ಮಂಗಳೂರು :- ವಿವಿಧ ಕಾರಣಗಳಿಂದ ತೆರವಾಗಿರುವ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ಗಳ ಖಾಲಿ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮ ಪಂಚಾಯತ್ನ ಕಲ್ಮಡ್ಕ-2 ಮತ್ತು ಬಳ್ಪ ಗ್ರಾಮ ಪಂಚಾಯತ್ನ ಕೇನ್ಯ-1 ಗ್ರಾಮ ಪಂಚಾಯತ್ ಕ್ಷೇತ್ರಗಳಿಗೆ ಉಪ ಚುನಾವಣೆ ಚುನಾವಣೆ ನಡೆಯಲಿದೆ.
ಮೂಡಬಿದ್ರೆ ತಾಲೂಕಿನ ದರೆಗುಡ್ಡೆ ಗ್ರಾಮ ಪಂಚಾಯತ್ನ ದರೆಗುಡ್ಡೆ-2, ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮ ಪಂಚಾಯತ್ನ ಮೂಡನಡುಗೋಡು-2, ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮ ಪಂಚಾಯತ್ನ ಬಜತ್ತೂರು-2 ಮತ್ತು ಮರ್ಧಾಳ ಗ್ರಾಮ ಪಂಚಾಯತ್ನ ನೆಕ್ಕಿಲಾಡಿ-2, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಗ್ರಾಮ ಪಂಚಾಯತ್ನ ಹತ್ಯಡ್ಕ-2 ಪ್ರದೇಶಗಳಲ್ಲೂ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯುವ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು ಅಕ್ಟೋಬರ್ 28 ರಿಂದ ನವೆಂಬರ್ 14 ರವರೆಗೆ ಜಾರಿಯಲ್ಲಿರುತ್ತದೆ.
ಚುನಾವಣೆ ಅಧಿಸೂಚನೆ ಅಕ್ಟೋಬರ್ 28ರಂದು ಹೊರಡಿಸಲಿದ್ದು , ನಾಮಪತ್ರ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 31. ನಾಮಪತ್ರಗಳನ್ನು ಪರಿಶೀಲಿಸುವ ದಿನ ನವೆಂಬರ್ 2, ಉಮೇದುವಾರರನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ನವೆಂಬರ್ 4, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮತ್ತು ಸಮಯ ನವೆಂಬರ್ 12 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನ ಮತ್ತು ಸಮಯ ನವೆಂಬರ್ 13 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮತಗಳ ಎಣಿಕೆ ನವೆಂಬರ್ 14 ರಂದು ನಡೆಯಲಿದ ಎಂದು ಪ್ರಕಟಣೆ ತಿಳಿಸಿದೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…