ಸುಳ್ಯ: ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಇತ್ತೀಚಿಗೆ ನಿಧನರಾದ ಸುಳ್ಯದ ಸಾಹಿತಿ ದಿ.ಯು.ಸುಬ್ರಾಯಗೌಡರವರಿಗೆ ನುಡಿನಮನ ಕಾರ್ಯಕ್ರಮ ಶಿರ್ಡಿ ಶ್ರೀ ಸಾಯಿಬಾಬಾ ಜ್ಯೋತಿಷ್ಯಾಲಯದಲ್ಲಿ ನೆರವೇರಿತು.
ಯುಸುಗೌ ಒಂದು ನೆನಪು ಮತ್ತು ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ವಹಿಸಿ ಮಾತನಾಡಿ, ಅಂತಾರಾಷ್ಟ್ರೀಯ ಸಂಸ್ಥೆಯಾದ ಜೇಸಿಐ ಸಂಸ್ಥೆಯ ವಲಯ ತರಬೇತುದಾರರಲ್ಲದೆ ಅತ್ಯುತ್ತಮ ಸಾಹಿತಿಯಾಗಿದ್ದ ಯುಸುಗೌ ಪ್ರಬುದ್ಧ ವ್ಯಕ್ತಿಯಾಗಿದ್ದರು . ಸರ್ವರನ್ನು ಆದರದಿಂದ ಕಾಣುವ ಅವರ ಹೃದಯ ವೈಶಾಲ್ಯತೆ ಅನುಕರಣೀಯ ಎಂದರು. ಹಿರಿಯ ಸಾಹಿತಿ ನೀನಾಸು ಮಾತನಾಡಿ ‘ಯುಸುಗೌ ಮರೆಯದ ಮಾಣಿಕ್ಯ. ಸಾಹಿತ್ಯ ಕ್ಷೇತ್ರದಲ್ಲಿ ಒಳ್ಳೆಯ ಛಾಪನ್ನು ಮೂಡಿಸಿದವರು. ಉತ್ತಮ ಗೆಳೆಯರಾಗಿದ್ದ ಅವರು ಎಂದೂ ಕೋಪತಾಪ ಮಾಡಿದವರಲ್ಲ. ಒಬ್ಬ ಒಳ್ಳೆಯ ಸಾಹಿತಿಯನ್ನು ಕಳೆದುಕೊಂಡೆವು ಎಂದರು.
ಶ್ರೀ ಯೋಗೇಶ್ವರಾನಂದ ಸ್ವಾಮೀಜಿ ಮಾತನಾಡಿ ಒಡನಾಡಿಯಾಗಿದ್ದ ಸುಬ್ರಾಯಗೌಡರು ತುಂಬಿದ ಕೊಡ. ವಿಶೇಷ ಶೈಲಿಯ ಅವರ ಬರಹಗಳು ಜನಮಾನಸ ಮುಟ್ಟಿದ್ದವು. ಅವರ ಅರೆಭಾಷೆ ಲೇಖನಗಳು ಹಲವು ಪತ್ರಿಕೆಗಳಲ್ಲಿ ಓದಿದ್ದೆ ಎಂದು ಸ್ಮರಿಸಿದರು. ಚಂದನ ಸಾಹಿತ್ಯ ವೇದಿಕೆ ಕಾರ್ಯದರ್ಶಿ ಸುಮಂಗಲಾ ಲಕ್ಷ್ಮಣ ಕೋಳಿವಾಡ, ವಿಷ್ಣುವರ್ಧನ್ ಅಭಿಮಾನಿ ಬಳಗದ ಅಧ್ಯಕ್ಷ ಹರೀಶ್ಚಂದ್ರ ಪಂಡಿತ್ ಹಾಗೂ ಗಾಯಕ ಗಣೇಶ್ ಬಿ ಎಸ್ ನುಡಿನಮನ ಸಲ್ಲಿಸಿದರು. ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವದರ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಇದೇ ಸಂದರ್ಭ ಸ್ವಾಮೀಜಿಯವರ 163 ನೇ ಪುಸ್ತಕವಾದ ಜೀವದ ಪಯಣ ಸಾಹಿತ್ಯ ಕೃತಿ ಬಿಡುಗಡೆ ಮಾಡಲಾಯಿತು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…