ಬೆಂಗಳೂರು: ಚಂದ್ರಯಾನ 2 ರಲ್ಲಿ ಸಂಪರ್ಕ ಕಡಿತಗೊಂಡಿದ್ದ ವಿಕ್ರಂ ಲ್ಯಾಂಡರ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆರ್ಬಿಟರ್ ಕಳುಹಿಸಿರುವ ಚಿತ್ರದಲ್ಲಿ ವಿಕ್ರಂ ಲ್ಯಾಂಡರ್ ಪತ್ತೆಯಾಗಿದ್ದು ಇದೀಗ ವಿಕ್ರಂ ಜೊತೆ ಸಂಪರ್ಕ ಸಾಧಿಸಲು ಇಸ್ರೋ ವಿಜ್ಞಾನಿಗಳ ತಂಡ ಪ್ರಯತ್ನ ಮಾಡುತ್ತಿದೆ ಎಂದು ಇಸ್ರೋ ಮುಖ್ಯಸ್ಥ ಕೆ.ಶಿವನ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಚಂದ್ರಯಾನ-2 ಯೋಜನೆಯಲ್ಲಿ ಸಾಫ್ಟ್ ಲ್ಯಾಂಡಿಂಗ್ ವೇಳೆ ಲ್ಯಾಂಡರ್ ಜೊತೆ ಸಂಪರ್ಕ ಕಡಿತಗೊಂಡಿತ್ತು. ಅದಾದ ಬಳಿಕ ಸತತವಾಗಿ ಲ್ಯಾಂಡರ್ ಪತ್ತೆಗೆ ಪ್ರಯತ್ನ ನಡೆಯುತ್ತಿತ್ತು. ಚಂದ್ರನ ಕಕ್ಷೆಯಲ್ಲಿ ನಿಗದಿತವಾಗಿ ಕಾರ್ಯನಿರ್ವಹಿಸುತ್ತಿರುವ ಕಕ್ಷಾಗಾರ (ಆರ್ಬಿಟರ್) ಅತ್ಯಂತ ಸುರಕ್ಷಿತ ಮತ್ತು ಆರೋಗ್ಯಕರವಾಗಿತ್ತು. ಇದರಲ್ಲಿ ಯಾವುದೇ ಸಮಸ್ಯೆ ಕಂಡುಬಂದಿರಲಿಲ್ಲ. ಹೀಗಾಗಿ ಆರ್ಬಿಟರ್ ಮೂಲಕ ಫೋಟೊ ತೆಗೆಯಲಾಗುತ್ತಿದ್ದು ಇದರಲ್ಲಿ ವಿಕ್ರಂ ಲ್ಯಾಂಡರ್ ಪತ್ತೆಯಾಗಿದೆ ಎಂದು ಇಸ್ರೋ ತಿಳಿಸಿದೆ. ಸುಮಾರು 1600 ಕೆಜಿ ತೂಕದ ವಿಕ್ರಂ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಇಳಿಯುವ ವೇಳೆ ಸಂಪರ್ಕ ಕಡಿತಗೊಂಡಿತ್ತು.
ಮೂರು ದಿನಗಳಲ್ಲಿ ವಿಕ್ರಂ ಪತ್ತೆಯಾಗಿ ನಮ್ಮ ಸಂಪರ್ಕಕ್ಕೆ ಬರುವ ಸಾಧ್ಯತೆ ಇದೆ ಎಂದು ಇಸ್ರೋ ಮುಖ್ಯಸ್ಥ ಕೆ.ಶಿವನ್ ದೂರದರ್ಶನಕ್ಕೆ ನೀಡಿದ ವಿಶೇಷ ಸಂದರ್ಶನವೊಂದರಲ್ಲಿ ತಿಳಿಸಿದ್ದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…