Advertisement
ಕಾರ್ಯಕ್ರಮಗಳು

ಚಂದ್ರಶೇಖರ ಪೇರಾಲಿಗೆ ಯೆನೆಪೊಯ ಶಿಕ್ಷಕ ಪ್ರಶಸ್ತಿ

Share

ಮಂಗಳೂರು: ಯೆನೆಪೊಯ ಸಮೂಹ ಸಂಸ್ಥೆಗಳ ಸಂಸ್ಥಾಪಕ ದಿವಂಗತ ಯೆನೆಪೊಯ ಮೊಹಿಯುದ್ದೀನ್ ಕುಂಞಿ ಸ್ಮರಣಾರ್ಥ ಸಂಸ್ಥೆಯ ಸಂಸ್ಥಾಪಕರ ದಿನವಾದ ನ.14ರಂದು ನೀಡಲಾಗುವ ಪ್ರಸಕ್ತ ಸಾಲಿನ ಯೆನೆಪೊಯ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಯೆನೆಪೊಯ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು.

Advertisement
Advertisement

Advertisement

ಶಿಕ್ಷಣ ಕ್ಷೇತ್ರದಲ್ಲಿ ಸರಕಾರಿ ಶಾಲೆಗಳ ಮೂಲಕ ಉನ್ನತ ಸಾಧನೆಗೈದ ಶಿಕ್ಷಕರಿಗೆ ನೀಡಲಾಗುವ ಈ ಪ್ರಶಸ್ತಿಯನ್ನು ಪ್ರೌಢಶಾಲಾ ವಿಭಾಗದಲ್ಲಿ ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಚಂದ್ರಶೇಖರ ಪೇರಾಲು ಹಾಗೂ ಪ್ರಾಥಮಿಕ ವಿಭಾಗದಲ್ಲಿ ಬೈಲು ಪ್ರಾಥಮಿಕ ಶಾಲಾ ಶಿಕ್ಷಕ ಎಡ್ವರ್ಡ್ ಡಿಸೋಜರಿಗೆ ಅವರಿಗೆ ಪ್ರದಾನ ಮಾಡಲಾಯಿತು. ನಗದು ಹಾಗು ಫಲಕ ಒಳಗೊಂಡ ಪ್ರಶಸ್ತಿಯನ್ನು ಯೆನೆಪೊಯ (ಪರಿಗಣಿತ) ವಿವಿ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಚಂದ್ರಶೇಖರ ಪೇರಾಲು, ನಾನು ಬಾಲ್ಯದಲ್ಲಿ 10 ಕಿ.ಮೀ. ದೂರ ಕಾಲ್ನಡಿಗೆಯಲ್ಲಿ ಹೋಗಿ ಸುಳ್ಯದ ಕುಗ್ರಾಮ ವೊಂದರಲ್ಲಿರುವ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದೇನೆ. ಗ್ರಾಮೀಣ ಶಾಲೆಗಳ ಮಕ್ಕಳ ಬಡತನ ಕಂಡು ಅವರಿಗೆ ಏನಾದರೂ ಸಹಾಯ ಮಾಡಬೇಕೆಂದು ನಿರ್ಧರಿಸಿ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸತೊಡಗಿದ್ದೇನೆಶಾಲೆಯಲ್ಲಿ, ಸರಕಾರಿ ಕಚೇರಿಯಲ್ಲಿ ಉತ್ತಮ ವಾತಾವರಣವನ್ನು, ಆಕರ್ಷಕ ಗೊಳಿಸುವ ಕೆಲಸವನ್ನು ಮಾಡಿದ್ದೇನೆ. ವಿದ್ಯಾರ್ಥಿಗಳಿಗೆ ಶಿಕ್ಷಕರು ಉತ್ತಮ ಪ್ರೇರಕರು, ಮಾರ್ಗದರ್ಶಿಗಳು ಆಗಿರಬೇಕು ಎಂದರು.

Advertisement

ಎಡ್ವರ್ಡ್ ಡಿಸೋಜ ಮಾತನಾಡಿ, ಬೆಳ್ತಂಗಡಿಯ ಶಾಲೆಯಲ್ಲಿ ಕಾಣಿಕೆ ಡಬ್ಬಿ ಇಟ್ಟು ಸಂಗ್ರಹವಾದ ಹಣದಿಂದ ಶಾಲೆಯ ಅಭಿವೃದ್ಧಿ ಮಾಡಿದ ತೃಪ್ತಿ ಇದೆ ಎಂದರು. ವೈಎಂಕೆ ಸ್ಮಾರಕ ಉಪನ್ಯಾಸ ನೀಡಿದ ಮಂಗಳೂರು ಮೀನುಗಾರಿಕಾ ಕಾಲೇಜಿನ ಮಾಜಿ ಡೀನ್ ಎಸ್.ಎಂ.ಶಿವಪ್ರಕಾಶ್, ವಿದ್ಯಾರ್ಥಿಗಳು ನಿರಂತರ ಕ್ರಿಯಾಶೀಲತೆಯೊಂದಿಗೆ ನಿರಂತರ ಕಲಿಕೆಯೊಂದು ಸ್ವಯಂಸ್ಫೂರ್ತಿ ಪಡೆದುಕೊಳ್ಳಬೇಕು ಎಂದರು.

ಸಮಾರಂಭದಲ್ಲಿ ಯೆನೆಪೊಯ ವಿವಿ ಸಹ ಕುಲಪತಿ ಫರ್ಹಾದ್ ಯೆನೆಪೊಯ, ಯೆನೆಪೊಯ ಪಪೂ ಕಾಲೇಜಿನ ಪ್ರಾಂಶುಪಾಲ ಜೋಸೆಫ್ ಮಚಿರಾತ್, ಶಾಲಾ ಕ್ಯಾಂಪಸ್ ನಿರ್ದೇಶಕಿ ಮಿಶ್ರಿಯಾ ಜಾವೆದ್, ಶಾಲಾ ಉಪ ಪ್ರಾಂಶುಪಾಲ ರೇಶ್ಮಾ ನಾಯಕ್, ಯೆನೆಪೊಯ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯೆ ನಸ್ರೀನಾ ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ಅನಿಲ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

8 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

9 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

9 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

9 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

12 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

14 hours ago