Advertisement
ಕಾರ್ಯಕ್ರಮಗಳು

ಚಂದ್ರಶೇಖರ ಪೇರಾಲಿಗೆ ಯೆನೆಪೊಯ ಶಿಕ್ಷಕ ಪ್ರಶಸ್ತಿ

Share

ಮಂಗಳೂರು: ಯೆನೆಪೊಯ ಸಮೂಹ ಸಂಸ್ಥೆಗಳ ಸಂಸ್ಥಾಪಕ ದಿವಂಗತ ಯೆನೆಪೊಯ ಮೊಹಿಯುದ್ದೀನ್ ಕುಂಞಿ ಸ್ಮರಣಾರ್ಥ ಸಂಸ್ಥೆಯ ಸಂಸ್ಥಾಪಕರ ದಿನವಾದ ನ.14ರಂದು ನೀಡಲಾಗುವ ಪ್ರಸಕ್ತ ಸಾಲಿನ ಯೆನೆಪೊಯ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಯೆನೆಪೊಯ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು.

ಶಿಕ್ಷಣ ಕ್ಷೇತ್ರದಲ್ಲಿ ಸರಕಾರಿ ಶಾಲೆಗಳ ಮೂಲಕ ಉನ್ನತ ಸಾಧನೆಗೈದ ಶಿಕ್ಷಕರಿಗೆ ನೀಡಲಾಗುವ ಈ ಪ್ರಶಸ್ತಿಯನ್ನು ಪ್ರೌಢಶಾಲಾ ವಿಭಾಗದಲ್ಲಿ ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಚಂದ್ರಶೇಖರ ಪೇರಾಲು ಹಾಗೂ ಪ್ರಾಥಮಿಕ ವಿಭಾಗದಲ್ಲಿ ಬೈಲು ಪ್ರಾಥಮಿಕ ಶಾಲಾ ಶಿಕ್ಷಕ ಎಡ್ವರ್ಡ್ ಡಿಸೋಜರಿಗೆ ಅವರಿಗೆ ಪ್ರದಾನ ಮಾಡಲಾಯಿತು. ನಗದು ಹಾಗು ಫಲಕ ಒಳಗೊಂಡ ಪ್ರಶಸ್ತಿಯನ್ನು ಯೆನೆಪೊಯ (ಪರಿಗಣಿತ) ವಿವಿ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಚಂದ್ರಶೇಖರ ಪೇರಾಲು, ನಾನು ಬಾಲ್ಯದಲ್ಲಿ 10 ಕಿ.ಮೀ. ದೂರ ಕಾಲ್ನಡಿಗೆಯಲ್ಲಿ ಹೋಗಿ ಸುಳ್ಯದ ಕುಗ್ರಾಮ ವೊಂದರಲ್ಲಿರುವ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದೇನೆ. ಗ್ರಾಮೀಣ ಶಾಲೆಗಳ ಮಕ್ಕಳ ಬಡತನ ಕಂಡು ಅವರಿಗೆ ಏನಾದರೂ ಸಹಾಯ ಮಾಡಬೇಕೆಂದು ನಿರ್ಧರಿಸಿ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸತೊಡಗಿದ್ದೇನೆಶಾಲೆಯಲ್ಲಿ, ಸರಕಾರಿ ಕಚೇರಿಯಲ್ಲಿ ಉತ್ತಮ ವಾತಾವರಣವನ್ನು, ಆಕರ್ಷಕ ಗೊಳಿಸುವ ಕೆಲಸವನ್ನು ಮಾಡಿದ್ದೇನೆ. ವಿದ್ಯಾರ್ಥಿಗಳಿಗೆ ಶಿಕ್ಷಕರು ಉತ್ತಮ ಪ್ರೇರಕರು, ಮಾರ್ಗದರ್ಶಿಗಳು ಆಗಿರಬೇಕು ಎಂದರು.

ಎಡ್ವರ್ಡ್ ಡಿಸೋಜ ಮಾತನಾಡಿ, ಬೆಳ್ತಂಗಡಿಯ ಶಾಲೆಯಲ್ಲಿ ಕಾಣಿಕೆ ಡಬ್ಬಿ ಇಟ್ಟು ಸಂಗ್ರಹವಾದ ಹಣದಿಂದ ಶಾಲೆಯ ಅಭಿವೃದ್ಧಿ ಮಾಡಿದ ತೃಪ್ತಿ ಇದೆ ಎಂದರು. ವೈಎಂಕೆ ಸ್ಮಾರಕ ಉಪನ್ಯಾಸ ನೀಡಿದ ಮಂಗಳೂರು ಮೀನುಗಾರಿಕಾ ಕಾಲೇಜಿನ ಮಾಜಿ ಡೀನ್ ಎಸ್.ಎಂ.ಶಿವಪ್ರಕಾಶ್, ವಿದ್ಯಾರ್ಥಿಗಳು ನಿರಂತರ ಕ್ರಿಯಾಶೀಲತೆಯೊಂದಿಗೆ ನಿರಂತರ ಕಲಿಕೆಯೊಂದು ಸ್ವಯಂಸ್ಫೂರ್ತಿ ಪಡೆದುಕೊಳ್ಳಬೇಕು ಎಂದರು.

ಸಮಾರಂಭದಲ್ಲಿ ಯೆನೆಪೊಯ ವಿವಿ ಸಹ ಕುಲಪತಿ ಫರ್ಹಾದ್ ಯೆನೆಪೊಯ, ಯೆನೆಪೊಯ ಪಪೂ ಕಾಲೇಜಿನ ಪ್ರಾಂಶುಪಾಲ ಜೋಸೆಫ್ ಮಚಿರಾತ್, ಶಾಲಾ ಕ್ಯಾಂಪಸ್ ನಿರ್ದೇಶಕಿ ಮಿಶ್ರಿಯಾ ಜಾವೆದ್, ಶಾಲಾ ಉಪ ಪ್ರಾಂಶುಪಾಲ ರೇಶ್ಮಾ ನಾಯಕ್, ಯೆನೆಪೊಯ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯೆ ನಸ್ರೀನಾ ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ಅನಿಲ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

4 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

5 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago