Advertisement
ರಾಷ್ಟ್ರೀಯ

ಚಂದ್ರಯಾನ-2 ಉಡಾವಣೆ ಇಂದಿಲ್ಲ, ಮುಂದಕ್ಕೆ….

Share

ಶ್ರೀಹರಿಕೋಟ: ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಇಂದು  ಚಂದ್ರಯಾನ-2 ಉಡಾವಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಸ್ರೋ ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಬೆಳಗ್ಗೆ ಉಡಾವಣೆಗಿಂತ 56 ನಿಮಿಷ ಮೊದಲು ಟ್ವೀಟ್ ಮಾಡಿರುವ ಇಸ್ರೋ  ಸದ್ಯದಲ್ಲೇ ಉಡಾವಣೆಯ ಮುಂದಿನ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ  ತಿಳಿಸಲಾಗಿದೆ.

ಇಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ  ಭಾರತದ ಹೆಮ್ಮೆಯ ಜಿಎಸ್‌ಎಲ್‌ವಿ ಮಾಕ್-3 ಬಾಹುಬಲಿ ಉಡಾವಣಾ ವಾಹನದಲ್ಲಿ ಗಗನನೌಕೆ ಸಾಗಬೇಕಾಗಿತ್ತು. ಚಂದ್ರಯಾನದಲ್ಲಿ ರೋವರ್ ಚಲನೆಗೆ ನೆರವಾಗಲು ಕಾನ್ಪುರ ಐಐಟಿ ವಿಜ್ಞಾನಿಗಳು ವಿಶೇಷ ತಂತ್ರಾಂಶ ರೂಪಿಸಿದ್ದಾರೆ. ಚಲನೆಗೆ ನೆರವಾಗಲು ವಿಶೇಷ ಮೋಷನ್ ಪ್ಲ್ಯಾನಿಂಗ್ ಹಾಗೂ ಮ್ಯಾಪಿಂಗ್‌ನ ತಂತ್ರಾಂಶ ಇದಾಗಿದೆ. ಭಾರತದ ಅತಿ ಭಾರದ ರಾಕೆಟ್ ‘ಬಾಹುಬಲಿ’ ಎಂದು ಹೆಸರಿಸಲಾದ ಜಿಎಸ್​ಎಲ್​ವಿ ಎಂಕೆ-3, ಒಟ್ಟು 14 ವೈಜ್ಞಾನಿಕ ಉಪಕರಣಗಳನ್ನು ಹೊತ್ತೊಯ್ಯಲಿದೆ. ಇದರಲ್ಲಿ ನಾಸಾದ ಒಂದು ಉಪಕರಣವೂ ಇದೆ. ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನದ ಉಪಗ್ರಹ ವನ್ನು ಪಿಎಸ್​ಎಲ್​ವಿ ಕ್ಲಾಸ್​ನ ರಾಕೆಟ್​ನಿಂದ ಉಡಾವಣೆ ಮಾಡಲಾಗಿತ್ತು. ಯಾರೂ ಅಧ್ಯಯನ ನಡೆಸಿರದ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಆಯ್ಕೆಮಾಡಿದೆ.  ಚಂದ್ರಯಾನ-2, ಚಂದ್ರ ಉಪಗ್ರಹದಲ್ಲಿ ಭಾರತದ ಎರಡನೆಯ ಅಧ್ಯಯನವಾಗಲಿದೆ.

ಉಡಾವಣೆಗೆ ಮುನ್ನ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಉಡಾವಣೆ ಸ್ಥಗಿತ ಮಾಡಲಾಗಿದ್ದು ಮುಂದೆ ಈ ಸದ್ಯದಲ್ಲಿ ಉಡಾವಣೆಗೊಳ್ಳಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

1 hour ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

2 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

19 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago