Advertisement
MIRROR FOCUS

ಚಂದ್ರನ ಅಂಗಳದಲ್ಲಿರುವ ವಿಕ್ರಂ ಸಂಪರ್ಕಕ್ಕೆ ಇಂದು ಕೊನೆಯ ದಿನ

Share

ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-2 ಬಹುತೇಕ ಯಶಸ್ಸು ಕಂಡಿತ್ತು. ಆದರೆ ಕೊನೆಯ ಕ್ಷಣದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಳೆದುಕೊಂಡು ನಿರಾಸೆ ಮೂಡಿಸಿತ್ತು. ಆದರೆ ಆರ್ಬಿಟರ್ ಮೂಲಕ ವಿಕ್ರಂ ಇರುವ ಸ್ಥಳ ಪತ್ತೆಯಾಗಿತ್ತು. ಅಂದಿನಿಂದ ನಿರಂತರವಾಗಿ ಸಂಪರ್ಕಕ್ಕೆ ಪ್ರಯತ್ನ ಮಾಡಲಾಗಿತ್ತು. ಸೆಪ್ಟೆಂಬರ್ 7 ರಂದು  ಆರ್ಬಿಟರ್ ಜೊತೆ ಸಂಪರ್ಕ ಕಳೆದುಕೊಂಡಿತ್ತು. ಸಂಪರ್ಕಕ್ಕೆ ಇಂದು ಕೊನೆಯ ದಿನವಾಗಿದೆ. ನಂತರ ವಿಕ್ರಂ ಕರಗಲಿದೆ. ಹೀಗಾಗಿ ಭರವಸೆ ಕಳೆದುಕೊಳ್ಳದೆ ಕೊನೆಯ ಕ್ಷಣದವರೆಗೆ ವಿಜ್ಞಾನಿಗಳು ಸತತ ಪ್ರಯತ್ನ ನಡೆಸುತ್ತಿದ್ದಾರೆ.


ಇಸ್ರೋ ಸತತ ಪ್ರಯತ್ನದ ಮೂಲಕ ಚಂದ್ರಯಾನ-2 ಕೈಗೊಂಡಿತ್ತು. ಈ ಸಂದರ್ಭ ಇಡೀ ಜಗತ್ತು ಭಾರತದ ಕಡೆಗೆ ದೃಷ್ಟಿ ಇಟ್ಟಿತ್ತು. ಚಂದ್ರಯಾನಕ್ಕಿಂತಲೂ ಚಂದ್ರನ ದಕ್ಷಿಣ ಧ್ರುವದಲ್ಲಿ ಇದುವರೆಗೆ ಇಳಿದಿರುವ ಹಾಗೂ ಚಂದ್ರನ ಅಂಗಳದ ಸ್ಪಷ್ಟ ಚಿತ್ರಣ ಸಿಗುವ ಕಾರಣಕ್ಕೆ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದರು. ಆದರೆ ಕೊನೆಯ ಕ್ಷಣಕ್ಕೆ ಆರ್ಬಿಟರ್ ಜೊತೆ ವಿಕ್ರಂ ಸಂಪರ್ಕ ಕಳೆದುಕೊಂಡಿತ್ತು. ಇಂದಿಗೆ ಅದರ ಆಯಸ್ಸು ಮುಗಿಯಲಿದೆ. ಹೀಗಾಗಿ ಪರೋಕ್ಷವಾಗಿ ವಿಕ್ರಂ ಲ್ಯಾಂಡರ್ ಜೊತೆ ಇನ್ನೆಂದೂ ಸಂಪರ್ಕ ಸಾಧ್ಯವಿಲ್ಲ. ಸಂಪರ್ಕ ಕಡಿತದ ಕುರಿತಂತೆ ತಜ್ಞರ ಸಮಿತಿ ವರದಿ ನೀಡಲಿದೆ  ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹೇಳಿದೆ.

ಮಹತ್ವದ ಚಂದ್ರಯಾನ ಯೋಜನೆಯ ವಿಕ್ರಂ ಲ್ಯಾಂಡರ್ ಸೆಪ್ಟೆಂಬರ್ 7 ರಂದು ಆರ್ಬಿಟರ್ ಜೊತೆ ಸಂಪರ್ಕ ಕಳೆದುಕೊಂಡಿತ್ತು. ಇಂದಿಗೆ  ಲ್ಯಾಂಡರ್ ನ ಆಯಸ್ಸು ಮುಗಿಯಲಿದ್ದು, ಕೊನೆಯ ಕ್ಷಣದವರೆಗೆ ಸಂಪರ್ಕಕ್ಕೆ ಪ್ರಯತ್ನ ನಡೆಯುತ್ತಿದೆ.  ಇಂದು ಸಂಜೆಯ ನಂತರ ವಿಕ್ರಂ ಲ್ಯಾಂಡರ್ ಜೊತೆ ಇನ್ನೆಂದೂ ಸಂಪರ್ಕ ಸಾಧ್ಯವಿಲ್ಲ. ಸಂಪರ್ಕ ಕಡಿತದ ಕುರಿತಂತೆ ತಜ್ಞರ ಸಮಿತಿ ವರದಿ ನೀಡಲಿದೆ.ಆದರೆ ಆರ್ಬಿಟರ್ ಮಾತ್ರ ಇನ್ನು ಏಳು ವರ್ಷ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಲಿದೆ.  ಸೆಪ್ಟೆಂಬರ್ 7 ರಂದು ಶನಿವಾರ ಬೆಳಗ್ಗಿನ ಜಾವ ಚಂದ್ರನ ಮೇಲೆ ಲ್ಯಾಂಡ್ ಆಗಬೇಕಿದ್ದ ವಿಕ್ರಂ ಲ್ಯಾಂಡರ್ ಚಂದ್ರನ ಮೇಲ್ಮೈ ತಲುಪಲು ಇನ್ನು ಕೇವಲ 2.1 ಕಿ.ಮೀ. ಅಂತರವಿದೆ ಎನ್ನುವಾಗ ಸಂಪರ್ಕ ಕಳೆದುಕೊಂಡಿತ್ತು. ಆದರೆ ಲ್ಯಾಂಡರ್ ಸುರಕ್ಷಿತವಾಗಿರುವ ಚಿತ್ರನ್ನು ಆರ್ಬಿಟರ್ ಕಳಿಸಿದ ಮೇಲೆ ಅದು ಸಂಪರ್ಕಕ್ಕೆ ಸಿಗಬಹುದು ಎಂಬ ಆಸೆ ಜೀವ ಪಡೆದಿತ್ತು. ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವ ತಲುಪಿ ಈಗಾಗಲೇ ಒಂದು ಪಾಕ್ಷಿಕ ಮುಗಿಯುತ್ತಿದ್ದು, ಇನ್ನು ಹದಿನೈದು ದಿನ ಘೋರ ಚಳಿ ಆರಂಭವಾಗಲಿದೆ. ಕನಿಷ್ಠ -200 ಡಿಗ್ರಿ ಸೆಲ್ಷಿಯ್ ವರೆಗೂ ತಾಪಮಾನ ತಲುಪಲಿದ್ದು, ಈ ವಾತಾವರಣದಲ್ಲಿ ಲ್ಯಾಂಡರ್ ನ ಹೆಪ್ಪುಗಟ್ಟಿ ನಾಶವಾಗುತ್ತದೆ.

( ಮಾಹಿತಿ -ಆನ್ ಲೈನ್)

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

4 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

4 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

11 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

12 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago