Advertisement
ಕಾರ್ಯಕ್ರಮಗಳು

ಚಂದ್ರಶೇಖರ ಪೇರಾಲಿಗೆ ಯೆನೆಪೊಯ ಶಿಕ್ಷಕ ಪ್ರಶಸ್ತಿ

Share

ಮಂಗಳೂರು: ಯೆನೆಪೊಯ ಸಮೂಹ ಸಂಸ್ಥೆಗಳ ಸಂಸ್ಥಾಪಕ ದಿವಂಗತ ಯೆನೆಪೊಯ ಮೊಹಿಯುದ್ದೀನ್ ಕುಂಞಿ ಸ್ಮರಣಾರ್ಥ ಸಂಸ್ಥೆಯ ಸಂಸ್ಥಾಪಕರ ದಿನವಾದ ನ.14ರಂದು ನೀಡಲಾಗುವ ಪ್ರಸಕ್ತ ಸಾಲಿನ ಯೆನೆಪೊಯ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಯೆನೆಪೊಯ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು.

ಶಿಕ್ಷಣ ಕ್ಷೇತ್ರದಲ್ಲಿ ಸರಕಾರಿ ಶಾಲೆಗಳ ಮೂಲಕ ಉನ್ನತ ಸಾಧನೆಗೈದ ಶಿಕ್ಷಕರಿಗೆ ನೀಡಲಾಗುವ ಈ ಪ್ರಶಸ್ತಿಯನ್ನು ಪ್ರೌಢಶಾಲಾ ವಿಭಾಗದಲ್ಲಿ ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಚಂದ್ರಶೇಖರ ಪೇರಾಲು ಹಾಗೂ ಪ್ರಾಥಮಿಕ ವಿಭಾಗದಲ್ಲಿ ಬೈಲು ಪ್ರಾಥಮಿಕ ಶಾಲಾ ಶಿಕ್ಷಕ ಎಡ್ವರ್ಡ್ ಡಿಸೋಜರಿಗೆ ಅವರಿಗೆ ಪ್ರದಾನ ಮಾಡಲಾಯಿತು. ನಗದು ಹಾಗು ಫಲಕ ಒಳಗೊಂಡ ಪ್ರಶಸ್ತಿಯನ್ನು ಯೆನೆಪೊಯ (ಪರಿಗಣಿತ) ವಿವಿ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಚಂದ್ರಶೇಖರ ಪೇರಾಲು, ನಾನು ಬಾಲ್ಯದಲ್ಲಿ 10 ಕಿ.ಮೀ. ದೂರ ಕಾಲ್ನಡಿಗೆಯಲ್ಲಿ ಹೋಗಿ ಸುಳ್ಯದ ಕುಗ್ರಾಮ ವೊಂದರಲ್ಲಿರುವ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದೇನೆ. ಗ್ರಾಮೀಣ ಶಾಲೆಗಳ ಮಕ್ಕಳ ಬಡತನ ಕಂಡು ಅವರಿಗೆ ಏನಾದರೂ ಸಹಾಯ ಮಾಡಬೇಕೆಂದು ನಿರ್ಧರಿಸಿ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸತೊಡಗಿದ್ದೇನೆಶಾಲೆಯಲ್ಲಿ, ಸರಕಾರಿ ಕಚೇರಿಯಲ್ಲಿ ಉತ್ತಮ ವಾತಾವರಣವನ್ನು, ಆಕರ್ಷಕ ಗೊಳಿಸುವ ಕೆಲಸವನ್ನು ಮಾಡಿದ್ದೇನೆ. ವಿದ್ಯಾರ್ಥಿಗಳಿಗೆ ಶಿಕ್ಷಕರು ಉತ್ತಮ ಪ್ರೇರಕರು, ಮಾರ್ಗದರ್ಶಿಗಳು ಆಗಿರಬೇಕು ಎಂದರು.

ಎಡ್ವರ್ಡ್ ಡಿಸೋಜ ಮಾತನಾಡಿ, ಬೆಳ್ತಂಗಡಿಯ ಶಾಲೆಯಲ್ಲಿ ಕಾಣಿಕೆ ಡಬ್ಬಿ ಇಟ್ಟು ಸಂಗ್ರಹವಾದ ಹಣದಿಂದ ಶಾಲೆಯ ಅಭಿವೃದ್ಧಿ ಮಾಡಿದ ತೃಪ್ತಿ ಇದೆ ಎಂದರು. ವೈಎಂಕೆ ಸ್ಮಾರಕ ಉಪನ್ಯಾಸ ನೀಡಿದ ಮಂಗಳೂರು ಮೀನುಗಾರಿಕಾ ಕಾಲೇಜಿನ ಮಾಜಿ ಡೀನ್ ಎಸ್.ಎಂ.ಶಿವಪ್ರಕಾಶ್, ವಿದ್ಯಾರ್ಥಿಗಳು ನಿರಂತರ ಕ್ರಿಯಾಶೀಲತೆಯೊಂದಿಗೆ ನಿರಂತರ ಕಲಿಕೆಯೊಂದು ಸ್ವಯಂಸ್ಫೂರ್ತಿ ಪಡೆದುಕೊಳ್ಳಬೇಕು ಎಂದರು.

ಸಮಾರಂಭದಲ್ಲಿ ಯೆನೆಪೊಯ ವಿವಿ ಸಹ ಕುಲಪತಿ ಫರ್ಹಾದ್ ಯೆನೆಪೊಯ, ಯೆನೆಪೊಯ ಪಪೂ ಕಾಲೇಜಿನ ಪ್ರಾಂಶುಪಾಲ ಜೋಸೆಫ್ ಮಚಿರಾತ್, ಶಾಲಾ ಕ್ಯಾಂಪಸ್ ನಿರ್ದೇಶಕಿ ಮಿಶ್ರಿಯಾ ಜಾವೆದ್, ಶಾಲಾ ಉಪ ಪ್ರಾಂಶುಪಾಲ ರೇಶ್ಮಾ ನಾಯಕ್, ಯೆನೆಪೊಯ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯೆ ನಸ್ರೀನಾ ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ಅನಿಲ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

21 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago