ರಾಷ್ಟ್ರೀಯ

ಚಂದ್ರಯಾನ-2 ಉಡಾವಣೆ ಇಂದಿಲ್ಲ, ಮುಂದಕ್ಕೆ….

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶ್ರೀಹರಿಕೋಟ: ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಇಂದು  ಚಂದ್ರಯಾನ-2 ಉಡಾವಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಸ್ರೋ ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಬೆಳಗ್ಗೆ ಉಡಾವಣೆಗಿಂತ 56 ನಿಮಿಷ ಮೊದಲು ಟ್ವೀಟ್ ಮಾಡಿರುವ ಇಸ್ರೋ  ಸದ್ಯದಲ್ಲೇ ಉಡಾವಣೆಯ ಮುಂದಿನ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ  ತಿಳಿಸಲಾಗಿದೆ.

Advertisement
Advertisement

ಇಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ  ಭಾರತದ ಹೆಮ್ಮೆಯ ಜಿಎಸ್‌ಎಲ್‌ವಿ ಮಾಕ್-3 ಬಾಹುಬಲಿ ಉಡಾವಣಾ ವಾಹನದಲ್ಲಿ ಗಗನನೌಕೆ ಸಾಗಬೇಕಾಗಿತ್ತು. ಚಂದ್ರಯಾನದಲ್ಲಿ ರೋವರ್ ಚಲನೆಗೆ ನೆರವಾಗಲು ಕಾನ್ಪುರ ಐಐಟಿ ವಿಜ್ಞಾನಿಗಳು ವಿಶೇಷ ತಂತ್ರಾಂಶ ರೂಪಿಸಿದ್ದಾರೆ. ಚಲನೆಗೆ ನೆರವಾಗಲು ವಿಶೇಷ ಮೋಷನ್ ಪ್ಲ್ಯಾನಿಂಗ್ ಹಾಗೂ ಮ್ಯಾಪಿಂಗ್‌ನ ತಂತ್ರಾಂಶ ಇದಾಗಿದೆ. ಭಾರತದ ಅತಿ ಭಾರದ ರಾಕೆಟ್ ‘ಬಾಹುಬಲಿ’ ಎಂದು ಹೆಸರಿಸಲಾದ ಜಿಎಸ್​ಎಲ್​ವಿ ಎಂಕೆ-3, ಒಟ್ಟು 14 ವೈಜ್ಞಾನಿಕ ಉಪಕರಣಗಳನ್ನು ಹೊತ್ತೊಯ್ಯಲಿದೆ. ಇದರಲ್ಲಿ ನಾಸಾದ ಒಂದು ಉಪಕರಣವೂ ಇದೆ. ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನದ ಉಪಗ್ರಹ ವನ್ನು ಪಿಎಸ್​ಎಲ್​ವಿ ಕ್ಲಾಸ್​ನ ರಾಕೆಟ್​ನಿಂದ ಉಡಾವಣೆ ಮಾಡಲಾಗಿತ್ತು. ಯಾರೂ ಅಧ್ಯಯನ ನಡೆಸಿರದ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಆಯ್ಕೆಮಾಡಿದೆ.  ಚಂದ್ರಯಾನ-2, ಚಂದ್ರ ಉಪಗ್ರಹದಲ್ಲಿ ಭಾರತದ ಎರಡನೆಯ ಅಧ್ಯಯನವಾಗಲಿದೆ.

ಉಡಾವಣೆಗೆ ಮುನ್ನ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಉಡಾವಣೆ ಸ್ಥಗಿತ ಮಾಡಲಾಗಿದ್ದು ಮುಂದೆ ಈ ಸದ್ಯದಲ್ಲಿ ಉಡಾವಣೆಗೊಳ್ಳಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

9 minutes ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

2 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

8 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

8 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

9 hours ago