ಗ್ರಾಮ ಪಂಚಾಯತ್ ಖಾಲಿ ಸ್ಥಾನಗಳಿಗೆ ಉಪ ಚುನಾವಣೆ

October 26, 2019
9:00 AM

ಮಂಗಳೂರು :-  ವಿವಿಧ ಕಾರಣಗಳಿಂದ ತೆರವಾಗಿರುವ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‍ಗಳ ಖಾಲಿ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮ ಪಂಚಾಯತ್‍ನ ಕಲ್ಮಡ್ಕ-2 ಮತ್ತು ಬಳ್ಪ ಗ್ರಾಮ ಪಂಚಾಯತ್‍ನ ಕೇನ್ಯ-1 ಗ್ರಾಮ ಪಂಚಾಯತ್ ಕ್ಷೇತ್ರಗಳಿಗೆ ಉಪ ಚುನಾವಣೆ ಚುನಾವಣೆ ನಡೆಯಲಿದೆ.

ಮೂಡಬಿದ್ರೆ ತಾಲೂಕಿನ ದರೆಗುಡ್ಡೆ ಗ್ರಾಮ ಪಂಚಾಯತ್‍ನ ದರೆಗುಡ್ಡೆ-2, ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮ ಪಂಚಾಯತ್‍ನ ಮೂಡನಡುಗೋಡು-2, ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮ ಪಂಚಾಯತ್‍ನ ಬಜತ್ತೂರು-2 ಮತ್ತು ಮರ್ಧಾಳ ಗ್ರಾಮ ಪಂಚಾಯತ್‍ನ ನೆಕ್ಕಿಲಾಡಿ-2, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಗ್ರಾಮ ಪಂಚಾಯತ್‍ನ ಹತ್ಯಡ್ಕ-2 ಪ್ರದೇಶಗಳಲ್ಲೂ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು ಅಕ್ಟೋಬರ್ 28 ರಿಂದ ನವೆಂಬರ್ 14 ರವರೆಗೆ ಜಾರಿಯಲ್ಲಿರುತ್ತದೆ.

ಚುನಾವಣೆ ಅಧಿಸೂಚನೆ ಅಕ್ಟೋಬರ್ 28ರಂದು ಹೊರಡಿಸಲಿದ್ದು , ನಾಮಪತ್ರ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 31. ನಾಮಪತ್ರಗಳನ್ನು ಪರಿಶೀಲಿಸುವ ದಿನ ನವೆಂಬರ್ 2, ಉಮೇದುವಾರರನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ನವೆಂಬರ್ 4, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮತ್ತು ಸಮಯ ನವೆಂಬರ್ 12 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನ ಮತ್ತು ಸಮಯ ನವೆಂಬರ್ 13 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮತಗಳ ಎಣಿಕೆ ನವೆಂಬರ್ 14 ರಂದು ನಡೆಯಲಿದ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror