Advertisement
ಸುದ್ದಿಗಳು

ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ ವೈಫೈ ಸಂಪರ್ಕ

Share

ನವದೆಹಲಿ: ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ 10 Mbpsನಿಂದ 100 Mbps ವೇಗದ ಸಂಪರ್ಕವನ್ನು ಹೊಂದಿರುವ ವೈ-ಫೈ ಅನ್ನು ಒದಗಿಸುವ ಬದ್ಧತೆಯನ್ನು ಕೇಂದ್ರ ಸರಕಾರ ಹೇಳಿದೆ. ಅಲ್ಲದೇ ಭಾರತ್‌ನೆಟ್ ಕೂಡ 1 GBPS ಸಂಪರ್ಕವನ್ನು ನೀಡಲು ಯೋಜಿಸಿದೆ. ಇದನ್ನು 10 GBPS ಮತ್ತು ಸಿ-ಡಾಟ್‌ನ XGS-PONವರೆಗೆ ವಿಸ್ತರಿಸಬಹುದಾಗಿದೆ.

Advertisement

ಸಿ-ಡಾಟ್‌ನ 36 ನೇ ಪ್ರತಿಷ್ಠಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರದ ರಾಜ್ಯ ಖಾತೆ ಸಂವಹನ ಸಚಿವ ಸಂಜಯ್ ಶಮರಾವ್ ಧೋತ್ರೆ ಅವರು ಈ ಮಾಹಿತಿಯನ್ನು ನೀಡಿದ್ದಾರೆ. “ಭಾರತವು ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ, ಇದು ಸ್ವಾವಲಂಬಿ ಭಾರತೀಯ ಗ್ರಾಮದ ಕನಸನ್ನು ಕಂಡಿದ್ದ ಬಾಪುಗೆ ನೀಡುತ್ತಿರುವ ನಿಜವಾದ ಗೌರವವಾಗಿದೆ. ಸಿ-ಡಾಟ್‌ನ ಸಿ-ಸ್ಯಾಟ್-ಫೈ ತಂತ್ರಜ್ಞಾನವು ಭಾರತೀಯ ಜನರಿಗೆ, ವಿಶೇಷವಾಗಿ ಗ್ರಾಮೀಣ ಮತ್ತು ದೂರದ ಪ್ರದೇಶಗಳ ಜನರಿಗೆ ಪ್ರಯೋಜನಕಾರಿಯಾಗಿದೆ. ಟೆಲಿಫೋನ್ ಮತ್ತು ವೈ-ಫೈ ಸೌಲಭ್ಯಗಳು ದೇಶದ ಎಲ್ಲಾ ಮೂಲೆಗಳಲ್ಲಿನ ಯಾವುದೇ ಮೊಬೈಲ್ ಫೋನ್‌ನಲ್ಲಿ ಲಭ್ಯವಾಗುವುದರಿಂದ ಇದು ಜನರ ಸಬಲೀಕರಣಕ್ಕೆ ನಾಂದಿ ಹಾಡುತ್ತದೆ” ಎಂದು ಧೋತ್ರೆ ಹೇಳಿದರು.

ಫೈಬರ್ ಕಷ್ಟ ಮತ್ತು ಇಂಟರ್ನೆಟ್ ಲಭ್ಯವಿಲ್ಲದ ದೂರದ ಪ್ರದೇಶಗಳಲ್ಲಿನ ಜನರನ್ನು ಈ ಹೊಸ ತಂತ್ರಜ್ಞಾನವು ಉಪಗ್ರಹಗಳ ಮೂಲಕ ಸಂಪರ್ಕಿಸುವುದರಿಂದ ಅವರನ್ನು ಮುಖ್ಯವಾಹಿನಿಗೆ ತರಲು ಸಹಾಯ ಮಾಡುತ್ತದೆ ಎಂದರು.ಸಿ-ಡಾಟ್‌ನ ಇತ್ತೀಚಿನ ಆವಿಷ್ಕಾರಗಳಾದ “ಸಿ-ಸ್ಯಾಟ್-ಫೈ ಮತ್ತು “ಸಿ-ಡಾಟ್‌ನ ಇಂಟರೊಪರೇಬಲ್ ಸೆಟ್ ಟಾಪ್ ಬಾಕ್ಸ್ (ಸಿಐಎಸ್‌ಟಿಬಿ)ಗಳಿಗೆ ಸಚಿವರು ಚಾಲನೆಯನ್ನು ನೀಡಿದರು. ದೂರದ ದ್ವೀಪಗಳು ಮತ್ತು ಕಷ್ಟಕರವಾದ ಭೂಪ್ರದೇಶಗಳು ಸೇರಿದಂತೆ ಅಸುರಕ್ಷಿತ ಪ್ರದೇಶಗಳಿಗೆ ಸಂಪರ್ಕವನ್ನು ವಿಸ್ತರಿಸಲು ಸಿ-ಸ್ಯಾಟ್-ಫೈ (ಸಿ-ಡಾಟ್ ಸ್ಯಾಟಲೈಟ್ ವೈಫೈ) ವೈರ್‌ಲೆಸ್ ಮತ್ತು ಉಪಗ್ರಹ ಸಂವಹನದ ಅತ್ಯುತ್ತಮ ಬಳಕೆಯನ್ನು ಆಧರಿಸಿದೆ.

ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲೂ ಇದು ಅತ್ಯುತ್ತಮ ರೀತಿಯಲ್ಲಿ ಜನರ ನೆರವಿಗೆ ಧಾವಿಸಲು ಸಹಾಯವನ್ನು ಮಾಡಬಲ್ಲವು.

(ಕೃಪೆ- ನ್ಯೂಸ್13)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

4 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

4 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

5 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

16 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago