Advertisement
ಸುದ್ದಿಗಳು

ಗ್ರೀನ್ ಸಿಟಿ ಫೋರಂ ಮುಂದಾಳತ್ವದಲ್ಲಿ ತಲಕಾವೇರಿ ಸ್ವಚ್ಛತೆ

Share

ಭಾಗಮಂಡಲ: ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿ ಕ್ಷೇತ್ರದಲ್ಲಿ ಅ.18 ರಂದು ಪವಿತ್ರ ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ  ಗ್ರೀನ್ ಸಿಟಿ ಫೋರಂ ಸಂಘಟನೆ ನೇತೃತ್ವದಲ್ಲಿ ತಲಕಾವೇರಿಯಿಂದ ಭಾಗಮಂಡಲದವರೆಗೆ ಸ್ವಚ್ಛತಾ ಕಾರ್ಯ ನಡೆಯಿತು. ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ವಿದ್ಯಾರ್ಥಿಗಳು, ಕ್ಲೀನ್ ಕೂರ್ಗ್ ಇನ್ಸೆಟಿವ್ (ಸಿಸಿಐ) ಸಂಘಟನೆ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ತಲಕಾವೇರಿ ಕ್ಷೇತ್ರದ ಪ್ರವೇಶದ್ವಾರದಿಂದ ಸ್ವಚ್ಛತೆ ಪ್ರಾರಂಭಿಸಲಾಯಿತು. ರಸ್ತೆ ಎರಡು ಬದಿಯಲ್ಲಿದ್ದ ಬಾಟಲಿ, ಪ್ಲಾಸ್ಟಿಕ್ ವಸ್ತುಗಳನ್ನು ಹೆಕ್ಕುವುದರ ಮೂಲಕ ಸ್ವಚ್ಛಗೊಳಿಸಲಾಯಿತು. ಈ ವೇಳೆ ವಾಹನಗಳಲ್ಲಿ ಆಗಮಿಸಿದ ಪ್ರವಾಸಿಗರಿಗೆ ಸ್ವಚ್ಛತೆ ಕಾಪಾಡುವಂತೆ ಮನವಿ ಮಾಡಲಾಯಿತು. ದಕ್ಷಿಣ ಭಾರತದ ಜೀವನದಿ ಕಾವೇರಿ ಕ್ಷೇತ್ರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂಬ ಸಂದೇಶ ರವಾನಿಸಲಾಯಿತು.

ನಾಲ್ಕು ವರ್ಷದಿಂದ ಕಾವೇರಿ ತೀರ್ಥೋದ್ಭವಕ್ಕೆ ಮುನ್ನ ತಲಕಾವೇರಿಯಿಂದ ಭಾಗಮಂಡಲದವರೆಗೂ ಸ್ವಚ್ಛತೆ ಮಾಡಲಾಗುತ್ತಿದೆ. ನಮ್ಮ ನಡೆ ಸ್ವಚ್ಛತೆ ಕಡೆ ಎಂಬ ಸಂದೇಶವನ್ನು ರವಾನಿಸುವ ಉದ್ದೇಶದಿಂದ ಸ್ವಚ್ಛತೆ ಮಾಡಲಾಗುತ್ತಿದೆ ಎಂದು ಗ್ರೀನ್ ಸಿಟಿ ಫೋರಂ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಹೇಳಿದರು. ಸ್ವಚ್ಛತೆ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಪವಿತ್ರ ಕ್ಷೇತ್ರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಪ್ರತಿಯೊಬ್ಬರು ಮುತುವರ್ಜಿ ವಹಿಸಬೇಕೆಂದು ಗ್ರೀನ್ ಸಿಟಿ ಫೋರಂ ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ ಹೇಳಿದರು.

ಪ್ರತಿಯೊಬ್ಬರ ಸಹಕಾರದಿಂದ ಸ್ವಚ್ಛತೆ ಕಾಪಾಡಲು ಸಾಧ್ಯವಾಗಿದೆ. ಹಲವು ವರ್ಷಗಳಿಗೆ ಹೋಲಿಸಿದ್ದಲ್ಲಿ ಈಗ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿದೆ. ಪ್ರತಿಯೊಂದು ಸ್ಥಳದಲ್ಲಿಯೂ ಸ್ವಚ್ಛತಾ ಕಾರ್ಯಕ್ರಮ ನಡೆಯುತ್ತಿದೆ ಎಂದು ಕ್ಲೀನ್ ಕೂರ್ಗ್ ಇನ್ಸೆಟಿವ್ ಪ್ರಮುಖರಾಡ ಬಡುವಂಡ ಅರುಣ್ ಅಪ್ಪಚ್ಚು ಹೇಳಿದರು. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಉತ್ಪಾದನೆ ಮೊದಲು ನಿಲ್ಲಿಸಬೇಕು. ಸ್ನೇಹಿ ವಸ್ತುಗಳನ್ನು ಮಾತ್ರ ಬಳಸುವಂತಾಗಬೇಕು. ನಮ್ಮ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ ಹರೀಶ್ ಹೇಳಿದರು.

ಸ್ವಚ್ಛತೆಯಲ್ಲಿ ಗ್ರೀನ್ ಸಿಟಿ ಫೋರಂ ಪ್ರಧಾನ ಕಾರ್ಯದರ್ಶಿ ಪೂಳಕಂಡ ರಾಜೇಶ್, ಮಾಜಿ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ನಿರ್ದೇಶಕರಾದ ಮೋಂತಿ ಗಣೇಶ್, ಅಜ್ಜಮಾಡ ರಮೇಶ್ ಕುಟ್ಟಪ್ಪ, ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ಶಿಕ್ಷಕರಾದ ಸುನಿತಾ, ತನುಜಾ, ಕ್ಲೀನ್ ಕೂರ್ಗ್ ಇನ್ಸೆಟಿವ್ ಪ್ರತಿನಿಧಿಗಳಾದ ಪ್ರಶಾಂತ್ ಚಿಣ್ಣಪ್ಪ, ಕರಣ್ ಸುಬ್ಬಯ್ಯ, ಮನೆಯಪಂಡ ಬೋಪಣ್ಣ, ಸುಜಿತ್ ಮುದ್ದಪ್ಪ ಪಾಲ್ಗೊಂಡಿದ್ದರು.

(

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

3 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

5 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

5 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

11 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

11 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

14 hours ago