Advertisement
ಸುದ್ದಿಗಳು

ಚಂದನ ಸಾಹಿತ್ಯ ವೇದಿಕೆಯಿಂದ ಸಾಹಿತಿ ದಿ. ಯುಸುಗೌ ರವರಿಗೆ ನುಡಿನಮನ

Share

ಸುಳ್ಯ: ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಇತ್ತೀಚಿಗೆ ನಿಧನರಾದ ಸುಳ್ಯದ ಸಾಹಿತಿ ದಿ.ಯು.ಸುಬ್ರಾಯಗೌಡರವರಿಗೆ ನುಡಿನಮನ ಕಾರ್ಯಕ್ರಮ ಶಿರ್ಡಿ ಶ್ರೀ ಸಾಯಿಬಾಬಾ ಜ್ಯೋತಿಷ್ಯಾಲಯದಲ್ಲಿ ನೆರವೇರಿತು.

ಯುಸುಗೌ ಒಂದು ನೆನಪು ಮತ್ತು ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ವಹಿಸಿ ಮಾತನಾಡಿ, ಅಂತಾರಾಷ್ಟ್ರೀಯ ಸಂಸ್ಥೆಯಾದ ಜೇಸಿಐ ಸಂಸ್ಥೆಯ ವಲಯ ತರಬೇತುದಾರರಲ್ಲದೆ ಅತ್ಯುತ್ತಮ ಸಾಹಿತಿಯಾಗಿದ್ದ ಯುಸುಗೌ ಪ್ರಬುದ್ಧ ವ್ಯಕ್ತಿಯಾಗಿದ್ದರು . ಸರ್ವರನ್ನು ಆದರದಿಂದ ಕಾಣುವ ಅವರ ಹೃದಯ ವೈಶಾಲ್ಯತೆ ಅನುಕರಣೀಯ ಎಂದರು. ಹಿರಿಯ ಸಾಹಿತಿ ನೀನಾಸು ಮಾತನಾಡಿ ‘ಯುಸುಗೌ ಮರೆಯದ ಮಾಣಿಕ್ಯ. ಸಾಹಿತ್ಯ ಕ್ಷೇತ್ರದಲ್ಲಿ ಒಳ್ಳೆಯ ಛಾಪನ್ನು ಮೂಡಿಸಿದವರು. ಉತ್ತಮ ಗೆಳೆಯರಾಗಿದ್ದ ಅವರು ಎಂದೂ ಕೋಪತಾಪ ಮಾಡಿದವರಲ್ಲ. ಒಬ್ಬ ಒಳ್ಳೆಯ ಸಾಹಿತಿಯನ್ನು ಕಳೆದುಕೊಂಡೆವು ಎಂದರು.

ಶ್ರೀ ಯೋಗೇಶ್ವರಾನಂದ ಸ್ವಾಮೀಜಿ ಮಾತನಾಡಿ ಒಡನಾಡಿಯಾಗಿದ್ದ ಸುಬ್ರಾಯಗೌಡರು ತುಂಬಿದ ಕೊಡ. ವಿಶೇಷ ಶೈಲಿಯ ಅವರ ಬರಹಗಳು ಜನಮಾನಸ ಮುಟ್ಟಿದ್ದವು. ಅವರ ಅರೆಭಾಷೆ ಲೇಖನಗಳು ಹಲವು ಪತ್ರಿಕೆಗಳಲ್ಲಿ ಓದಿದ್ದೆ ಎಂದು ಸ್ಮರಿಸಿದರು. ಚಂದನ ಸಾಹಿತ್ಯ ವೇದಿಕೆ ಕಾರ್ಯದರ್ಶಿ ಸುಮಂಗಲಾ ಲಕ್ಷ್ಮಣ ಕೋಳಿವಾಡ, ವಿಷ್ಣುವರ್ಧನ್ ಅಭಿಮಾನಿ ಬಳಗದ ಅಧ್ಯಕ್ಷ ಹರೀಶ್ಚಂದ್ರ ಪಂಡಿತ್ ಹಾಗೂ ಗಾಯಕ ಗಣೇಶ್ ಬಿ ಎಸ್ ನುಡಿನಮನ ಸಲ್ಲಿಸಿದರು. ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವದರ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಇದೇ ಸಂದರ್ಭ ಸ್ವಾಮೀಜಿಯವರ 163 ನೇ ಪುಸ್ತಕವಾದ ಜೀವದ ಪಯಣ ಸಾಹಿತ್ಯ ಕೃತಿ ಬಿಡುಗಡೆ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

8 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago