Advertisement
ಸುದ್ದಿಗಳು

ಚಂದನ ಸಾಹಿತ್ಯ ವೇದಿಕೆಯಿಂದ ಸಾಹಿತಿ ದಿ. ಯುಸುಗೌ ರವರಿಗೆ ನುಡಿನಮನ

Share

ಸುಳ್ಯ: ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಇತ್ತೀಚಿಗೆ ನಿಧನರಾದ ಸುಳ್ಯದ ಸಾಹಿತಿ ದಿ.ಯು.ಸುಬ್ರಾಯಗೌಡರವರಿಗೆ ನುಡಿನಮನ ಕಾರ್ಯಕ್ರಮ ಶಿರ್ಡಿ ಶ್ರೀ ಸಾಯಿಬಾಬಾ ಜ್ಯೋತಿಷ್ಯಾಲಯದಲ್ಲಿ ನೆರವೇರಿತು.

ಯುಸುಗೌ ಒಂದು ನೆನಪು ಮತ್ತು ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ವಹಿಸಿ ಮಾತನಾಡಿ, ಅಂತಾರಾಷ್ಟ್ರೀಯ ಸಂಸ್ಥೆಯಾದ ಜೇಸಿಐ ಸಂಸ್ಥೆಯ ವಲಯ ತರಬೇತುದಾರರಲ್ಲದೆ ಅತ್ಯುತ್ತಮ ಸಾಹಿತಿಯಾಗಿದ್ದ ಯುಸುಗೌ ಪ್ರಬುದ್ಧ ವ್ಯಕ್ತಿಯಾಗಿದ್ದರು . ಸರ್ವರನ್ನು ಆದರದಿಂದ ಕಾಣುವ ಅವರ ಹೃದಯ ವೈಶಾಲ್ಯತೆ ಅನುಕರಣೀಯ ಎಂದರು. ಹಿರಿಯ ಸಾಹಿತಿ ನೀನಾಸು ಮಾತನಾಡಿ ‘ಯುಸುಗೌ ಮರೆಯದ ಮಾಣಿಕ್ಯ. ಸಾಹಿತ್ಯ ಕ್ಷೇತ್ರದಲ್ಲಿ ಒಳ್ಳೆಯ ಛಾಪನ್ನು ಮೂಡಿಸಿದವರು. ಉತ್ತಮ ಗೆಳೆಯರಾಗಿದ್ದ ಅವರು ಎಂದೂ ಕೋಪತಾಪ ಮಾಡಿದವರಲ್ಲ. ಒಬ್ಬ ಒಳ್ಳೆಯ ಸಾಹಿತಿಯನ್ನು ಕಳೆದುಕೊಂಡೆವು ಎಂದರು.

ಶ್ರೀ ಯೋಗೇಶ್ವರಾನಂದ ಸ್ವಾಮೀಜಿ ಮಾತನಾಡಿ ಒಡನಾಡಿಯಾಗಿದ್ದ ಸುಬ್ರಾಯಗೌಡರು ತುಂಬಿದ ಕೊಡ. ವಿಶೇಷ ಶೈಲಿಯ ಅವರ ಬರಹಗಳು ಜನಮಾನಸ ಮುಟ್ಟಿದ್ದವು. ಅವರ ಅರೆಭಾಷೆ ಲೇಖನಗಳು ಹಲವು ಪತ್ರಿಕೆಗಳಲ್ಲಿ ಓದಿದ್ದೆ ಎಂದು ಸ್ಮರಿಸಿದರು. ಚಂದನ ಸಾಹಿತ್ಯ ವೇದಿಕೆ ಕಾರ್ಯದರ್ಶಿ ಸುಮಂಗಲಾ ಲಕ್ಷ್ಮಣ ಕೋಳಿವಾಡ, ವಿಷ್ಣುವರ್ಧನ್ ಅಭಿಮಾನಿ ಬಳಗದ ಅಧ್ಯಕ್ಷ ಹರೀಶ್ಚಂದ್ರ ಪಂಡಿತ್ ಹಾಗೂ ಗಾಯಕ ಗಣೇಶ್ ಬಿ ಎಸ್ ನುಡಿನಮನ ಸಲ್ಲಿಸಿದರು. ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವದರ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಇದೇ ಸಂದರ್ಭ ಸ್ವಾಮೀಜಿಯವರ 163 ನೇ ಪುಸ್ತಕವಾದ ಜೀವದ ಪಯಣ ಸಾಹಿತ್ಯ ಕೃತಿ ಬಿಡುಗಡೆ ಮಾಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

4 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

11 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

19 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

21 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago