Advertisement
ಸುದ್ದಿಗಳು

ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ ವೈಫೈ ಸಂಪರ್ಕ

Share

ನವದೆಹಲಿ: ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ 10 Mbpsನಿಂದ 100 Mbps ವೇಗದ ಸಂಪರ್ಕವನ್ನು ಹೊಂದಿರುವ ವೈ-ಫೈ ಅನ್ನು ಒದಗಿಸುವ ಬದ್ಧತೆಯನ್ನು ಕೇಂದ್ರ ಸರಕಾರ ಹೇಳಿದೆ. ಅಲ್ಲದೇ ಭಾರತ್‌ನೆಟ್ ಕೂಡ 1 GBPS ಸಂಪರ್ಕವನ್ನು ನೀಡಲು ಯೋಜಿಸಿದೆ. ಇದನ್ನು 10 GBPS ಮತ್ತು ಸಿ-ಡಾಟ್‌ನ XGS-PONವರೆಗೆ ವಿಸ್ತರಿಸಬಹುದಾಗಿದೆ.

ಸಿ-ಡಾಟ್‌ನ 36 ನೇ ಪ್ರತಿಷ್ಠಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರದ ರಾಜ್ಯ ಖಾತೆ ಸಂವಹನ ಸಚಿವ ಸಂಜಯ್ ಶಮರಾವ್ ಧೋತ್ರೆ ಅವರು ಈ ಮಾಹಿತಿಯನ್ನು ನೀಡಿದ್ದಾರೆ. “ಭಾರತವು ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ, ಇದು ಸ್ವಾವಲಂಬಿ ಭಾರತೀಯ ಗ್ರಾಮದ ಕನಸನ್ನು ಕಂಡಿದ್ದ ಬಾಪುಗೆ ನೀಡುತ್ತಿರುವ ನಿಜವಾದ ಗೌರವವಾಗಿದೆ. ಸಿ-ಡಾಟ್‌ನ ಸಿ-ಸ್ಯಾಟ್-ಫೈ ತಂತ್ರಜ್ಞಾನವು ಭಾರತೀಯ ಜನರಿಗೆ, ವಿಶೇಷವಾಗಿ ಗ್ರಾಮೀಣ ಮತ್ತು ದೂರದ ಪ್ರದೇಶಗಳ ಜನರಿಗೆ ಪ್ರಯೋಜನಕಾರಿಯಾಗಿದೆ. ಟೆಲಿಫೋನ್ ಮತ್ತು ವೈ-ಫೈ ಸೌಲಭ್ಯಗಳು ದೇಶದ ಎಲ್ಲಾ ಮೂಲೆಗಳಲ್ಲಿನ ಯಾವುದೇ ಮೊಬೈಲ್ ಫೋನ್‌ನಲ್ಲಿ ಲಭ್ಯವಾಗುವುದರಿಂದ ಇದು ಜನರ ಸಬಲೀಕರಣಕ್ಕೆ ನಾಂದಿ ಹಾಡುತ್ತದೆ” ಎಂದು ಧೋತ್ರೆ ಹೇಳಿದರು.

ಫೈಬರ್ ಕಷ್ಟ ಮತ್ತು ಇಂಟರ್ನೆಟ್ ಲಭ್ಯವಿಲ್ಲದ ದೂರದ ಪ್ರದೇಶಗಳಲ್ಲಿನ ಜನರನ್ನು ಈ ಹೊಸ ತಂತ್ರಜ್ಞಾನವು ಉಪಗ್ರಹಗಳ ಮೂಲಕ ಸಂಪರ್ಕಿಸುವುದರಿಂದ ಅವರನ್ನು ಮುಖ್ಯವಾಹಿನಿಗೆ ತರಲು ಸಹಾಯ ಮಾಡುತ್ತದೆ ಎಂದರು.ಸಿ-ಡಾಟ್‌ನ ಇತ್ತೀಚಿನ ಆವಿಷ್ಕಾರಗಳಾದ “ಸಿ-ಸ್ಯಾಟ್-ಫೈ ಮತ್ತು “ಸಿ-ಡಾಟ್‌ನ ಇಂಟರೊಪರೇಬಲ್ ಸೆಟ್ ಟಾಪ್ ಬಾಕ್ಸ್ (ಸಿಐಎಸ್‌ಟಿಬಿ)ಗಳಿಗೆ ಸಚಿವರು ಚಾಲನೆಯನ್ನು ನೀಡಿದರು. ದೂರದ ದ್ವೀಪಗಳು ಮತ್ತು ಕಷ್ಟಕರವಾದ ಭೂಪ್ರದೇಶಗಳು ಸೇರಿದಂತೆ ಅಸುರಕ್ಷಿತ ಪ್ರದೇಶಗಳಿಗೆ ಸಂಪರ್ಕವನ್ನು ವಿಸ್ತರಿಸಲು ಸಿ-ಸ್ಯಾಟ್-ಫೈ (ಸಿ-ಡಾಟ್ ಸ್ಯಾಟಲೈಟ್ ವೈಫೈ) ವೈರ್‌ಲೆಸ್ ಮತ್ತು ಉಪಗ್ರಹ ಸಂವಹನದ ಅತ್ಯುತ್ತಮ ಬಳಕೆಯನ್ನು ಆಧರಿಸಿದೆ.

ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲೂ ಇದು ಅತ್ಯುತ್ತಮ ರೀತಿಯಲ್ಲಿ ಜನರ ನೆರವಿಗೆ ಧಾವಿಸಲು ಸಹಾಯವನ್ನು ಮಾಡಬಲ್ಲವು.

(ಕೃಪೆ- ನ್ಯೂಸ್13)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

5 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

5 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

6 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

7 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

20 hours ago