ಕಾರ್ಯಕ್ರಮಗಳು

ಚಂದ್ರಶೇಖರ ಪೇರಾಲಿಗೆ ಯೆನೆಪೊಯ ಶಿಕ್ಷಕ ಪ್ರಶಸ್ತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಯೆನೆಪೊಯ ಸಮೂಹ ಸಂಸ್ಥೆಗಳ ಸಂಸ್ಥಾಪಕ ದಿವಂಗತ ಯೆನೆಪೊಯ ಮೊಹಿಯುದ್ದೀನ್ ಕುಂಞಿ ಸ್ಮರಣಾರ್ಥ ಸಂಸ್ಥೆಯ ಸಂಸ್ಥಾಪಕರ ದಿನವಾದ ನ.14ರಂದು ನೀಡಲಾಗುವ ಪ್ರಸಕ್ತ ಸಾಲಿನ ಯೆನೆಪೊಯ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಯೆನೆಪೊಯ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು.

Advertisement
Advertisement

ಶಿಕ್ಷಣ ಕ್ಷೇತ್ರದಲ್ಲಿ ಸರಕಾರಿ ಶಾಲೆಗಳ ಮೂಲಕ ಉನ್ನತ ಸಾಧನೆಗೈದ ಶಿಕ್ಷಕರಿಗೆ ನೀಡಲಾಗುವ ಈ ಪ್ರಶಸ್ತಿಯನ್ನು ಪ್ರೌಢಶಾಲಾ ವಿಭಾಗದಲ್ಲಿ ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಚಂದ್ರಶೇಖರ ಪೇರಾಲು ಹಾಗೂ ಪ್ರಾಥಮಿಕ ವಿಭಾಗದಲ್ಲಿ ಬೈಲು ಪ್ರಾಥಮಿಕ ಶಾಲಾ ಶಿಕ್ಷಕ ಎಡ್ವರ್ಡ್ ಡಿಸೋಜರಿಗೆ ಅವರಿಗೆ ಪ್ರದಾನ ಮಾಡಲಾಯಿತು. ನಗದು ಹಾಗು ಫಲಕ ಒಳಗೊಂಡ ಪ್ರಶಸ್ತಿಯನ್ನು ಯೆನೆಪೊಯ (ಪರಿಗಣಿತ) ವಿವಿ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಚಂದ್ರಶೇಖರ ಪೇರಾಲು, ನಾನು ಬಾಲ್ಯದಲ್ಲಿ 10 ಕಿ.ಮೀ. ದೂರ ಕಾಲ್ನಡಿಗೆಯಲ್ಲಿ ಹೋಗಿ ಸುಳ್ಯದ ಕುಗ್ರಾಮ ವೊಂದರಲ್ಲಿರುವ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದೇನೆ. ಗ್ರಾಮೀಣ ಶಾಲೆಗಳ ಮಕ್ಕಳ ಬಡತನ ಕಂಡು ಅವರಿಗೆ ಏನಾದರೂ ಸಹಾಯ ಮಾಡಬೇಕೆಂದು ನಿರ್ಧರಿಸಿ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸತೊಡಗಿದ್ದೇನೆಶಾಲೆಯಲ್ಲಿ, ಸರಕಾರಿ ಕಚೇರಿಯಲ್ಲಿ ಉತ್ತಮ ವಾತಾವರಣವನ್ನು, ಆಕರ್ಷಕ ಗೊಳಿಸುವ ಕೆಲಸವನ್ನು ಮಾಡಿದ್ದೇನೆ. ವಿದ್ಯಾರ್ಥಿಗಳಿಗೆ ಶಿಕ್ಷಕರು ಉತ್ತಮ ಪ್ರೇರಕರು, ಮಾರ್ಗದರ್ಶಿಗಳು ಆಗಿರಬೇಕು ಎಂದರು.

ಎಡ್ವರ್ಡ್ ಡಿಸೋಜ ಮಾತನಾಡಿ, ಬೆಳ್ತಂಗಡಿಯ ಶಾಲೆಯಲ್ಲಿ ಕಾಣಿಕೆ ಡಬ್ಬಿ ಇಟ್ಟು ಸಂಗ್ರಹವಾದ ಹಣದಿಂದ ಶಾಲೆಯ ಅಭಿವೃದ್ಧಿ ಮಾಡಿದ ತೃಪ್ತಿ ಇದೆ ಎಂದರು. ವೈಎಂಕೆ ಸ್ಮಾರಕ ಉಪನ್ಯಾಸ ನೀಡಿದ ಮಂಗಳೂರು ಮೀನುಗಾರಿಕಾ ಕಾಲೇಜಿನ ಮಾಜಿ ಡೀನ್ ಎಸ್.ಎಂ.ಶಿವಪ್ರಕಾಶ್, ವಿದ್ಯಾರ್ಥಿಗಳು ನಿರಂತರ ಕ್ರಿಯಾಶೀಲತೆಯೊಂದಿಗೆ ನಿರಂತರ ಕಲಿಕೆಯೊಂದು ಸ್ವಯಂಸ್ಫೂರ್ತಿ ಪಡೆದುಕೊಳ್ಳಬೇಕು ಎಂದರು.

Advertisement

ಸಮಾರಂಭದಲ್ಲಿ ಯೆನೆಪೊಯ ವಿವಿ ಸಹ ಕುಲಪತಿ ಫರ್ಹಾದ್ ಯೆನೆಪೊಯ, ಯೆನೆಪೊಯ ಪಪೂ ಕಾಲೇಜಿನ ಪ್ರಾಂಶುಪಾಲ ಜೋಸೆಫ್ ಮಚಿರಾತ್, ಶಾಲಾ ಕ್ಯಾಂಪಸ್ ನಿರ್ದೇಶಕಿ ಮಿಶ್ರಿಯಾ ಜಾವೆದ್, ಶಾಲಾ ಉಪ ಪ್ರಾಂಶುಪಾಲ ರೇಶ್ಮಾ ನಾಯಕ್, ಯೆನೆಪೊಯ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯೆ ನಸ್ರೀನಾ ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ಅನಿಲ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

4 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

5 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

5 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

6 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

13 hours ago