Advertisement
ಸುದ್ದಿಗಳು

ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ ವೈಫೈ ಸಂಪರ್ಕ

Share

ನವದೆಹಲಿ: ಗ್ರಾಮ್‌ನೆಟ್ ಮೂಲಕ ಎಲ್ಲಾ ಗ್ರಾಮಗಳಿಗೆ 10 Mbpsನಿಂದ 100 Mbps ವೇಗದ ಸಂಪರ್ಕವನ್ನು ಹೊಂದಿರುವ ವೈ-ಫೈ ಅನ್ನು ಒದಗಿಸುವ ಬದ್ಧತೆಯನ್ನು ಕೇಂದ್ರ ಸರಕಾರ ಹೇಳಿದೆ. ಅಲ್ಲದೇ ಭಾರತ್‌ನೆಟ್ ಕೂಡ 1 GBPS ಸಂಪರ್ಕವನ್ನು ನೀಡಲು ಯೋಜಿಸಿದೆ. ಇದನ್ನು 10 GBPS ಮತ್ತು ಸಿ-ಡಾಟ್‌ನ XGS-PONವರೆಗೆ ವಿಸ್ತರಿಸಬಹುದಾಗಿದೆ.

ಸಿ-ಡಾಟ್‌ನ 36 ನೇ ಪ್ರತಿಷ್ಠಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರದ ರಾಜ್ಯ ಖಾತೆ ಸಂವಹನ ಸಚಿವ ಸಂಜಯ್ ಶಮರಾವ್ ಧೋತ್ರೆ ಅವರು ಈ ಮಾಹಿತಿಯನ್ನು ನೀಡಿದ್ದಾರೆ. “ಭಾರತವು ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ, ಇದು ಸ್ವಾವಲಂಬಿ ಭಾರತೀಯ ಗ್ರಾಮದ ಕನಸನ್ನು ಕಂಡಿದ್ದ ಬಾಪುಗೆ ನೀಡುತ್ತಿರುವ ನಿಜವಾದ ಗೌರವವಾಗಿದೆ. ಸಿ-ಡಾಟ್‌ನ ಸಿ-ಸ್ಯಾಟ್-ಫೈ ತಂತ್ರಜ್ಞಾನವು ಭಾರತೀಯ ಜನರಿಗೆ, ವಿಶೇಷವಾಗಿ ಗ್ರಾಮೀಣ ಮತ್ತು ದೂರದ ಪ್ರದೇಶಗಳ ಜನರಿಗೆ ಪ್ರಯೋಜನಕಾರಿಯಾಗಿದೆ. ಟೆಲಿಫೋನ್ ಮತ್ತು ವೈ-ಫೈ ಸೌಲಭ್ಯಗಳು ದೇಶದ ಎಲ್ಲಾ ಮೂಲೆಗಳಲ್ಲಿನ ಯಾವುದೇ ಮೊಬೈಲ್ ಫೋನ್‌ನಲ್ಲಿ ಲಭ್ಯವಾಗುವುದರಿಂದ ಇದು ಜನರ ಸಬಲೀಕರಣಕ್ಕೆ ನಾಂದಿ ಹಾಡುತ್ತದೆ” ಎಂದು ಧೋತ್ರೆ ಹೇಳಿದರು.

ಫೈಬರ್ ಕಷ್ಟ ಮತ್ತು ಇಂಟರ್ನೆಟ್ ಲಭ್ಯವಿಲ್ಲದ ದೂರದ ಪ್ರದೇಶಗಳಲ್ಲಿನ ಜನರನ್ನು ಈ ಹೊಸ ತಂತ್ರಜ್ಞಾನವು ಉಪಗ್ರಹಗಳ ಮೂಲಕ ಸಂಪರ್ಕಿಸುವುದರಿಂದ ಅವರನ್ನು ಮುಖ್ಯವಾಹಿನಿಗೆ ತರಲು ಸಹಾಯ ಮಾಡುತ್ತದೆ ಎಂದರು.ಸಿ-ಡಾಟ್‌ನ ಇತ್ತೀಚಿನ ಆವಿಷ್ಕಾರಗಳಾದ “ಸಿ-ಸ್ಯಾಟ್-ಫೈ ಮತ್ತು “ಸಿ-ಡಾಟ್‌ನ ಇಂಟರೊಪರೇಬಲ್ ಸೆಟ್ ಟಾಪ್ ಬಾಕ್ಸ್ (ಸಿಐಎಸ್‌ಟಿಬಿ)ಗಳಿಗೆ ಸಚಿವರು ಚಾಲನೆಯನ್ನು ನೀಡಿದರು. ದೂರದ ದ್ವೀಪಗಳು ಮತ್ತು ಕಷ್ಟಕರವಾದ ಭೂಪ್ರದೇಶಗಳು ಸೇರಿದಂತೆ ಅಸುರಕ್ಷಿತ ಪ್ರದೇಶಗಳಿಗೆ ಸಂಪರ್ಕವನ್ನು ವಿಸ್ತರಿಸಲು ಸಿ-ಸ್ಯಾಟ್-ಫೈ (ಸಿ-ಡಾಟ್ ಸ್ಯಾಟಲೈಟ್ ವೈಫೈ) ವೈರ್‌ಲೆಸ್ ಮತ್ತು ಉಪಗ್ರಹ ಸಂವಹನದ ಅತ್ಯುತ್ತಮ ಬಳಕೆಯನ್ನು ಆಧರಿಸಿದೆ.

ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲೂ ಇದು ಅತ್ಯುತ್ತಮ ರೀತಿಯಲ್ಲಿ ಜನರ ನೆರವಿಗೆ ಧಾವಿಸಲು ಸಹಾಯವನ್ನು ಮಾಡಬಲ್ಲವು.

(ಕೃಪೆ- ನ್ಯೂಸ್13)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

1 day ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

2 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

2 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

3 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

4 days ago