Advertisement
ಸುದ್ದಿಗಳು

ಚಂದನ ಸಾಹಿತ್ಯ ವೇದಿಕೆಯಿಂದ ಸಾಹಿತಿ ದಿ. ಯುಸುಗೌ ರವರಿಗೆ ನುಡಿನಮನ

Share

ಸುಳ್ಯ: ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಇತ್ತೀಚಿಗೆ ನಿಧನರಾದ ಸುಳ್ಯದ ಸಾಹಿತಿ ದಿ.ಯು.ಸುಬ್ರಾಯಗೌಡರವರಿಗೆ ನುಡಿನಮನ ಕಾರ್ಯಕ್ರಮ ಶಿರ್ಡಿ ಶ್ರೀ ಸಾಯಿಬಾಬಾ ಜ್ಯೋತಿಷ್ಯಾಲಯದಲ್ಲಿ ನೆರವೇರಿತು.

Advertisement

ಯುಸುಗೌ ಒಂದು ನೆನಪು ಮತ್ತು ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ವಹಿಸಿ ಮಾತನಾಡಿ, ಅಂತಾರಾಷ್ಟ್ರೀಯ ಸಂಸ್ಥೆಯಾದ ಜೇಸಿಐ ಸಂಸ್ಥೆಯ ವಲಯ ತರಬೇತುದಾರರಲ್ಲದೆ ಅತ್ಯುತ್ತಮ ಸಾಹಿತಿಯಾಗಿದ್ದ ಯುಸುಗೌ ಪ್ರಬುದ್ಧ ವ್ಯಕ್ತಿಯಾಗಿದ್ದರು . ಸರ್ವರನ್ನು ಆದರದಿಂದ ಕಾಣುವ ಅವರ ಹೃದಯ ವೈಶಾಲ್ಯತೆ ಅನುಕರಣೀಯ ಎಂದರು. ಹಿರಿಯ ಸಾಹಿತಿ ನೀನಾಸು ಮಾತನಾಡಿ ‘ಯುಸುಗೌ ಮರೆಯದ ಮಾಣಿಕ್ಯ. ಸಾಹಿತ್ಯ ಕ್ಷೇತ್ರದಲ್ಲಿ ಒಳ್ಳೆಯ ಛಾಪನ್ನು ಮೂಡಿಸಿದವರು. ಉತ್ತಮ ಗೆಳೆಯರಾಗಿದ್ದ ಅವರು ಎಂದೂ ಕೋಪತಾಪ ಮಾಡಿದವರಲ್ಲ. ಒಬ್ಬ ಒಳ್ಳೆಯ ಸಾಹಿತಿಯನ್ನು ಕಳೆದುಕೊಂಡೆವು ಎಂದರು.

ಶ್ರೀ ಯೋಗೇಶ್ವರಾನಂದ ಸ್ವಾಮೀಜಿ ಮಾತನಾಡಿ ಒಡನಾಡಿಯಾಗಿದ್ದ ಸುಬ್ರಾಯಗೌಡರು ತುಂಬಿದ ಕೊಡ. ವಿಶೇಷ ಶೈಲಿಯ ಅವರ ಬರಹಗಳು ಜನಮಾನಸ ಮುಟ್ಟಿದ್ದವು. ಅವರ ಅರೆಭಾಷೆ ಲೇಖನಗಳು ಹಲವು ಪತ್ರಿಕೆಗಳಲ್ಲಿ ಓದಿದ್ದೆ ಎಂದು ಸ್ಮರಿಸಿದರು. ಚಂದನ ಸಾಹಿತ್ಯ ವೇದಿಕೆ ಕಾರ್ಯದರ್ಶಿ ಸುಮಂಗಲಾ ಲಕ್ಷ್ಮಣ ಕೋಳಿವಾಡ, ವಿಷ್ಣುವರ್ಧನ್ ಅಭಿಮಾನಿ ಬಳಗದ ಅಧ್ಯಕ್ಷ ಹರೀಶ್ಚಂದ್ರ ಪಂಡಿತ್ ಹಾಗೂ ಗಾಯಕ ಗಣೇಶ್ ಬಿ ಎಸ್ ನುಡಿನಮನ ಸಲ್ಲಿಸಿದರು. ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವದರ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಇದೇ ಸಂದರ್ಭ ಸ್ವಾಮೀಜಿಯವರ 163 ನೇ ಪುಸ್ತಕವಾದ ಜೀವದ ಪಯಣ ಸಾಹಿತ್ಯ ಕೃತಿ ಬಿಡುಗಡೆ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

4 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

4 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

18 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

24 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago