Advertisement
ಸುದ್ದಿಗಳು

ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ ವೈಫೈ ಸಂಪರ್ಕ

Share

ನವದೆಹಲಿ: ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ 10 Mbpsನಿಂದ 100 Mbps ವೇಗದ ಸಂಪರ್ಕವನ್ನು ಹೊಂದಿರುವ ವೈ-ಫೈ ಅನ್ನು ಒದಗಿಸುವ ಬದ್ಧತೆಯನ್ನು ಕೇಂದ್ರ ಸರಕಾರ ಹೇಳಿದೆ. ಅಲ್ಲದೇ ಭಾರತ್‌ನೆಟ್ ಕೂಡ 1 GBPS ಸಂಪರ್ಕವನ್ನು ನೀಡಲು ಯೋಜಿಸಿದೆ. ಇದನ್ನು 10 GBPS ಮತ್ತು ಸಿ-ಡಾಟ್‌ನ XGS-PONವರೆಗೆ ವಿಸ್ತರಿಸಬಹುದಾಗಿದೆ.

ಸಿ-ಡಾಟ್‌ನ 36 ನೇ ಪ್ರತಿಷ್ಠಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರದ ರಾಜ್ಯ ಖಾತೆ ಸಂವಹನ ಸಚಿವ ಸಂಜಯ್ ಶಮರಾವ್ ಧೋತ್ರೆ ಅವರು ಈ ಮಾಹಿತಿಯನ್ನು ನೀಡಿದ್ದಾರೆ. “ಭಾರತವು ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ, ಇದು ಸ್ವಾವಲಂಬಿ ಭಾರತೀಯ ಗ್ರಾಮದ ಕನಸನ್ನು ಕಂಡಿದ್ದ ಬಾಪುಗೆ ನೀಡುತ್ತಿರುವ ನಿಜವಾದ ಗೌರವವಾಗಿದೆ. ಸಿ-ಡಾಟ್‌ನ ಸಿ-ಸ್ಯಾಟ್-ಫೈ ತಂತ್ರಜ್ಞಾನವು ಭಾರತೀಯ ಜನರಿಗೆ, ವಿಶೇಷವಾಗಿ ಗ್ರಾಮೀಣ ಮತ್ತು ದೂರದ ಪ್ರದೇಶಗಳ ಜನರಿಗೆ ಪ್ರಯೋಜನಕಾರಿಯಾಗಿದೆ. ಟೆಲಿಫೋನ್ ಮತ್ತು ವೈ-ಫೈ ಸೌಲಭ್ಯಗಳು ದೇಶದ ಎಲ್ಲಾ ಮೂಲೆಗಳಲ್ಲಿನ ಯಾವುದೇ ಮೊಬೈಲ್ ಫೋನ್‌ನಲ್ಲಿ ಲಭ್ಯವಾಗುವುದರಿಂದ ಇದು ಜನರ ಸಬಲೀಕರಣಕ್ಕೆ ನಾಂದಿ ಹಾಡುತ್ತದೆ” ಎಂದು ಧೋತ್ರೆ ಹೇಳಿದರು.

ಫೈಬರ್ ಕಷ್ಟ ಮತ್ತು ಇಂಟರ್ನೆಟ್ ಲಭ್ಯವಿಲ್ಲದ ದೂರದ ಪ್ರದೇಶಗಳಲ್ಲಿನ ಜನರನ್ನು ಈ ಹೊಸ ತಂತ್ರಜ್ಞಾನವು ಉಪಗ್ರಹಗಳ ಮೂಲಕ ಸಂಪರ್ಕಿಸುವುದರಿಂದ ಅವರನ್ನು ಮುಖ್ಯವಾಹಿನಿಗೆ ತರಲು ಸಹಾಯ ಮಾಡುತ್ತದೆ ಎಂದರು.ಸಿ-ಡಾಟ್‌ನ ಇತ್ತೀಚಿನ ಆವಿಷ್ಕಾರಗಳಾದ “ಸಿ-ಸ್ಯಾಟ್-ಫೈ ಮತ್ತು “ಸಿ-ಡಾಟ್‌ನ ಇಂಟರೊಪರೇಬಲ್ ಸೆಟ್ ಟಾಪ್ ಬಾಕ್ಸ್ (ಸಿಐಎಸ್‌ಟಿಬಿ)ಗಳಿಗೆ ಸಚಿವರು ಚಾಲನೆಯನ್ನು ನೀಡಿದರು. ದೂರದ ದ್ವೀಪಗಳು ಮತ್ತು ಕಷ್ಟಕರವಾದ ಭೂಪ್ರದೇಶಗಳು ಸೇರಿದಂತೆ ಅಸುರಕ್ಷಿತ ಪ್ರದೇಶಗಳಿಗೆ ಸಂಪರ್ಕವನ್ನು ವಿಸ್ತರಿಸಲು ಸಿ-ಸ್ಯಾಟ್-ಫೈ (ಸಿ-ಡಾಟ್ ಸ್ಯಾಟಲೈಟ್ ವೈಫೈ) ವೈರ್‌ಲೆಸ್ ಮತ್ತು ಉಪಗ್ರಹ ಸಂವಹನದ ಅತ್ಯುತ್ತಮ ಬಳಕೆಯನ್ನು ಆಧರಿಸಿದೆ.

ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲೂ ಇದು ಅತ್ಯುತ್ತಮ ರೀತಿಯಲ್ಲಿ ಜನರ ನೆರವಿಗೆ ಧಾವಿಸಲು ಸಹಾಯವನ್ನು ಮಾಡಬಲ್ಲವು.

(ಕೃಪೆ- ನ್ಯೂಸ್13)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

7 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

14 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

22 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

23 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

23 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago