ನಮ್ಮೂರ ಸುದ್ದಿ

ಗ್ರಾಮ ಲೆಕ್ಕಾಧಿಕಾರಿ ಬದಲಾವಣೆಗೆ ಗ್ರಾಮಸಭೆಯಲ್ಲಿ ಆಗ್ರಹ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ : ಕೊಡಿಯಾಲದ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಎರಡು ತಿಂಗಳಿನಿಂದ ತೆರೆದಿಲ್ಲ. 15 ದಿನಕ್ಕೊಮ್ಮೆ ಬಂದು ಹೋಗುವ ಗ್ರಾಮ ಲೆಕ್ಕಾಧಿಕಾರಿಯನ್ನು ಬದಲಾಯಿಸದಿದ್ದಲ್ಲಿ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ಗ್ರಾಮಸ್ಥರು ಕೊಡಿಯಾಲ ಗ್ರಾಮ ಸಭೆಯಲ್ಲಿ ಎಚ್ಚರಿಸಿದರು.

Advertisement
Advertisement

ಕೊಡಿಯಾಲ ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ ಸಾಲಿಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಸಭೆಯ ನೋಡೆಲ್ ಅಧಿಕಾರಿ ಅರಬಣ್ಣ ಪೂಜೇರಿ ತೋಟಗಾರಿಕಾ ಇಲಾಖಾ ಮಾಹಿತಿ ನೀಡಲು ಮುಂದಾದಾಗ ಗ್ರಾಮಸ್ಥ ಇಸಾಕ್ , ಕೊಳೆರೋಗದ ನೋಂದಣಿಗೆ ಗ್ರಾಮ ಲೆಕ್ಕಾ ಧಿಕಾರಿ ಕಚೇರಿಗೆ ಹೋಗಬೇಕು ಆದರೆ ಕೊಡಿಯಾಲದಲ್ಲಿ ಗ್ರಾಮ ಲೆಕ್ಕಾಧಿಕಾರಿಯೇ ಇಲ್ಲ. ಎರಡು ತಿಂಗಳಲ್ಲಿ ಎರಡು ಬಾರಿ ಕಚೇರಿ ತೆರೆದಿದೆ. ಇಂತಹ ಅಧಿಕಾರಿ ನಮಗೆ ಬೇಡ ಬದಲಾಯಿಸಿ ಎಂದು ಒತ್ತಾಯಿಸಿದರು.

ಗ್ರಾಮಸ್ಥ ಕರುಣಾಕರ ರೈ ಮಾತನಾಡಿ, ಗ್ರಾಮ ಲೆಕ್ಕಾಧಿಕಾರಿ ಗ್ರಾಮ ಸಭೆಗೂ ಬರದೆ ತಪ್ಪಿಸುತ್ತಿದ್ದಾರೆ. ಕೊಡಿಯಾಲದ ಸ್ಮಶಾನದ ಜಾಗ ಗುರುತು ಮಾಡಲು ಹೇಳಿ ಎಷ್ಟೋ ವರ್ಷವಾಯಿತು ಆದರೂ ಮಾಡಿಲ್ಲ. ಇನ್ನು ಗ್ರಾಮದಲ್ಲಿ ಯಾರಾದರೂ ಸತ್ತರೆ ಹೆಣವನ್ನು ಪಂಚಾಯತ್ ಎದುರು ಇಟ್ಟು ಪ್ರತಿಭಟಿಸುತ್ತೇವೆ ಎಂದು ಎಚ್ಚರಿಸಿದರು.

ಕೊಳೆರೋಗ ನೋಂದಣಿ, ಜಾಗದ ದಾಖಲೆ, ಮಕ್ಕಳ ದಾಖಲಾತಿಗೆ ಬೇಕಾದ ದಾಖಲೆಗಳಿಗೆ ಗ್ರಾಮ ಲೆಕ್ಕಾಧಿಕಾರಿ ಬೇಕು. ಆದರೆ 15 ದಿನಕ್ಕೋಮ್ಮೆ ಬರುವ ಅಧಿಕಾರಿಯನ್ನು ಬದಲಾಯಿಸಬೇಕು ಇದೇ ಅಧಿಕಾರಿ ಮತ್ತೆ ಬಂದು ಬಾಗಿಲು ತೆಗೆದರೆ ಬೀಗ ಹಾಕಿ ಪ್ರತಿಭಟಿಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಸಿದರು.

Advertisement

ಗ್ರಾಮ ಲೆಕ್ಕಾಧಿಕಾರಿಯನ್ನು ಬದಲಾಯಿಸುವಂತೆ ಗ್ರಾಮಸ್ಥರ ಒತ್ತಾಯನ್ನು ನಿರ್ಣಯ ಮಾಡಿ ತಹಶೀಲ್ದಾರರಿಗೆ ಕಳುಹಿಸಲು ನಿರ್ಧರಿಸಲಾಯಿತು.

ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳ ಗೈರು: ಆಕ್ರೋಶ
ಗ್ರಾಮ ಸಭೆಗೆ ತಾ.ಪಂ. ಸದಸ್ಯರು, ಜಿ.ಪಂ.ಸದಸ್ಯರು, ಒಬ್ಬರು ಗ್ರಾಮ ಪಂಚಾಯತ್ ಸದಸ್ಯೆ ಸೇರಿದಂತೆ ಇಲಾಖಾಧಿಕಾರಿಗಳು ಗೈರು ಹಾಜರಾಗಿದ್ದಾರೆ. ಅವರು ಬರದಿದ್ದರೆ ಗ್ರಾಮ ಸಭೆ ನಡೆಸುವುದು ಯಾಕೆ? ಎಂದು ಸಭೆಯ ಆರಂಭದಲ್ಲಿ ಇಸಾಕ್ ಮಾಲೆಂಗ್ರಿ ಮತ್ತು ಆನಂದ ನಾಯಕ್ ಪ್ರಶ್ನಿಸಿದರು. ಸಭೆಗೆ ಬರಬೇಕೆಂದು ಎಲ್ಲರಿಗೂ ನೋಟೀಸು ಕಳುಹಿಸಿದ್ದೇವೆ. ಗ್ರಾಮಸ್ಥರ ಯಾವುದೇ ಬೇಡಿಕೆಗಳಿದ್ದರೂ ನಿರ್ಣಯ ಮಾಡಿ ಅವರಿಗೆ ಕಳುಹಿಸಲಾಗುವುದು ಎಂದು ಅಧ್ಯಕ್ಷ ಮೋಹನ ಸಾಲಿಯಾನ್ ಹೇಳಿದರು.

ಕಾಣಿಯೂರು- ಬಾಚೋಡಿ ರಸ್ತೆ, ಮೂವಪ್ಪೆ-ಕಾಣಿಯೂರು ರಸ್ತೆ ದುರಸ್ತಿಗೆ ಗ್ರಾಮಸ್ಥರು ಸಭೆಯಲ್ಲಿ ಮನವಿ ಮಾಡಿದರು. ಅಜೃಂಗಲ-ಮರಿಕೇಯಿ ರಸ್ತೆಯನ್ನು ಎನ್.ಆರ್.ಇ.ಜಿಗೆ ಸೇರಿಸಿ ಎಂದು ಜಯರಾಮ ಶೆಟ್ಟಿ ಮನವಿ ಮಾಡಿದರು. ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಕನ್ನಡ ಬರುವ ಸಿಬಂದಿಗಳನ್ನು ನೇಮಿಸಿ ಎಂದು ಇಸಾಕ್ ಮನವಿ ಮಾಡಿದರು.

ವಿವಿಧ ಇಲಾಖಾಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೂವಪ್ಪ ಗೌಡ ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

15 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

18 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

1 day ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

2 days ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

2 days ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

2 days ago