Advertisement
ಸುದ್ದಿಗಳು

ಚಂದನ ಸಾಹಿತ್ಯ ವೇದಿಕೆಯಿಂದ ಸಾಹಿತಿ ದಿ. ಯುಸುಗೌ ರವರಿಗೆ ನುಡಿನಮನ

Share

ಸುಳ್ಯ: ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಇತ್ತೀಚಿಗೆ ನಿಧನರಾದ ಸುಳ್ಯದ ಸಾಹಿತಿ ದಿ.ಯು.ಸುಬ್ರಾಯಗೌಡರವರಿಗೆ ನುಡಿನಮನ ಕಾರ್ಯಕ್ರಮ ಶಿರ್ಡಿ ಶ್ರೀ ಸಾಯಿಬಾಬಾ ಜ್ಯೋತಿಷ್ಯಾಲಯದಲ್ಲಿ ನೆರವೇರಿತು.

ಯುಸುಗೌ ಒಂದು ನೆನಪು ಮತ್ತು ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ವಹಿಸಿ ಮಾತನಾಡಿ, ಅಂತಾರಾಷ್ಟ್ರೀಯ ಸಂಸ್ಥೆಯಾದ ಜೇಸಿಐ ಸಂಸ್ಥೆಯ ವಲಯ ತರಬೇತುದಾರರಲ್ಲದೆ ಅತ್ಯುತ್ತಮ ಸಾಹಿತಿಯಾಗಿದ್ದ ಯುಸುಗೌ ಪ್ರಬುದ್ಧ ವ್ಯಕ್ತಿಯಾಗಿದ್ದರು . ಸರ್ವರನ್ನು ಆದರದಿಂದ ಕಾಣುವ ಅವರ ಹೃದಯ ವೈಶಾಲ್ಯತೆ ಅನುಕರಣೀಯ ಎಂದರು. ಹಿರಿಯ ಸಾಹಿತಿ ನೀನಾಸು ಮಾತನಾಡಿ ‘ಯುಸುಗೌ ಮರೆಯದ ಮಾಣಿಕ್ಯ. ಸಾಹಿತ್ಯ ಕ್ಷೇತ್ರದಲ್ಲಿ ಒಳ್ಳೆಯ ಛಾಪನ್ನು ಮೂಡಿಸಿದವರು. ಉತ್ತಮ ಗೆಳೆಯರಾಗಿದ್ದ ಅವರು ಎಂದೂ ಕೋಪತಾಪ ಮಾಡಿದವರಲ್ಲ. ಒಬ್ಬ ಒಳ್ಳೆಯ ಸಾಹಿತಿಯನ್ನು ಕಳೆದುಕೊಂಡೆವು ಎಂದರು.

ಶ್ರೀ ಯೋಗೇಶ್ವರಾನಂದ ಸ್ವಾಮೀಜಿ ಮಾತನಾಡಿ ಒಡನಾಡಿಯಾಗಿದ್ದ ಸುಬ್ರಾಯಗೌಡರು ತುಂಬಿದ ಕೊಡ. ವಿಶೇಷ ಶೈಲಿಯ ಅವರ ಬರಹಗಳು ಜನಮಾನಸ ಮುಟ್ಟಿದ್ದವು. ಅವರ ಅರೆಭಾಷೆ ಲೇಖನಗಳು ಹಲವು ಪತ್ರಿಕೆಗಳಲ್ಲಿ ಓದಿದ್ದೆ ಎಂದು ಸ್ಮರಿಸಿದರು. ಚಂದನ ಸಾಹಿತ್ಯ ವೇದಿಕೆ ಕಾರ್ಯದರ್ಶಿ ಸುಮಂಗಲಾ ಲಕ್ಷ್ಮಣ ಕೋಳಿವಾಡ, ವಿಷ್ಣುವರ್ಧನ್ ಅಭಿಮಾನಿ ಬಳಗದ ಅಧ್ಯಕ್ಷ ಹರೀಶ್ಚಂದ್ರ ಪಂಡಿತ್ ಹಾಗೂ ಗಾಯಕ ಗಣೇಶ್ ಬಿ ಎಸ್ ನುಡಿನಮನ ಸಲ್ಲಿಸಿದರು. ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವದರ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಇದೇ ಸಂದರ್ಭ ಸ್ವಾಮೀಜಿಯವರ 163 ನೇ ಪುಸ್ತಕವಾದ ಜೀವದ ಪಯಣ ಸಾಹಿತ್ಯ ಕೃತಿ ಬಿಡುಗಡೆ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

8 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

12 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

20 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

22 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

23 hours ago