Advertisement
ಸುದ್ದಿಗಳು

ಚಂದನ ಸಾಹಿತ್ಯ ವೇದಿಕೆಯಿಂದ ಸಾಹಿತಿ ದಿ. ಯುಸುಗೌ ರವರಿಗೆ ನುಡಿನಮನ

Share

ಸುಳ್ಯ: ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಇತ್ತೀಚಿಗೆ ನಿಧನರಾದ ಸುಳ್ಯದ ಸಾಹಿತಿ ದಿ.ಯು.ಸುಬ್ರಾಯಗೌಡರವರಿಗೆ ನುಡಿನಮನ ಕಾರ್ಯಕ್ರಮ ಶಿರ್ಡಿ ಶ್ರೀ ಸಾಯಿಬಾಬಾ ಜ್ಯೋತಿಷ್ಯಾಲಯದಲ್ಲಿ ನೆರವೇರಿತು.

Advertisement
Advertisement
Advertisement
Advertisement

ಯುಸುಗೌ ಒಂದು ನೆನಪು ಮತ್ತು ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ವಹಿಸಿ ಮಾತನಾಡಿ, ಅಂತಾರಾಷ್ಟ್ರೀಯ ಸಂಸ್ಥೆಯಾದ ಜೇಸಿಐ ಸಂಸ್ಥೆಯ ವಲಯ ತರಬೇತುದಾರರಲ್ಲದೆ ಅತ್ಯುತ್ತಮ ಸಾಹಿತಿಯಾಗಿದ್ದ ಯುಸುಗೌ ಪ್ರಬುದ್ಧ ವ್ಯಕ್ತಿಯಾಗಿದ್ದರು . ಸರ್ವರನ್ನು ಆದರದಿಂದ ಕಾಣುವ ಅವರ ಹೃದಯ ವೈಶಾಲ್ಯತೆ ಅನುಕರಣೀಯ ಎಂದರು. ಹಿರಿಯ ಸಾಹಿತಿ ನೀನಾಸು ಮಾತನಾಡಿ ‘ಯುಸುಗೌ ಮರೆಯದ ಮಾಣಿಕ್ಯ. ಸಾಹಿತ್ಯ ಕ್ಷೇತ್ರದಲ್ಲಿ ಒಳ್ಳೆಯ ಛಾಪನ್ನು ಮೂಡಿಸಿದವರು. ಉತ್ತಮ ಗೆಳೆಯರಾಗಿದ್ದ ಅವರು ಎಂದೂ ಕೋಪತಾಪ ಮಾಡಿದವರಲ್ಲ. ಒಬ್ಬ ಒಳ್ಳೆಯ ಸಾಹಿತಿಯನ್ನು ಕಳೆದುಕೊಂಡೆವು ಎಂದರು.

Advertisement

ಶ್ರೀ ಯೋಗೇಶ್ವರಾನಂದ ಸ್ವಾಮೀಜಿ ಮಾತನಾಡಿ ಒಡನಾಡಿಯಾಗಿದ್ದ ಸುಬ್ರಾಯಗೌಡರು ತುಂಬಿದ ಕೊಡ. ವಿಶೇಷ ಶೈಲಿಯ ಅವರ ಬರಹಗಳು ಜನಮಾನಸ ಮುಟ್ಟಿದ್ದವು. ಅವರ ಅರೆಭಾಷೆ ಲೇಖನಗಳು ಹಲವು ಪತ್ರಿಕೆಗಳಲ್ಲಿ ಓದಿದ್ದೆ ಎಂದು ಸ್ಮರಿಸಿದರು. ಚಂದನ ಸಾಹಿತ್ಯ ವೇದಿಕೆ ಕಾರ್ಯದರ್ಶಿ ಸುಮಂಗಲಾ ಲಕ್ಷ್ಮಣ ಕೋಳಿವಾಡ, ವಿಷ್ಣುವರ್ಧನ್ ಅಭಿಮಾನಿ ಬಳಗದ ಅಧ್ಯಕ್ಷ ಹರೀಶ್ಚಂದ್ರ ಪಂಡಿತ್ ಹಾಗೂ ಗಾಯಕ ಗಣೇಶ್ ಬಿ ಎಸ್ ನುಡಿನಮನ ಸಲ್ಲಿಸಿದರು. ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವದರ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಇದೇ ಸಂದರ್ಭ ಸ್ವಾಮೀಜಿಯವರ 163 ನೇ ಪುಸ್ತಕವಾದ ಜೀವದ ಪಯಣ ಸಾಹಿತ್ಯ ಕೃತಿ ಬಿಡುಗಡೆ ಮಾಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

12 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

16 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

17 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

17 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago