ಮಂಗಳೂರು :- ವಿವಿಧ ಕಾರಣಗಳಿಂದ ತೆರವಾಗಿರುವ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ಗಳ ಖಾಲಿ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮ ಪಂಚಾಯತ್ನ ಕಲ್ಮಡ್ಕ-2 ಮತ್ತು ಬಳ್ಪ ಗ್ರಾಮ ಪಂಚಾಯತ್ನ ಕೇನ್ಯ-1 ಗ್ರಾಮ ಪಂಚಾಯತ್ ಕ್ಷೇತ್ರಗಳಿಗೆ ಉಪ ಚುನಾವಣೆ ಚುನಾವಣೆ ನಡೆಯಲಿದೆ.
ಮೂಡಬಿದ್ರೆ ತಾಲೂಕಿನ ದರೆಗುಡ್ಡೆ ಗ್ರಾಮ ಪಂಚಾಯತ್ನ ದರೆಗುಡ್ಡೆ-2, ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮ ಪಂಚಾಯತ್ನ ಮೂಡನಡುಗೋಡು-2, ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮ ಪಂಚಾಯತ್ನ ಬಜತ್ತೂರು-2 ಮತ್ತು ಮರ್ಧಾಳ ಗ್ರಾಮ ಪಂಚಾಯತ್ನ ನೆಕ್ಕಿಲಾಡಿ-2, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಗ್ರಾಮ ಪಂಚಾಯತ್ನ ಹತ್ಯಡ್ಕ-2 ಪ್ರದೇಶಗಳಲ್ಲೂ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯುವ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು ಅಕ್ಟೋಬರ್ 28 ರಿಂದ ನವೆಂಬರ್ 14 ರವರೆಗೆ ಜಾರಿಯಲ್ಲಿರುತ್ತದೆ.
ಚುನಾವಣೆ ಅಧಿಸೂಚನೆ ಅಕ್ಟೋಬರ್ 28ರಂದು ಹೊರಡಿಸಲಿದ್ದು , ನಾಮಪತ್ರ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 31. ನಾಮಪತ್ರಗಳನ್ನು ಪರಿಶೀಲಿಸುವ ದಿನ ನವೆಂಬರ್ 2, ಉಮೇದುವಾರರನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ನವೆಂಬರ್ 4, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮತ್ತು ಸಮಯ ನವೆಂಬರ್ 12 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನ ಮತ್ತು ಸಮಯ ನವೆಂಬರ್ 13 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮತಗಳ ಎಣಿಕೆ ನವೆಂಬರ್ 14 ರಂದು ನಡೆಯಲಿದ ಎಂದು ಪ್ರಕಟಣೆ ತಿಳಿಸಿದೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…