Advertisement
ರಾಷ್ಟ್ರೀಯ

ಚಂದ್ರಯಾನ-2 ಉಡಾವಣೆ ಇಂದಿಲ್ಲ, ಮುಂದಕ್ಕೆ….

Share

ಶ್ರೀಹರಿಕೋಟ: ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಇಂದು  ಚಂದ್ರಯಾನ-2 ಉಡಾವಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಸ್ರೋ ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಬೆಳಗ್ಗೆ ಉಡಾವಣೆಗಿಂತ 56 ನಿಮಿಷ ಮೊದಲು ಟ್ವೀಟ್ ಮಾಡಿರುವ ಇಸ್ರೋ  ಸದ್ಯದಲ್ಲೇ ಉಡಾವಣೆಯ ಮುಂದಿನ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ  ತಿಳಿಸಲಾಗಿದೆ.

ಇಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ  ಭಾರತದ ಹೆಮ್ಮೆಯ ಜಿಎಸ್‌ಎಲ್‌ವಿ ಮಾಕ್-3 ಬಾಹುಬಲಿ ಉಡಾವಣಾ ವಾಹನದಲ್ಲಿ ಗಗನನೌಕೆ ಸಾಗಬೇಕಾಗಿತ್ತು. ಚಂದ್ರಯಾನದಲ್ಲಿ ರೋವರ್ ಚಲನೆಗೆ ನೆರವಾಗಲು ಕಾನ್ಪುರ ಐಐಟಿ ವಿಜ್ಞಾನಿಗಳು ವಿಶೇಷ ತಂತ್ರಾಂಶ ರೂಪಿಸಿದ್ದಾರೆ. ಚಲನೆಗೆ ನೆರವಾಗಲು ವಿಶೇಷ ಮೋಷನ್ ಪ್ಲ್ಯಾನಿಂಗ್ ಹಾಗೂ ಮ್ಯಾಪಿಂಗ್‌ನ ತಂತ್ರಾಂಶ ಇದಾಗಿದೆ. ಭಾರತದ ಅತಿ ಭಾರದ ರಾಕೆಟ್ ‘ಬಾಹುಬಲಿ’ ಎಂದು ಹೆಸರಿಸಲಾದ ಜಿಎಸ್​ಎಲ್​ವಿ ಎಂಕೆ-3, ಒಟ್ಟು 14 ವೈಜ್ಞಾನಿಕ ಉಪಕರಣಗಳನ್ನು ಹೊತ್ತೊಯ್ಯಲಿದೆ. ಇದರಲ್ಲಿ ನಾಸಾದ ಒಂದು ಉಪಕರಣವೂ ಇದೆ. ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನದ ಉಪಗ್ರಹ ವನ್ನು ಪಿಎಸ್​ಎಲ್​ವಿ ಕ್ಲಾಸ್​ನ ರಾಕೆಟ್​ನಿಂದ ಉಡಾವಣೆ ಮಾಡಲಾಗಿತ್ತು. ಯಾರೂ ಅಧ್ಯಯನ ನಡೆಸಿರದ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಆಯ್ಕೆಮಾಡಿದೆ.  ಚಂದ್ರಯಾನ-2, ಚಂದ್ರ ಉಪಗ್ರಹದಲ್ಲಿ ಭಾರತದ ಎರಡನೆಯ ಅಧ್ಯಯನವಾಗಲಿದೆ.

ಉಡಾವಣೆಗೆ ಮುನ್ನ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಉಡಾವಣೆ ಸ್ಥಗಿತ ಮಾಡಲಾಗಿದ್ದು ಮುಂದೆ ಈ ಸದ್ಯದಲ್ಲಿ ಉಡಾವಣೆಗೊಳ್ಳಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

20 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

20 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago