ಮಂಗಳೂರು :- ವಿವಿಧ ಕಾರಣಗಳಿಂದ ತೆರವಾಗಿರುವ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ಗಳ ಖಾಲಿ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮ ಪಂಚಾಯತ್ನ ಕಲ್ಮಡ್ಕ-2 ಮತ್ತು ಬಳ್ಪ ಗ್ರಾಮ ಪಂಚಾಯತ್ನ ಕೇನ್ಯ-1 ಗ್ರಾಮ ಪಂಚಾಯತ್ ಕ್ಷೇತ್ರಗಳಿಗೆ ಉಪ ಚುನಾವಣೆ ಚುನಾವಣೆ ನಡೆಯಲಿದೆ.
ಮೂಡಬಿದ್ರೆ ತಾಲೂಕಿನ ದರೆಗುಡ್ಡೆ ಗ್ರಾಮ ಪಂಚಾಯತ್ನ ದರೆಗುಡ್ಡೆ-2, ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮ ಪಂಚಾಯತ್ನ ಮೂಡನಡುಗೋಡು-2, ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮ ಪಂಚಾಯತ್ನ ಬಜತ್ತೂರು-2 ಮತ್ತು ಮರ್ಧಾಳ ಗ್ರಾಮ ಪಂಚಾಯತ್ನ ನೆಕ್ಕಿಲಾಡಿ-2, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಗ್ರಾಮ ಪಂಚಾಯತ್ನ ಹತ್ಯಡ್ಕ-2 ಪ್ರದೇಶಗಳಲ್ಲೂ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯುವ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು ಅಕ್ಟೋಬರ್ 28 ರಿಂದ ನವೆಂಬರ್ 14 ರವರೆಗೆ ಜಾರಿಯಲ್ಲಿರುತ್ತದೆ.
ಚುನಾವಣೆ ಅಧಿಸೂಚನೆ ಅಕ್ಟೋಬರ್ 28ರಂದು ಹೊರಡಿಸಲಿದ್ದು , ನಾಮಪತ್ರ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 31. ನಾಮಪತ್ರಗಳನ್ನು ಪರಿಶೀಲಿಸುವ ದಿನ ನವೆಂಬರ್ 2, ಉಮೇದುವಾರರನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ನವೆಂಬರ್ 4, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮತ್ತು ಸಮಯ ನವೆಂಬರ್ 12 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನ ಮತ್ತು ಸಮಯ ನವೆಂಬರ್ 13 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮತಗಳ ಎಣಿಕೆ ನವೆಂಬರ್ 14 ರಂದು ನಡೆಯಲಿದ ಎಂದು ಪ್ರಕಟಣೆ ತಿಳಿಸಿದೆ.
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…