ಮಂಗಳೂರು: ಯೆನೆಪೊಯ ಸಮೂಹ ಸಂಸ್ಥೆಗಳ ಸಂಸ್ಥಾಪಕ ದಿವಂಗತ ಯೆನೆಪೊಯ ಮೊಹಿಯುದ್ದೀನ್ ಕುಂಞಿ ಸ್ಮರಣಾರ್ಥ ಸಂಸ್ಥೆಯ ಸಂಸ್ಥಾಪಕರ ದಿನವಾದ ನ.14ರಂದು ನೀಡಲಾಗುವ ಪ್ರಸಕ್ತ ಸಾಲಿನ ಯೆನೆಪೊಯ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಯೆನೆಪೊಯ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು.
ಶಿಕ್ಷಣ ಕ್ಷೇತ್ರದಲ್ಲಿ ಸರಕಾರಿ ಶಾಲೆಗಳ ಮೂಲಕ ಉನ್ನತ ಸಾಧನೆಗೈದ ಶಿಕ್ಷಕರಿಗೆ ನೀಡಲಾಗುವ ಈ ಪ್ರಶಸ್ತಿಯನ್ನು ಪ್ರೌಢಶಾಲಾ ವಿಭಾಗದಲ್ಲಿ ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಚಂದ್ರಶೇಖರ ಪೇರಾಲು ಹಾಗೂ ಪ್ರಾಥಮಿಕ ವಿಭಾಗದಲ್ಲಿ ಬೈಲು ಪ್ರಾಥಮಿಕ ಶಾಲಾ ಶಿಕ್ಷಕ ಎಡ್ವರ್ಡ್ ಡಿಸೋಜರಿಗೆ ಅವರಿಗೆ ಪ್ರದಾನ ಮಾಡಲಾಯಿತು. ನಗದು ಹಾಗು ಫಲಕ ಒಳಗೊಂಡ ಪ್ರಶಸ್ತಿಯನ್ನು ಯೆನೆಪೊಯ (ಪರಿಗಣಿತ) ವಿವಿ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞಿ ಪ್ರದಾನ ಮಾಡಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಚಂದ್ರಶೇಖರ ಪೇರಾಲು, ನಾನು ಬಾಲ್ಯದಲ್ಲಿ 10 ಕಿ.ಮೀ. ದೂರ ಕಾಲ್ನಡಿಗೆಯಲ್ಲಿ ಹೋಗಿ ಸುಳ್ಯದ ಕುಗ್ರಾಮ ವೊಂದರಲ್ಲಿರುವ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದೇನೆ. ಗ್ರಾಮೀಣ ಶಾಲೆಗಳ ಮಕ್ಕಳ ಬಡತನ ಕಂಡು ಅವರಿಗೆ ಏನಾದರೂ ಸಹಾಯ ಮಾಡಬೇಕೆಂದು ನಿರ್ಧರಿಸಿ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸತೊಡಗಿದ್ದೇನೆಶಾಲೆಯಲ್ಲಿ, ಸರಕಾರಿ ಕಚೇರಿಯಲ್ಲಿ ಉತ್ತಮ ವಾತಾವರಣವನ್ನು, ಆಕರ್ಷಕ ಗೊಳಿಸುವ ಕೆಲಸವನ್ನು ಮಾಡಿದ್ದೇನೆ. ವಿದ್ಯಾರ್ಥಿಗಳಿಗೆ ಶಿಕ್ಷಕರು ಉತ್ತಮ ಪ್ರೇರಕರು, ಮಾರ್ಗದರ್ಶಿಗಳು ಆಗಿರಬೇಕು ಎಂದರು.
ಎಡ್ವರ್ಡ್ ಡಿಸೋಜ ಮಾತನಾಡಿ, ಬೆಳ್ತಂಗಡಿಯ ಶಾಲೆಯಲ್ಲಿ ಕಾಣಿಕೆ ಡಬ್ಬಿ ಇಟ್ಟು ಸಂಗ್ರಹವಾದ ಹಣದಿಂದ ಶಾಲೆಯ ಅಭಿವೃದ್ಧಿ ಮಾಡಿದ ತೃಪ್ತಿ ಇದೆ ಎಂದರು. ವೈಎಂಕೆ ಸ್ಮಾರಕ ಉಪನ್ಯಾಸ ನೀಡಿದ ಮಂಗಳೂರು ಮೀನುಗಾರಿಕಾ ಕಾಲೇಜಿನ ಮಾಜಿ ಡೀನ್ ಎಸ್.ಎಂ.ಶಿವಪ್ರಕಾಶ್, ವಿದ್ಯಾರ್ಥಿಗಳು ನಿರಂತರ ಕ್ರಿಯಾಶೀಲತೆಯೊಂದಿಗೆ ನಿರಂತರ ಕಲಿಕೆಯೊಂದು ಸ್ವಯಂಸ್ಫೂರ್ತಿ ಪಡೆದುಕೊಳ್ಳಬೇಕು ಎಂದರು.
ಸಮಾರಂಭದಲ್ಲಿ ಯೆನೆಪೊಯ ವಿವಿ ಸಹ ಕುಲಪತಿ ಫರ್ಹಾದ್ ಯೆನೆಪೊಯ, ಯೆನೆಪೊಯ ಪಪೂ ಕಾಲೇಜಿನ ಪ್ರಾಂಶುಪಾಲ ಜೋಸೆಫ್ ಮಚಿರಾತ್, ಶಾಲಾ ಕ್ಯಾಂಪಸ್ ನಿರ್ದೇಶಕಿ ಮಿಶ್ರಿಯಾ ಜಾವೆದ್, ಶಾಲಾ ಉಪ ಪ್ರಾಂಶುಪಾಲ ರೇಶ್ಮಾ ನಾಯಕ್, ಯೆನೆಪೊಯ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯೆ ನಸ್ರೀನಾ ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ಅನಿಲ್ ಕಾರ್ಯಕ್ರಮ ನಿರೂಪಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…