Advertisement
ರಾಷ್ಟ್ರೀಯ

ಚಂದ್ರಯಾನ-2 ಉಡಾವಣೆ ಇಂದಿಲ್ಲ, ಮುಂದಕ್ಕೆ….

Share

ಶ್ರೀಹರಿಕೋಟ: ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಇಂದು  ಚಂದ್ರಯಾನ-2 ಉಡಾವಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಸ್ರೋ ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಬೆಳಗ್ಗೆ ಉಡಾವಣೆಗಿಂತ 56 ನಿಮಿಷ ಮೊದಲು ಟ್ವೀಟ್ ಮಾಡಿರುವ ಇಸ್ರೋ  ಸದ್ಯದಲ್ಲೇ ಉಡಾವಣೆಯ ಮುಂದಿನ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ  ತಿಳಿಸಲಾಗಿದೆ.

ಇಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ  ಭಾರತದ ಹೆಮ್ಮೆಯ ಜಿಎಸ್‌ಎಲ್‌ವಿ ಮಾಕ್-3 ಬಾಹುಬಲಿ ಉಡಾವಣಾ ವಾಹನದಲ್ಲಿ ಗಗನನೌಕೆ ಸಾಗಬೇಕಾಗಿತ್ತು. ಚಂದ್ರಯಾನದಲ್ಲಿ ರೋವರ್ ಚಲನೆಗೆ ನೆರವಾಗಲು ಕಾನ್ಪುರ ಐಐಟಿ ವಿಜ್ಞಾನಿಗಳು ವಿಶೇಷ ತಂತ್ರಾಂಶ ರೂಪಿಸಿದ್ದಾರೆ. ಚಲನೆಗೆ ನೆರವಾಗಲು ವಿಶೇಷ ಮೋಷನ್ ಪ್ಲ್ಯಾನಿಂಗ್ ಹಾಗೂ ಮ್ಯಾಪಿಂಗ್‌ನ ತಂತ್ರಾಂಶ ಇದಾಗಿದೆ. ಭಾರತದ ಅತಿ ಭಾರದ ರಾಕೆಟ್ ‘ಬಾಹುಬಲಿ’ ಎಂದು ಹೆಸರಿಸಲಾದ ಜಿಎಸ್​ಎಲ್​ವಿ ಎಂಕೆ-3, ಒಟ್ಟು 14 ವೈಜ್ಞಾನಿಕ ಉಪಕರಣಗಳನ್ನು ಹೊತ್ತೊಯ್ಯಲಿದೆ. ಇದರಲ್ಲಿ ನಾಸಾದ ಒಂದು ಉಪಕರಣವೂ ಇದೆ. ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನದ ಉಪಗ್ರಹ ವನ್ನು ಪಿಎಸ್​ಎಲ್​ವಿ ಕ್ಲಾಸ್​ನ ರಾಕೆಟ್​ನಿಂದ ಉಡಾವಣೆ ಮಾಡಲಾಗಿತ್ತು. ಯಾರೂ ಅಧ್ಯಯನ ನಡೆಸಿರದ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಆಯ್ಕೆಮಾಡಿದೆ.  ಚಂದ್ರಯಾನ-2, ಚಂದ್ರ ಉಪಗ್ರಹದಲ್ಲಿ ಭಾರತದ ಎರಡನೆಯ ಅಧ್ಯಯನವಾಗಲಿದೆ.

ಉಡಾವಣೆಗೆ ಮುನ್ನ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಉಡಾವಣೆ ಸ್ಥಗಿತ ಮಾಡಲಾಗಿದ್ದು ಮುಂದೆ ಈ ಸದ್ಯದಲ್ಲಿ ಉಡಾವಣೆಗೊಳ್ಳಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

5 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

5 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

9 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

10 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

20 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

20 hours ago