ಗ್ರಾಮ ಪಂಚಾಯತ್ ಖಾಲಿ ಸ್ಥಾನಗಳಿಗೆ ಉಪ ಚುನಾವಣೆ

October 26, 2019
9:00 AM

ಮಂಗಳೂರು :-  ವಿವಿಧ ಕಾರಣಗಳಿಂದ ತೆರವಾಗಿರುವ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‍ಗಳ ಖಾಲಿ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮ ಪಂಚಾಯತ್‍ನ ಕಲ್ಮಡ್ಕ-2 ಮತ್ತು ಬಳ್ಪ ಗ್ರಾಮ ಪಂಚಾಯತ್‍ನ ಕೇನ್ಯ-1 ಗ್ರಾಮ ಪಂಚಾಯತ್ ಕ್ಷೇತ್ರಗಳಿಗೆ ಉಪ ಚುನಾವಣೆ ಚುನಾವಣೆ ನಡೆಯಲಿದೆ.

Advertisement
Advertisement

ಮೂಡಬಿದ್ರೆ ತಾಲೂಕಿನ ದರೆಗುಡ್ಡೆ ಗ್ರಾಮ ಪಂಚಾಯತ್‍ನ ದರೆಗುಡ್ಡೆ-2, ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮ ಪಂಚಾಯತ್‍ನ ಮೂಡನಡುಗೋಡು-2, ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮ ಪಂಚಾಯತ್‍ನ ಬಜತ್ತೂರು-2 ಮತ್ತು ಮರ್ಧಾಳ ಗ್ರಾಮ ಪಂಚಾಯತ್‍ನ ನೆಕ್ಕಿಲಾಡಿ-2, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಗ್ರಾಮ ಪಂಚಾಯತ್‍ನ ಹತ್ಯಡ್ಕ-2 ಪ್ರದೇಶಗಳಲ್ಲೂ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು ಅಕ್ಟೋಬರ್ 28 ರಿಂದ ನವೆಂಬರ್ 14 ರವರೆಗೆ ಜಾರಿಯಲ್ಲಿರುತ್ತದೆ.

ಚುನಾವಣೆ ಅಧಿಸೂಚನೆ ಅಕ್ಟೋಬರ್ 28ರಂದು ಹೊರಡಿಸಲಿದ್ದು , ನಾಮಪತ್ರ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 31. ನಾಮಪತ್ರಗಳನ್ನು ಪರಿಶೀಲಿಸುವ ದಿನ ನವೆಂಬರ್ 2, ಉಮೇದುವಾರರನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ನವೆಂಬರ್ 4, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮತ್ತು ಸಮಯ ನವೆಂಬರ್ 12 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನ ಮತ್ತು ಸಮಯ ನವೆಂಬರ್ 13 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮತಗಳ ಎಣಿಕೆ ನವೆಂಬರ್ 14 ರಂದು ನಡೆಯಲಿದ ಎಂದು ಪ್ರಕಟಣೆ ತಿಳಿಸಿದೆ.

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?
June 28, 2025
2:17 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |
June 28, 2025
7:14 AM
by: The Rural Mirror ಸುದ್ದಿಜಾಲ
ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..
June 28, 2025
6:37 AM
by: ದ ರೂರಲ್ ಮಿರರ್.ಕಾಂ
ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..
June 27, 2025
11:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group