Advertisement
ರಾಷ್ಟ್ರೀಯ

ಚಂದ್ರಯಾನ 2ರ ಮೇಲೆ ಹೊಸ ಭರವಸೆಯಲ್ಲಿ ಕೆ. ಶಿವನ್

Share

ನವದೆಹಲಿ: ಇಸ್ರೋದ ಹೆಮ್ಮೆಯ ಚಂದ್ರಯಾನ 2 ಯೋಜನೆಯಲ್ಲಿ ಕೆಲವು ವೈಫಲ್ಯವಾಗಿರಬಹುದು. ಆದರೆ ಅದೇ ಮುಕ್ತಾಯವಾಗಿಲ್ಲ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಧ್ಯಕ್ಷ ಕೆ.ಶಿವನ್ ಹೇಳಿದ್ದಾರೆ.

Advertisement
Advertisement

ಭಾರತ ಈಗಾಗಲೇ ಹಲವು ಸುಧಾರಿತ ಉಪಗ್ರಹಗಳ ಉಡಾವಣೆಗೆ ಚಿಂತನೆ ನಡೆಸುತ್ತಿದೆ. ಚಂದ್ರಯಾನ 2 ರ ಬಗ್ಗೆ ನೀವೆಲ್ಲ ಕೇಳಿದ್ದೀರಿ. ಅದು ತಾಂತ್ರಿಕವಾಗಿ ಕೆಲವು ವೈಫಲ್ಯಗಳನ್ನು ಕಂಡಿರಬಹುದು. ಆದರೆ ಅದರ ಅಧ್ಯಾಯ ಇನ್ನೂ ಮುಕ್ತಾಯವಾಗಿಲ್ಲ. ನಮ್ಮಲ್ಲಿ ಭರವಸೆ ಉಳಿದಿದೆ ಎಂದು ಶಿವನ್ ಹೇಳಿದರು.  ಸಾಫ್ಟ್ ಲ್ಯಾಂಡಿಂಗ್ ಬಗ್ಗೆ ಸಂಶೋಧನೆ ನಡೆಸಲು ಇಸ್ರೋ ತನ್ನೆಲ್ಲ ಅನುಭವ, ಜ್ಞಾನವನ್ನೂ ಉಪಯೋಗಿಸಲಿದೆ, ಜೊತೆಗೆ ಆ ವೈಫಲ್ಯ ಮುಂದೆಂದೂ ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಲಿದೆ ಎಂದು ಶಿವನ್ ಹೇಳಿದರು. ದೆಹಲಿ ಐಐಟಿಯಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮಾತನಾಡುತ್ತಿದ್ದರು.

ಚಂದ್ರಯಾನ 2 ರ ನಮ್ಮ ಯೋಜನೆಯ ಉದ್ದೇಶ ಸಂಪೂರ್ಣ ಯಶಸ್ವಿಯಾಗದೆ ಇದ್ದರೂ 95 % ಅದು ಯಶಸ್ವಿಯಾಗಿದೆ. ಚಂದ್ರನ ದಕ್ಷಿಣ ಧ್ರುವದ ಉದ್ದಕ್ಕೂ ಸುತ್ತುತ್ತಿರುವ ಆರ್ಬಿಟರ್ ಈಗಲೂ ಚಂದ್ರನ ಅಧ್ಯಯನ ನಡೆಸುತ್ತಿದೆ. ಸಾಕಷ್ಟು ಅಗತ್ಯ ಮಾಹಿತಿಯನ್ನು ರವಾನಿಸುತ್ತಿದೆ ಎಂದು ಕೆ ಶಿವನ್ ಹೇಳಿದರು.

ಇಸ್ರೋದ ಮುಂದಿನ ಮಹತ್ವಾಕಾಂಕ್ಷಿ ಯೋಜನೆ ಎಂದರೆ ಚಂದ್ರನ ಸಮೀಪಕ್ಕೆ ಬಾಹ್ಯಾಕಾಶ ನೌಕೆಯನ್ನು ಕಳಿಸುವುದು, ಜೊತೆಗೆ ಮಾನವ ಸಹಿತ ನೌಕೆಯನ್ನು ಬಾಹ್ಯಾಕಾಶಕ್ಕೆ ಕಳಿಸುವುದು. ಸದ್ಯದಲ್ಲೇ ಈ ಎರಡು ಮಹತ್ವಾಕಾಂಕ್ಷಿ ಯೋಜನೆಯನ್ನು ಇಸ್ರೋ ಸಾಕಾರಗೊಳಿಸಲಿದೆ ಎಂದು ಅವರು ಹೇಳಿದರು.

ಯಶಸ್ವಿಯಾಗಲು ಟಾಪರ್ ಆಗಬೇಕಿಲ್ಲ: ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದ ಶಿವನ್, “ಜೀವನದಲ್ಲಿ ಯಶಸ್ವಿಯಾಗಲು ನೀವು ಅತೀ ಬುದ್ಧಿವಂತರಾಗಬೇಕಿಲ್ಲ, ಟಾಪರ್ ಆಗಬೇಕಿಲ್ಲ, ನೀವು ಅತ್ಯುತ್ತಮ ಗ್ರೇಡ್ ಪಡೆಯಬೇಕಿಲ್ಲ. ನಿಮ್ಮ ಮುಂದಿರುವ ಅಡೆತಡೆ, ವೃಥಾ ಕಾಲಹರಣದ ಕೆಲಸಗಳನ್ನು ಬದಿಗಿಟ್ಟು ಒಂದೇ ಕಡೆ ಗಮನವಿಡುವುದನ್ನು ಕಲಿಯಬೇಕು” ಎಂದು ಶಿವನ್ ಹೇಳಿದರು. ನಿಮ್ಮ ಆಸಕ್ತಿ ಪ್ರತಿಭೆಯನ್ನು ಗುರುತಿಸಿ. ಮತ್ತೊಬ್ಬರನ್ನು ನಕಲು ಮಾಡಬೇಡಿ. ನಿಮಗೆ ಯಾವುದು ಆಸಕ್ತಿಯೋ ಅದನ್ನು ಮಾಡಿ, ಮತ್ತೊಬ್ಬರು ಮಾಡಿದ್ದನ್ನು ಮಾಡಿದರೆ ನೀವೂ ಕಾಮೆಡಿಯನ್ ಆಗುತ್ತೀರಿ ಅಷ್ಟೆ. ನಿಮಗೆ ಯಾವುದು ಇಷ್ಟ, ಮತ್ತು ನಿಮಗೆ ಯಾವುದು ಸೂಕ್ತ ಎಂಬುದನ್ನು ಅರ್ಥ ಮಾಡಿಕೊಂಡು ಆ ಹಾದಿ ಹಿಡಿಯಿರಿ ಎಂದು ಸಹ ಶಿವನ್ ಈ ಸಂದರ್ಭದಲ್ಲಿ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

11 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

11 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago