ನವದೆಹಲಿ: ಗ್ರಾಮ್ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ 10 Mbpsನಿಂದ 100 Mbps ವೇಗದ ಸಂಪರ್ಕವನ್ನು ಹೊಂದಿರುವ ವೈ-ಫೈ ಅನ್ನು ಒದಗಿಸುವ ಬದ್ಧತೆಯನ್ನು ಕೇಂದ್ರ ಸರಕಾರ ಹೇಳಿದೆ. ಅಲ್ಲದೇ ಭಾರತ್ನೆಟ್ ಕೂಡ 1 GBPS ಸಂಪರ್ಕವನ್ನು ನೀಡಲು ಯೋಜಿಸಿದೆ. ಇದನ್ನು 10 GBPS ಮತ್ತು ಸಿ-ಡಾಟ್ನ XGS-PONವರೆಗೆ ವಿಸ್ತರಿಸಬಹುದಾಗಿದೆ.
ಸಿ-ಡಾಟ್ನ 36 ನೇ ಪ್ರತಿಷ್ಠಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರದ ರಾಜ್ಯ ಖಾತೆ ಸಂವಹನ ಸಚಿವ ಸಂಜಯ್ ಶಮರಾವ್ ಧೋತ್ರೆ ಅವರು ಈ ಮಾಹಿತಿಯನ್ನು ನೀಡಿದ್ದಾರೆ. “ಭಾರತವು ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ, ಇದು ಸ್ವಾವಲಂಬಿ ಭಾರತೀಯ ಗ್ರಾಮದ ಕನಸನ್ನು ಕಂಡಿದ್ದ ಬಾಪುಗೆ ನೀಡುತ್ತಿರುವ ನಿಜವಾದ ಗೌರವವಾಗಿದೆ. ಸಿ-ಡಾಟ್ನ ಸಿ-ಸ್ಯಾಟ್-ಫೈ ತಂತ್ರಜ್ಞಾನವು ಭಾರತೀಯ ಜನರಿಗೆ, ವಿಶೇಷವಾಗಿ ಗ್ರಾಮೀಣ ಮತ್ತು ದೂರದ ಪ್ರದೇಶಗಳ ಜನರಿಗೆ ಪ್ರಯೋಜನಕಾರಿಯಾಗಿದೆ. ಟೆಲಿಫೋನ್ ಮತ್ತು ವೈ-ಫೈ ಸೌಲಭ್ಯಗಳು ದೇಶದ ಎಲ್ಲಾ ಮೂಲೆಗಳಲ್ಲಿನ ಯಾವುದೇ ಮೊಬೈಲ್ ಫೋನ್ನಲ್ಲಿ ಲಭ್ಯವಾಗುವುದರಿಂದ ಇದು ಜನರ ಸಬಲೀಕರಣಕ್ಕೆ ನಾಂದಿ ಹಾಡುತ್ತದೆ” ಎಂದು ಧೋತ್ರೆ ಹೇಳಿದರು.
ಫೈಬರ್ ಕಷ್ಟ ಮತ್ತು ಇಂಟರ್ನೆಟ್ ಲಭ್ಯವಿಲ್ಲದ ದೂರದ ಪ್ರದೇಶಗಳಲ್ಲಿನ ಜನರನ್ನು ಈ ಹೊಸ ತಂತ್ರಜ್ಞಾನವು ಉಪಗ್ರಹಗಳ ಮೂಲಕ ಸಂಪರ್ಕಿಸುವುದರಿಂದ ಅವರನ್ನು ಮುಖ್ಯವಾಹಿನಿಗೆ ತರಲು ಸಹಾಯ ಮಾಡುತ್ತದೆ ಎಂದರು.ಸಿ-ಡಾಟ್ನ ಇತ್ತೀಚಿನ ಆವಿಷ್ಕಾರಗಳಾದ “ಸಿ-ಸ್ಯಾಟ್-ಫೈ ಮತ್ತು “ಸಿ-ಡಾಟ್ನ ಇಂಟರೊಪರೇಬಲ್ ಸೆಟ್ ಟಾಪ್ ಬಾಕ್ಸ್ (ಸಿಐಎಸ್ಟಿಬಿ)ಗಳಿಗೆ ಸಚಿವರು ಚಾಲನೆಯನ್ನು ನೀಡಿದರು. ದೂರದ ದ್ವೀಪಗಳು ಮತ್ತು ಕಷ್ಟಕರವಾದ ಭೂಪ್ರದೇಶಗಳು ಸೇರಿದಂತೆ ಅಸುರಕ್ಷಿತ ಪ್ರದೇಶಗಳಿಗೆ ಸಂಪರ್ಕವನ್ನು ವಿಸ್ತರಿಸಲು ಸಿ-ಸ್ಯಾಟ್-ಫೈ (ಸಿ-ಡಾಟ್ ಸ್ಯಾಟಲೈಟ್ ವೈಫೈ) ವೈರ್ಲೆಸ್ ಮತ್ತು ಉಪಗ್ರಹ ಸಂವಹನದ ಅತ್ಯುತ್ತಮ ಬಳಕೆಯನ್ನು ಆಧರಿಸಿದೆ.
ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲೂ ಇದು ಅತ್ಯುತ್ತಮ ರೀತಿಯಲ್ಲಿ ಜನರ ನೆರವಿಗೆ ಧಾವಿಸಲು ಸಹಾಯವನ್ನು ಮಾಡಬಲ್ಲವು.
(ಕೃಪೆ- ನ್ಯೂಸ್13)
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.