Advertisement
ಸುದ್ದಿಗಳು

ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ ವೈಫೈ ಸಂಪರ್ಕ

Share

ನವದೆಹಲಿ: ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ 10 Mbpsನಿಂದ 100 Mbps ವೇಗದ ಸಂಪರ್ಕವನ್ನು ಹೊಂದಿರುವ ವೈ-ಫೈ ಅನ್ನು ಒದಗಿಸುವ ಬದ್ಧತೆಯನ್ನು ಕೇಂದ್ರ ಸರಕಾರ ಹೇಳಿದೆ. ಅಲ್ಲದೇ ಭಾರತ್‌ನೆಟ್ ಕೂಡ 1 GBPS ಸಂಪರ್ಕವನ್ನು ನೀಡಲು ಯೋಜಿಸಿದೆ. ಇದನ್ನು 10 GBPS ಮತ್ತು ಸಿ-ಡಾಟ್‌ನ XGS-PONವರೆಗೆ ವಿಸ್ತರಿಸಬಹುದಾಗಿದೆ.

ಸಿ-ಡಾಟ್‌ನ 36 ನೇ ಪ್ರತಿಷ್ಠಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರದ ರಾಜ್ಯ ಖಾತೆ ಸಂವಹನ ಸಚಿವ ಸಂಜಯ್ ಶಮರಾವ್ ಧೋತ್ರೆ ಅವರು ಈ ಮಾಹಿತಿಯನ್ನು ನೀಡಿದ್ದಾರೆ. “ಭಾರತವು ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ, ಇದು ಸ್ವಾವಲಂಬಿ ಭಾರತೀಯ ಗ್ರಾಮದ ಕನಸನ್ನು ಕಂಡಿದ್ದ ಬಾಪುಗೆ ನೀಡುತ್ತಿರುವ ನಿಜವಾದ ಗೌರವವಾಗಿದೆ. ಸಿ-ಡಾಟ್‌ನ ಸಿ-ಸ್ಯಾಟ್-ಫೈ ತಂತ್ರಜ್ಞಾನವು ಭಾರತೀಯ ಜನರಿಗೆ, ವಿಶೇಷವಾಗಿ ಗ್ರಾಮೀಣ ಮತ್ತು ದೂರದ ಪ್ರದೇಶಗಳ ಜನರಿಗೆ ಪ್ರಯೋಜನಕಾರಿಯಾಗಿದೆ. ಟೆಲಿಫೋನ್ ಮತ್ತು ವೈ-ಫೈ ಸೌಲಭ್ಯಗಳು ದೇಶದ ಎಲ್ಲಾ ಮೂಲೆಗಳಲ್ಲಿನ ಯಾವುದೇ ಮೊಬೈಲ್ ಫೋನ್‌ನಲ್ಲಿ ಲಭ್ಯವಾಗುವುದರಿಂದ ಇದು ಜನರ ಸಬಲೀಕರಣಕ್ಕೆ ನಾಂದಿ ಹಾಡುತ್ತದೆ” ಎಂದು ಧೋತ್ರೆ ಹೇಳಿದರು.

ಫೈಬರ್ ಕಷ್ಟ ಮತ್ತು ಇಂಟರ್ನೆಟ್ ಲಭ್ಯವಿಲ್ಲದ ದೂರದ ಪ್ರದೇಶಗಳಲ್ಲಿನ ಜನರನ್ನು ಈ ಹೊಸ ತಂತ್ರಜ್ಞಾನವು ಉಪಗ್ರಹಗಳ ಮೂಲಕ ಸಂಪರ್ಕಿಸುವುದರಿಂದ ಅವರನ್ನು ಮುಖ್ಯವಾಹಿನಿಗೆ ತರಲು ಸಹಾಯ ಮಾಡುತ್ತದೆ ಎಂದರು.ಸಿ-ಡಾಟ್‌ನ ಇತ್ತೀಚಿನ ಆವಿಷ್ಕಾರಗಳಾದ “ಸಿ-ಸ್ಯಾಟ್-ಫೈ ಮತ್ತು “ಸಿ-ಡಾಟ್‌ನ ಇಂಟರೊಪರೇಬಲ್ ಸೆಟ್ ಟಾಪ್ ಬಾಕ್ಸ್ (ಸಿಐಎಸ್‌ಟಿಬಿ)ಗಳಿಗೆ ಸಚಿವರು ಚಾಲನೆಯನ್ನು ನೀಡಿದರು. ದೂರದ ದ್ವೀಪಗಳು ಮತ್ತು ಕಷ್ಟಕರವಾದ ಭೂಪ್ರದೇಶಗಳು ಸೇರಿದಂತೆ ಅಸುರಕ್ಷಿತ ಪ್ರದೇಶಗಳಿಗೆ ಸಂಪರ್ಕವನ್ನು ವಿಸ್ತರಿಸಲು ಸಿ-ಸ್ಯಾಟ್-ಫೈ (ಸಿ-ಡಾಟ್ ಸ್ಯಾಟಲೈಟ್ ವೈಫೈ) ವೈರ್‌ಲೆಸ್ ಮತ್ತು ಉಪಗ್ರಹ ಸಂವಹನದ ಅತ್ಯುತ್ತಮ ಬಳಕೆಯನ್ನು ಆಧರಿಸಿದೆ.

ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲೂ ಇದು ಅತ್ಯುತ್ತಮ ರೀತಿಯಲ್ಲಿ ಜನರ ನೆರವಿಗೆ ಧಾವಿಸಲು ಸಹಾಯವನ್ನು ಮಾಡಬಲ್ಲವು.

(ಕೃಪೆ- ನ್ಯೂಸ್13)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

12 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago