆ- ನ್ಯೂಸ್13)

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

8 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

8 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

9 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

15 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

16 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

23 hours ago